Advertisement

Tag: ರಾಜಲಕ್ಷ್ಮಿ ಎನ್. ರಾವ್

ಹೂದೋಟದ ಹೂಗಳಂಥಾ “ಸಂಗಮ”

‘ಸಂಗಮ’ ಕಥಾ ಸಂಕಲನದಲ್ಲಿ ನನಗೆ ಬಹಳ ಇಷ್ಟವಾಗಿದ್ದು ಕತೆಗಳಿಗೆ ಆಯ್ದುಕೊಂಡಿರುವ ಶೀರ್ಷಿಕೆಗಳು. ಓದಿದ ತಕ್ಷಣ ಕತೆಯ ಬಗ್ಗೆ ಯಾವ ತರಹದ ಸುಳಿವನ್ನೂ ಬಿಟ್ಟು ಕೊಡುವುದಿಲ್ಲ ಅವು. ಆ ಶೀರ್ಷಿಕೆ ಯಾಕೆ ಎಂದು ತಿಳಿಯಬೇಕಿದ್ದರೆ ನೀವು ಇಡೀ ಕತೆಯನ್ನು ಓದಬೇಕು. ಉದಾಹರಣೆಗೆ ಎರಡನೇಯ ಕತೆ ‘ಮೈ ದಾಸ್’ ಅನ್ನೇ ತೆಗೆದುಕೊಳ್ಳಿ. ಊಹುಂ.. ನೀವು ಗೆಸ್ ಮಾಡಲಿಕ್ಕೆ ಸಾಧ್ಯವೇ ಇಲ್ಲ. ಮುಟ್ಟಿದೆಲ್ಲವೂ ಚಿನ್ನ ಎಂಬ ಗಾದೆ ಮಾತಿದೆಯಲ್ವ.. ಅದನ್ನು ನಿಜವಾಗಿಯೂ ಸಾಧ್ಯವಾಗಿಸಲು ಯತ್ನಿಸುವ ವೈಜ್ಞಾನಿಕ ಸಂಶೋಧಕನ ಕತೆ.
ರಾಜಲಕ್ಷ್ಮಿ ಎನ್.‌ ರಾವ್‌ ಅವರ “ಸಂಗಮ” ಕಥಾಸಂಕಲನದ ಕುರಿತು ಸಂಜೋತಾ ಪುರೋಹಿತ್‌ ಬರಹ

Read More

ಕಿನ್ನರಿ…

ಯಾವ ಪ್ರಚಾರವನ್ನೂ ಒಲ್ಲದ ತಮ್ಮ ಪಾಡಿಗೆ ತಾವಿರುವ ಈ ತಪಸ್ವಿನಿ ತಮ್ಮ ಪೂರ್ವಾಶ್ರಮದಲ್ಲಿ ಒಬ್ಬ ಶ್ರೇಷ್ಠ ಸಾಹಿತಿಯೂ ಆಗಿದ್ದರು. ನಾನು ಇವರ ಅದ್ಭುತ ವ್ಯಕ್ತಿತ್ವದ ಬಗ್ಗೆ ಬರೆದ ಒಂದು ಲೇಖನ ಇವರಿಗೆ ಮುಜುಗರ ತಂದಿತ್ತು. ಅಸಮಾಧಾನಕ್ಕೆ ಕಾರಣವಾಗಿತ್ತು. ಇಂತಹವರನ್ನು ಭೇಟಿ ಮಾಡಿಸಬೇಕೆಂದೂ ಅವರ ಸಮ್ಮುಖದಲ್ಲಿ ಒಂದು ಪತ್ರಿಕಾ ಸಭೆಯನ್ನು ಕರೆಯಬೇಕೆಂದೂ ನನ್ನ ಪರಿಚಯದ ಸಾಹಿತಿಯೊಬ್ಬರು ನನಗೆ ಬಹಳ ದಿನಗಳಿಂದ ದುಂಬಾಲು ಬಿದ್ದಿದ್ದರು. ಯಾರಿಗೂ ತಿಳಿಯದಂತೆ ಅಜ್ಞಾತವಾಗಿ ಬದುಕುತ್ತಿರುವ ಇವರನ್ನು ನಾನು ಒಮ್ಮೆ ಭೇಟಿಯಾಗಿ ಬಂದಿದ್ದುದೇ ಇದಕ್ಕೆ ಕಾರಣವಾಗಿತ್ತು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿ

Read More

ಕರುಣಾಳು ಬಾ ಬೆಳಕೆ…

ಅಂಗಳದಲ್ಲಿ ಯಾರೂ ಕಾಣಲಿಲ್ಲ. ಅಲ್ಲಿ ಯಾವ ಮರ್ಸಿಡಿಸ್, ಬೆನ್ಝ್ ಕಾರುಗಳೂ ನಿಂತಿರಲಿಲ್ಲ. ಭಕ್ತಾದಿಗಳ ಜನಜಂಗುಳಿ ಇರಲಿಲ್ಲ. ಝಗ ಝಗಿಸುವ ದೀಪಾಲಂಕೃತ ವೇದಿಕೆ, ಮೆತ್ತನೆಯ ಗಾದಿ ಯಾವುದೂ ಇರಲಿಲ್ಲ. ಇದ್ದುದೆಲ್ಲ ಕೇವಲ ನೀರವತೆ. ಒಳಗೆ ಯಾವುದೋ ಕೋಣೆಯೊಳಗಿಂದ ಬೆಳಕು ಕಾಣುತ್ತಿತ್ತು. ಆ ಕೋಣೆಯ ಕಿಟಕಿಯ ಬಳಿ ನಿಂತೆವು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿಯಲ್ಲಿ ಹೊಸ ಬರಹ

Read More

“ಆ ಕಾಲದ ರಾಜಲಕ್ಷ್ಮಿ…” ಸರಣಿ ಆರಂಭ

ರಾಜಲಕ್ಷ್ಮಿ ಎನ್. ರಾವ್ ಅವರನ್ನು ಅವರ ಕತೆಗಳ ಮೂಲಕ ಪರಿಚಯ ಮಾಡಿಕೊಂಡು ಸುಮಾರು ಮೂವತ್ತು ವರುಷಗಳ ಮೇಲಾಯಿತು. ನನ್ನ ಅಧ್ಯಯನ ಮತ್ತು ವೆಂಕಟಲಕ್ಷ್ಮಿಯವರ ಸಂದರ್ಶನದ ಒಟ್ಟು‌ ಮೊತ್ತವಾಗಿ ನಾನು ಕಂಡುಕೊಂಡ ಕತೆಗಾರ್ತಿ ರಾಜಲಕ್ಷ್ಮಿಯವರು ಬೆರಗು ಹುಟ್ಟಿಸಿದರು. ಸುಮಾರು ಹತ್ತು ಹನ್ನೆರೆಡು ವರ್ಷಗಳ ಹಿಂದೆ ಸನ್ಯಾಸಿನಿಯಾದ ಅವರನ್ನು ನಾನು ಅವರ ಆಶ್ರಮದಲ್ಲಿ ಭೇಟಿಯಾದಾಗ ಆ ಬೆರಗು ಬೆಳಕಾಗಿ ನನ್ನ ಮುಂದೆ ನಿಂತಿತ್ತು. ಆ ಬೆಳಕು ಈಗ ವಿಸ್ಮಯವಾಗಿದೆ.
ಗಿರಿಜಾ ಶಾಸ್ತ್ರಿ ಬರೆಯುವ ಸರಣಿ “ಆ ಕಾಲದ ರಾಜಲಕ್ಷ್ಮಿ” ಪ್ರತಿ ಶುಕ್ರವಾರದಂದು ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ