Advertisement

Tag: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ

ರೀಲ್ಸ್‌ನಲ್ಲಿ ತೋರಿಸಿದ ಹಾಗೆ ಎರಡು ದಿನಗಳಲ್ಲಿ ಅದರಲ್ಲಿ ಸೃಷ್ಟಿಯ ಕುರುಹುಗಳು ಕಂಡುಬರಬೇಕಿತ್ತು. ದಿನ ಎರಡಾಯಿತು ಮೂರಾಯಿತು ಬೀಜ ಕದಲಲಿಲ್ಲ. ಬೀಜಗಳನ್ನು ಹೊರತೆಗೆದು ಕೈಯಲ್ಲಿಟ್ಟು ನೋಡಿದ. ತಿರುಗಿಸಿ ತಿರುಗಿಸಿ ನೋಡಿದರೂ ಬೀಜ ನಿಸ್ತೇಜವಾಗಿ ಬಿದ್ದುಕೊಂಡಿತ್ತು. ಅದು ಮೊಳಕೆಯೊಡೆಯುವ ಯಾವ ಮನಸ್ಸನ್ನೂ ಮಾಡಲಿಲ್ಲ. ಮೊದಮೊದಲು ಧ್ರುವನ ಈ ತಳಮಳವನ್ನು ನೋಡಿ ನಾನು ಜೋರಾಗಿ ನಗುತ್ತಿದ್ದೆ. ಮೊದಲೇ ಹೇಳಿದ್ದೆ ನಿಂಗೆ ಇದು ವರ್ಕ್ ಔಟ್ ಆಗಲ್ಲ ಅಂತ. ಸುಮ್ನೆ ಟೈಮ್ ವೇಸ್ಟ್. ರೀಲ್ಸ್‌ನಲ್ಲಿ ಸುಮ್ನೆ ತೋರಿಸಿ ನಮ್ಮನ್ನು ಮಂಗ ಮಾಡ್ತಾರೆ.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ”

ಅರೆ! ಎಲ್ಲರೂ ಅವರವರ ಕೆಲಸಗಳಲ್ಲಿಯೇ ಕಳೆದುಹೋಗಿದ್ದಾರೆ ಇಲ್ಲಿ. ಯಾರಿಗೂ ಹೊರಗಡೆ ಏನು ನಡೆಯುತ್ತಿದೆ ಅನ್ನುವುದರ ಪರಿವೇ ಇಲ್ಲ. ಅದರ ಅಗತ್ಯವೇ ಇಲ್ಲ ಅನ್ನುವಷ್ಟೂ ಕ್ಷುಲ್ಲಕ ಸಂಗತಿಗಳೆ ಅವೆಲ್ಲಾ? ರಸ್ತೆಯ ತುಂಬಾ ಬದುಕಿನ ನಿತ್ಯ ವ್ಯಾಪಾರ ಅದೆಷ್ಟು ಸಹಜ ಅನ್ನುವ ರೀತಿಯಲ್ಲಿ ನಡೆಯುತ್ತಿದೆ. ಪಕ್ಕದಲ್ಲಿ ಬಾಂಬ್ ಬಿದ್ದರೂ ನಮ್ಮ ಮನಗೆ ಬಿದ್ದಿಲ್ಲ ತಾನೇ ಅನ್ನುವ ಹಾಗೆ ತಮ್ಮತಮ್ಮ ಕೆಲಸಗಳಲ್ಲಿ ತೊಡಗುತ್ತಾರಂದ್ರೆ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ” ನಿಮ್ಮ ಓದಿಗೆ

Read More

ಕಾವ್ಯಕುತೂಹಲ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಕೆಲವು ಸಾಲುಗಳು ಹುಟ್ಟಿಸುವ ಬೆರಗು ಮಾತ್ರ ಸಾಕು ಒಂದೀಡಿ ಕವಿತೆಯನ್ನು ಓದಲು. ಬಿಡಿಬಿಡಿಯಾಗಿ ಎದೆಹೊಕ್ಕುವ ಸಾಲುಗಳು ಮತ್ತೆಂದೋ ಯಾವುದೋ ಅನುಭವದಲ್ಲಿ ಯಾರದ್ದೋ ಸಾನಿಧ್ಯದಲ್ಲಿ ಪೂರ್ಣಗೊಳ್ಳುತ್ತವೆ. ಅವಳಲ್ಲಿ ಬಿಡಿಬಿಡಿಯಾಗಿದ್ದ ಹೂಗಳು ಅವನು ಸಿಕ್ಕಿದಾಗ ಮಾಲೆಯಾಗುವ ಸೋಜಿಗದಂತೆ! ಬಿಡಿಸಲಾಗದ ಅಚ್ಚರಿ ಇದು. ಅಚ್ಚರಿಯೇ ಪ್ರೇಮ. ಅದೇ ಕವಿತೆ.
ಕಾವ್ಯದ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ

Read More

ಓ ಲಕ್ಷ್ಮಣಾ… ಓ ಲಕ್ಷ್ಮಣಾ…

ಇದು ಮಾಯೆ, ಇದಕ್ಕೆ ಬಲಿಬೀಳಬಾರದು ಅನ್ನುವ ಎಚ್ಚರದಲ್ಲಿ ಲಕ್ಷ್ಮಣ ಇದ್ದ. ಹೇಳಿಯೂ ಹೇಳಿದ. ಆದರೆ ಸೀತೆಯನ್ನು ಆಗಲೇ ಮಾಯೆ ಮುಸುಕಿತ್ತು. ಸತ್ಯಾಸತ್ಯದ ವಿವೇಕ ಮರೆಯಾಗಿತ್ತು. ರಾಮನನ್ನು ಕಳುಹಿಸಿದಳು. ಇಬ್ಬರು ಮಾಯೆಯ ಪ್ರಭಾವಕ್ಕೆ ಒಳಗಾದ ವ್ಯಕ್ತಿಗಳ ನಡುವೆ ಅದರಿಂದ ಹೊರತಾಗಿ ಉಳಿದ ಲಕ್ಷ್ಮಣ ಅಸಹಾಯಕತೆ, ಆರ್ತತೆ, ಬಳಲಿಕೆಯನ್ನು ತೋರ್ಪಡಿಸುವ ಒಂದು ಪ್ರತಿಮೆಯಾಗಿ ಅದ್ಭುತ ಪದವಾಗಿ, ಓ ಲಕ್ಷ್ಮಣಾ ಓ ಲಕ್ಷ್ಮಣಾ ಅನ್ನುವ ಒಂದು ಕೂಗು ಈ ಇಡೀ ಪ್ರಸಂಗದಲ್ಲಿ ಮತ್ತೆ ಮತ್ತೆ ಅನುರಣಿಸುತ್ತದೆ. ಕಾಡುತ್ತದೆ.
ಕುವೆಂಪುರವರ ಶ್ರೀ ರಾಮಾಯಣ ದರ್ಶನಂ ಕೃತಿಯ ಒಂದು ಭಾಗದ ಕುರಿತು ಬರೆದಿದ್ದಾರೆ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

Read More

ಸುರಿವ ಮಳೆಯಲ್ಲಿ ಅಪ್ಪ ಮತ್ತು ನಾನು

ಈ ಯೂರಿಯಾ ಹಾಕುವ ದಿನಗಳಲ್ಲಿ ಗದ್ದೆಗಳನ್ನು ಬಹಳ ಜಾಗುರೂಕತೆಯಿಂದ ಕಾವಲು ಕಾಯಬೇಕಾಗುತ್ತದೆ. ಆ ದಿನ ಮಳೆ ಬಂದರೆ ಎಲ್ಲವೂ ಹರಿದು ಹೋಗುವ ಭಯ ಒಂದು ಕಡೆಯಾದರೆ ಇನ್ನೊಂದು ಭಯವೂ ಇದೆ. ಸಂಜೆಯ ವೇಳೆಗೆ ಯೂರಿಯಾ ಹಾಕಿ ಹಾಗೆಯೇ ಹೋದರೆ ಮರುದಿನ ಬೆಳಗ್ಗೆ ಅದು ಬೇರೆ ಗದ್ದೆಯ ಪಾಲಾಗುವುದು ಹೆಚ್ಚು. ಕೆಳಗಿನ ಗದ್ದೆಗಳಿಗೆ ನೀರಿಲ್ಲ ಅಂತ ನೆಪ ಮಾಡಿ ನಮ್ಮ ಗದ್ದೆಯಿಂದ ಅವರ ಗದ್ದೆಗಳಿಗೆ ನೀರು ಹಾಯಿಸುವ ನೆಪದಲ್ಲಿ ಗದ್ದೆಯ ಬದು ಸ್ವಲ್ಪ ಸರಿಸಿದರೆ ಯೂರಿಯವೆಲ್ಲಾ ಆ ಗದ್ದೆಯ ಪಾಲು. ಉಳುಮೆಯ ಸುಖದುಃಖಗಳ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ಲೇಖನ  ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ