Advertisement

Tag: ರಾಜೇಂದ್ರ ಚೆನ್ನಿ

ನೀಲಾಕಾಶದ ನಿಹಾರಿಕೆಗಳ ನೋವು ತಿಳಿದಿರಲಿ…

ಚಾಂದ್ ಪಾಷಾರಿಗೆ ಇರುವ ಸವಾಲೆಂದರೆ ಒಂದು mood ಅಥವಾ ಒಂದು ಹೊಳಹನ್ನು ಎಷ್ಟು ಸಶಕ್ತವಾಗಿ ಹೇಳಬಲ್ಲರೋ ಅದೇ ಸಾಮರ್ಥ್ಯವನ್ನು ಸಂಕೀರ್ಣ ವಸ್ತುವಿನ ನಿರ್ವಹಣೆಯಲ್ಲಿಯೂ ಸಾಧಿಸಬೇಕಾಗುತ್ತದೆ. ಹೇಳಿದ್ದನ್ನು ಚುರುಕಾಗಿ, ಪ್ರಭಾವಿಯಾಗಿ ಹೇಳುವುದು ಎಷ್ಟು ಮುಖ್ಯವೋ ಕಾವ್ಯದಲ್ಲಿ ಒಂದು ಅನುಭವವನ್ನು ಸಾಂದ್ರವಾಗಿ ಗಂಭೀರ ಚಿಂತನೆಯೊಂದಿಗೆ ಅಭಿವ್ಯಕ್ತಿಸುವುದು ಅಷ್ಟೇ ಮುಖ್ಯ. ಈ ಹಿಂದಿನ ಸಂಕಲನಗಳಲ್ಲಿ ಮತ್ತು ಪ್ರಸ್ತುತ ಕೃತಿಯಲ್ಲಿ ಈ ಸಾಮರ್ಥ್ಯದ ಝಲಕುಗಳನ್ನು ಚಾಂದ್‌ ಪಾಷಾ ತೋರಿದ್ದಾರೆ.
ಚಾಂದ್‌ ಪಾಷ ಎನ್.ಎಸ್. ಕವನ ಸಂಕಲನ “ಒದ್ದೆಗಣ್ಣಿನ ದೀಪ”ಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಪೂರ್ವಕ್ಕೆ ಒಂದು ಅಪೂರ್ವ ಪಯಣ

ನಿಡಿತವಾದ ಕತೆಯ ಹಂದರವಿರುವ ಈ ಕೃತಿಯು ಒಂದು ತಾತ್ವಿಕ ಪ್ರಬಂಧದ ಹಾಗೆಯೆ ಇದೆ. ಅದು ಎತ್ತುವ ಬಹುಮುಖ್ಯ ಪ್ರಶ್ನೆಗಳು ಚರಿತ್ರೆ, ಬರಹ, ಆತ್ಮ ಜಿಜ್ಞಾಸೆ ಇವುಗಳಿಗೆ ಸಂಬಂಧಪಟ್ಟಿವೆ. ಸಂಘ, ಪಯಣ ಇವೆಲ್ಲವು ನಾವು ಕಟ್ಟಿಕೊಳ್ಳುವ ರಚನೆಗಳಲ್ಲವೆ? ಎಲ್ಲರಿಗೂ ಸ್ವಂತದ ಉದ್ದೇಶವಿರುವುದಾದರೆ ಪಯಣಕ್ಕೆ ಇರುವ ಉದ್ದೇಶವೇನು? ಸಂಘವೆಂದರೆ ಏನು? ಕಟ್ಟಳೆಗಳು ಹೇಗೆ ರಚನೆಯಾಗುತ್ತವೆ? ನಿರೂಪಕನು ಸಂಘದ ನಿಯಮಗಳನ್ನು ಮುರಿದರೂ ಅವನಿಗೆ ಶಿಕ್ಷೆ ಇಲ್ಲ. ಅವನು ಹೇಳಲು ಹೊರಟಿರುವ ಕತೆಗೆ ಎಷ್ಟೊಂದು ಎಳೆಗಳಿವೆಯಲ್ಲ?
ಕೆ. ಪ್ರಭಾಕರನ್‌ ಅನುವಾದಿಸಿದ ಜರ್ಮನಿಯ ಹರ್ಮನ್‌ ಹೇಸ್‌ ಬರೆದ ಕಾದಂಬರಿ ‘ಪೂರ್ವದೆಡೆಗಿನ ಪಯಣ’ ಕೃತಿಗೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಎಸ್.‌ ದಿವಾಕರ್‌ ಕವನ ಸಂಕಲನಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

ಇಪ್ಪತ್ತನೆಯ ಶತಮಾನದಿಂದ ಹಿಂಸೆಯೇ ಸ್ಥಾಯಿಯಾಗಿ ಬದುಕೇ ಅಸಂಗತ, ಅಸಾಧ್ಯ ಸತ್ಯವಾಗಿ ಬಿಟ್ಟಿದೆ. ಇಂತಹದರಲ್ಲಿ ಕಾವ್ಯ ಏನು ಮಾಡಬೇಕು? ಉತ್ತರ ಕಾವ್ಯಕ್ಕೆ ಗೊತ್ತಿಲ್ಲ. ಕವಿ ಪ್ರಯತ್ನ, ಪ್ರಯೋಗ ಮಾಡುತ್ತಲೇ ಇರಬೇಕು. ನೋವಿನ, ಹಿಂಸೆಯ ಕ್ಷೋಭೆ, ಅಸ್ಥಿರತೆ ಅನಿಶ್ಚಿತತೆಗೆ ವಿರುದ್ಧವಾದ ಭಾಷೆಯ ಪಾರದರ್ಶಕತೆ, ಧ್ವನಿಗಳ ಲಯಗಾರಿಕೆ ಮತ್ತು ಬಿಂಬಗಳ ಖಚಿತತೆಯ ಮೂಲಕ ಹೇಳುವುದನ್ನು ಹೇಳಬೇಕು. ಅಸಹಜವಾದ ಅನುಭವವನ್ನು ಅಪಾರ ಸಹಜತೆಯ ಕಾವ್ಯಭಾಷೆಯನ್ನು ಶೋಧಿಸಿಕೊಂಡು ಬರೆಯಬೇಕು. ಇದನ್ನು ದಿವಾಕರರ ಕಾವ್ಯವು ಸಾಧಿಸಿದೆ. ಅವರ ಈ ಸಂಕಲನದ ಒಂದು ಕವಿತೆಯು ಪ್ರಾಸದ ಬಗ್ಗೆ ಇದೆ.
ಎಸ್.‌ ದಿವಾಕರ್‌ ಬರೆದ ವಿಧಾನಸಭೆಯಲ್ಲೊಂದು ಹಕ್ಕಿ ಕವನ ಸಂಕಲನಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ