Advertisement

Tag: ರಾಜೇಶ್ವರಿ ತೇಜಸ್ವಿ

ನೆನಪುಗಳ ಮೆರವಣಿಗೆಯಲ್ಲಿ ಸೂಕ್ಷ್ಮಮತಿ ತೇಜಸ್ವಿಯವರ ಕುತೂಹಲಗಳು

ನಾನು ಮೂಡಿಗೆರೆ ಸಂತೆಗೆ ಯಾವಾಗಲೋ ಒಂದೆರಡು ಸಲ ಹೋಗಿರುವೆನು. ಅದೂ ಈಶಾನ್ಯೆ ಸ್ಕೂಲಿಗೆ ಹತ್ತಿರವಿದೆಯೆಂದು. ‘ಫ್ರೆಶ್’ ತರಕಾರಿ ಸಿಕ್ಕುತ್ತೆಂದು. ಒಟ್ಟಿನಲ್ಲಿ ಒಂದು ತಿರುಗಾಟ ಅಂತ ಅಷ್ಟೆ. ಇವರಿಗೆ ಸಂತೆಗೆ ಹೋಗೋದು ಏನೇನೂ ಇಷ್ಟವಿರುತ್ತಿರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಸಂತೆಗೆ ಹೋಗಿ ಬರ್‍ತೀನಿ ಅಂತ ಒಂದು ಬ್ಯಾಗ್ ಹಿಡಿಕೊಂಡು ಹೋಗೋರು. ಅಲ್ಲಿ ಅದೆಂತೆಂಥ ಮೀನುಗಳು ಇರ್‍ತವೆ ಅಂತ! ನೋಡ್ತನೇ ಇರಬೇಕು! ಅನ್ನಿಸುತ್ತೆ ಅಂತಿದ್ರು. ಕಳೆದ ರಜೆಯಲ್ಲಿ ಮೊಮ್ಮಗಳು ಪುಟಾಣಿ ವಿಹಾ ಯಾರದೋ ಜೊತೆಯಲ್ಲಿ ಸಂತೆಗೆ ಹೋದವಳು ಅವಳೂ ಹಾಗೆ ‘ತ್ರಿಲ್’ ಆಗಿದ್ದಳಂತೆ. ಇಂದು ಪೂರ್ಣಚಂದ್ರ ತೇಜಸ್ವಿಯವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ರಾಜೇಶ್ವರಿ ತೇಜಸ್ವಿಯವರು ಹಂಚಿಕೊಂಡ ಕೆಲವು ನೆನಪುಗಳು ನಿಮ್ಮ ಓದಿಗೆ

Read More

ಯಂತ್ರವೂ, ರಿಪೇರಿ ಡ್ರೆಸ್ಸೂ…

ಒಂದು ಸಲ ಕವಿತಾ ಲಂಕೇಶ್ ಮತ್ತು ಗೌರಿ ಲಂಕೇಶ್ ಮನೆಗೆ ಬರುತ್ತೇವೆಂದು ತಿಳಿಸಿದರು. ಕಿರಗೂರಿನ ಗಯ್ಯಾಳಿಗಳು ಸಿನೆಮಾ ಮಾಡುವುದರ ಬಗ್ಗೆ ಮಾತಾಡಬೇಕೆಂದು. ಅವತ್ತು ನನ್ನ ಮಹಾರಾಜ ಮಿಕ್ಸಿ, ಕೆಲಸ ಮಾಡುತ್ತಿದ್ದಾಗ ಕರ್ಕಶ ಸದ್ದಿನೊಂದಿಗೆ ಗಕ್ಕನೆ ನಿಂತು ಹೋಯಿತು. ಮಹಡಿ ಮೇಲಿದ್ದ ಇವರಿಗೆ ಆ ಕರ್ಕಶ ಸದ್ದಿನಿಂದಲೇ ಗೊತ್ತಾಗಿತ್ತು ಎಲ್ಲ.  ಸರಿರಾತ್ರಿ ಹನ್ನೆರಡೂವರೆ ಗಂಟೆಗೆ ಕೆಳಗೆ ಬಂದು ಮಿಕ್ಸಿಯನ್ನು ಬಿಚ್ಚಿ ನೋಡಿದ್ದಾರೆ. ಬಳಿಕ  ಎಮರಿ ಪೇಪರ್ ನಲ್ಲಿ ತಿಕ್ಕಿ ಕ್ಲೀನ್ ಮಾಡಿ ಹಾಕಿದ್ರು.. ಅವರಿಗೆ ನನ್ನ ಮೇಲೆ ಪ್ರೀತಿ ಎನ್ನುವುದಕ್ಕಿಂತ ಯಂತ್ರದ ಬಗ್ಗೆ ಕುತೂಹಲ. ರಾಜೇಶ್ವರಿ ತೇಜಸ್ವಿ ಬರೆಯುವ ಮೂಡಿಗೆರೆ ಹ್ಯಾಂಡ್ ಪೋಸ್ಟ್. 

Read More

ಬೀಸುಕಲ್ಲು ಸಾಗಿಸಿದ ಕಥೆ

ಊಟ ಉಪಚಾರವಾದ ಮೇಲೆ ನಾನು ಶ್ರೀದೇವಿ ಜೊತೆ ಅಡುಗೆ ಮನೆ ಸೇರಿದೆ. ನೋಡ್ತೀನಿ ಬಿಸೋಕಲ್ಲು ಒಂದು ಸಿದ್ಧವಾಗಿದೆ! ಒಮ್ಮೆಗೇ ನಾವಿಬ್ಬರು ಮಿಂಚಿನ ಸಂಚಾರವಾದಂತೆ ಕಾರ್ಯಪ್ರವೃತ್ತರಾದೆವು. ಇಬ್ಬರಿಗೂ ಒಂದೇಸಲ ಒಟ್ಟಿಗೇ ಪರಿಸ್ಥಿತಿಯ ಬಗ್ಗೆ ಜ್ಞಾನೋದಯವಾಯಿತು. ತೇಜಸ್ವಿಗೆ ಕಲ್ಲು ಗೋಚರಿಸದಂತೆ ಗೊತ್ತಾಗದಂತೆ ನಮ್ಮ ಮನೆಗೆ ಸಾಗಿಸುವುದಾದರೂ ಹೇಗೆ. ಕೊನೆಗೊಂದು ಉಪಾಯ ಮಾಡಿದೆವು. 
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

ಕಾಲದ ಗಾಳಕ್ಕೆ ಸಿಕ್ಕ ಮೀನು

ಅವತ್ತು ಅಮ್ಮ, ಅಣ್ಣ ಮನೆಗೆ ಬಂದಾಗ, ತೇಜಸ್ವಿಯವರು ಮನೆಯ ಚಮಚೆ ಬಳಸಿ, ಸ್ಪಿನರ್ ತಯಾರಿಸಿದ ಬಗ್ಗೆ  ಸವಿವರವಾಗಿ ಹೇಳಿದೆ. ಅಮ್ಮ ಬೆಚ್ಚಿ ಬಿದ್ದರು. `ಅಲ್ಲೇ, ನೀನು ಕುವೆಂಪು ಎಂದು ಕೆತ್ತಿಸಿದ್ದ ಚಮಚ ಕೊಟ್ಟು ಬಿಟ್ಟೆಯಾ`?. ಈ ಚಮಚಗಳನ್ನು ಚಿತ್ರಕೂಟದ ಮನೆಗೆ ಒಕ್ಕಲು ಬರುವಾಗ ಕುವೆಂಪು ಹೆಸರು ಹಾಕಿಸಿ ಅಮ್ಮ ತಂದಿಟ್ಟವು. ಆಗ ನನ್ನ ಪಜೀತಿ ಏನೆಂದು ಹೇಳಲಿ. ಇವರು ಕೇಳಿದ ಮೇಲೆ ಕೊಡದೇ ಇರುವುದು ಹೇಗೆ ಸಾಧ್ಯ. ತಮಾಷೆಯಾಗಿದೆ ಅಲ್ವೆ. ಅಮ್ಮನಿಗೆ ಕುವೆಂಪು ಮುಖ್ಯ, ನನಗೆ ನನ್ನವರು ಮುಖ್ಯ.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

ನೂರಡಿ ರಸ್ತೆಯ ಸಾಹಸಗಳು

ಇಬ್ಬರು ಗೆಳೆಯರು ಸುಂದರೇಶ್ ಮುಂದೆ ಶ್ರೀರಾಂ ಹಿಂದೆ ರಸ್ತೆ ದಾಟುತ್ತಿರಬೇಕಾದರೆ ನಡುವಯಸ್ಸಿನ ಹೆಂಗಸೊಬ್ಬಳು ಬಂದು ಲಪ್ಪೆಂದು ಬಿಗಿಯಾಗಿ ಸುಂದರೇಶ್ ಕೈ ಹಿಡಿದಳು. ಇಬ್ಬರು ಗೆಳೆಯರು ಅನಿರೀಕ್ಷಿತ ನಡವಳಿಕೆಯಿಂದ ತತ್ತರಿಸಿದರು. ಆಗ ಶ್ರೀರಾಂ ಅಕ್ಷರಶಃ ಅವಳ ಕೈ ಕಿತ್ತು ಹಾಕಿ ನೋಡಿದರೆ ಸುಂದರೇಶ್ ಮುಖವೆಲ್ಲ ಕೆಂಪೇರಿ ಬೆವರುತ್ತಿದ್ದರಂತೆ. ಅಲ್ಲದೆ ಸರ ಸರನೆ ರಸ್ತೆ ದಾಟುತ್ತಿದ್ದಾರೆ ! ಇದಕ್ಕೂ ಮೀರಿ “ನನ್ನ ಮರೆತು ಬಿಟ್ರಾ ಅಣ್ಣಾ” ಎಂದು ಬೊಬ್ಬಿಡುತ್ತಾ ಓಡೋಡಿ ಬಂದು ಅವಳು ಸಮೀಪಿಸುತ್ತಿದ್ದಾಳೆ. ಇದೇನೋ ವಿಚಿತ್ರ ಪ್ರಸಂಗವಿರಬೇಕೆಂದು ಅರಿತ ಶ್ರೀರಾಂ ಶೀಘ್ರ ಕಾರ್ಯೋನ್ಮುಖರಾದರು.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ