Advertisement

Tag: ರೂಪಶ್ರೀ ಕಲ್ಲಿಗನೂರ್

ಹಾರಲು ತವಕಿಸುವ ಮನಸ್ಸಿಗೆ ಪ್ರವಾಸವೆಂಬ ರೆಕ್ಕೆಯಿರಲಿ

ಎಲ್ಲ ಹಕ್ಕಿಗಳಂತೆಯೇ ನನ್ನ ಕಣ್ಣಿಗೆ ಕಾಣಿಸಿದ ಆ ಹಕ್ಕಿ ವಿಶೇಷವಾದುದು ಎಂದು ನನಗೇನೂ ಗೊತ್ತಿರಲಿಲ್ಲ. ಜೀವನದಲ್ಲಿ ಎಷ್ಟೋ ಬಾರಿ ಹೀಗೆಯೇ ಆಗುತ್ತದೆ. ನಮ್ಮೊಡನೆ ಇರುವ ಯಾವುದೋ ವಿಷಯದ ವಿಶೇಷತೆ, ಇನ್ಯಾರೋ ಹೇಳಿದಾಗಲೇ ಅರಿವಾಗುವುದು. ಹಕ್ಕಿಗಳೋ ಸದಾ ವಿಶೇಷ ಕತೆಗಳನ್ನು ತಿಳಿದಿರುತ್ತವೆ. ಯಾಕೆಂದರೆ ಪ್ರವಾಸ ಎಂಬುದು ಅವುಗಳಿಗೆ ವಿಶೇಷವೇ ಅಲ್ಲ. ಆದರೆ ಮನುಷ್ಯರು ಮಾತ್ರ ಪ್ರವಾಸ ಹೋಗಬೇಕಾದರೆ..

Read More

ಸ್ವಾಭಿಮಾನಕ್ಕೆ ಅಂತಸ್ತಿನ ಗಡಿರೇಖೆಗಳುಂಟೆ!

“ಆಕೆಯದ್ದು ವಿಚಿತ್ರ ಸ್ವಭಾವ. ಅಮ್ಮ ಹೇಳಿರುತ್ತಿದ್ದ ಸಮಯಕ್ಕೆ ಯಾವತ್ತೂ ಬಂದಿದ್ದು ನನಗೆ ನೆನಪಿಲ್ಲ. ತನಗೆ ಬಿಡುವಾದಾಗಲೇ ಆಕೆ ಕೆಲಸಕ್ಕೆ ಬರೋದು. ಹಾಗಂತ ಕಡಿಮೆ ದುಡ್ಡಿಗೆ, ಚೌಕಾಸಿಗೆ ಬರುವ ಹೆಂಗಸೂ ಆಕೆಯಲ್ಲ. ಹಾಗೇನಾದ್ರೂ ಕೇಳಿದ್ರೆ ‘ಆಯ್ತು, ಎಲ್ಡು ಬಟ್ಟೆ ಕಮ್ಮಿ ಒಕ್ಕೊಡ್ತೀನಿ.. ಸುಮ್ಮನಿರ್ತಾರಾ…ʼ ಅಂತ ಸೀದಾ ಕೇಳಿಬಿಡುವವಳು. ಹಾಗಾಗಿ ಅವಳ ಈ ಸ್ವಭಾವ ಸಹಿಸಿಕೊಳ್ಳುವವರು ಅಥವಾ ಅನಿವಾರ್ಯವಿದ್ದವರು ಮಾತ್ರವೇ ಅವಳನ್ನು ಕೆಲಸಕ್ಕೆ ಕರೆಯುತ್ತಿದ್ದರು. …”

Read More

ಆನೆ ಬಂತೊಂದಾನೆ… ಅಲ್ಲ.. ಮೂರಾನೆ!

“ಆ ಸುದ್ದಿ ಓದಿ ಎರಡು ಮೂರು ದಿನವಾಗಿರಲಿಲ್ಲ, ಮನೆ ಕೆಲಸಕ್ಕೆ ಬರುವ ಗಂಗೆ ಒಂದು ಬೆಳಗ್ಗೆ ಅತ್ತೆ ಹತ್ತಿರ ಕೊಡವ ಭಾಷೆಯಲ್ಲಿ ಗಂಭೀರವಾಗಿ ಏನನ್ನೋ ಮಾತನಾಡುತ್ತಿದ್ದರು. “ರಾತ್ರಿ ಎಲ್ಲ ನಿದ್ದೆಯೇ ಇಲ್ಲ ಅಕ್ಕಯ್ಯಾ… ಹೀಗೇ ಇವು ಬರ್ತಾ ಹೋದ್ರೆ, ಎಂತ ಮಾಡೋದು ನಾವು? ಗಾಬರಿಯಾಯ್ತದೆ. ಬೆಳಗ್ಗೆ ಬೆಳಗ್ಗೆ ಬೇಗ ಕೆಲಸಕ್ಕೆ ಬಾ ಅಂತಾರೆ. ಒಂದೊಂದ್‌ ಸಲಾ.ಕೆಲ್ಸಾ ಮುಗ್ಸಿ ಮನೇಗ್‌ ಹೋಗೋದು ಲೇಟಾಯ್ತದೆ. ರಾತ್ರಿ ಒಬ್ಬರೇ ಸಿಕ್ರೆ ಬಿಡ್ತಾವ..? ತುಳ್ದು ಜಜ್ಜಿ ಹಾಕ್ತವೆ…”..”

Read More

ಊರು, ಉರಿಬಿಸಿಲು ಮತ್ತು ಉಪ್ಪಿಟ್ಟು-ಚಹಾ

“ಅಲ್ಲಿನ ಉಪ್ಪಿಟ್ಟಿಗಿರುವ ರುಚಿಯೇ ಬೇರೆ. ಬೆಂಗಳೂರಿನವರ ಹಾಗೆ ಬನ್ಸಿ ರವೆಯಲ್ಲೋ, ಅಥವಾ ನಾಲಿಗೆ ಹೆಚ್ಚು ರುಚಿಯನ್ನು ಬಯಸುವಾಗ, ತುಪ್ಪದಲ್ಲಿ ಹುರಿದ ಚಿರೋಟಿ ರವೆಯಲ್ಲೋ ಮಾಡುವ ಉಪ್ಪಿಟ್ಟಲ್ಲ ಅದು. ದಪ್ಪ ರವೆಯ ಒಂಚೂರು ಹೆಚ್ಚಿಗೆಯೇ ಅನ್ನಿಸುವಷ್ಟು ಎಣ್ಣೆಯ ಒಗ್ಗರಣೆಯಲ್ಲಿ ಯಥೇಚ್ಚವಾಗಿ ಸುರಿದ ಉಳ್ಳಾಗಡ್ಡಿ (ಈರುಳ್ಳಿ), ಕರಿಬೇವು, ಸಾಸಿವೆ, ಜೀರಿಗೆ ಮತ್ತು ತಿಂದವರ ಮೂಗು ಸೋರುವಷ್ಟು ಖಾರದ ಮೆಣಸನ್ನು ಹಾಕಿದ ಉಪ್ಪಿಟ್ಟದು. ಅದರ ರುಚಿ ತಿಂದವರಿಗೇ ಗೊತ್ತು”

Read More

ಹುಣ್ಣಮೀಗೊಂಥರಾ ಹೋಳಗಿ, ಅಮ್ವಾಸಿಗೊಂಥರಾ ಹೋಳಗಿ…

“ಸಣ್ಣಸಣ್ಣ ಸಂಭ್ರಮಕ್ಕೂ, ಹಬ್ಬಕ್ಕೂ ಹುಣ್ಣಮೀಗೂ ಕಡ್ಲಿಬ್ಯಾಳೀ ಹೋಳಿಗಿ, ತೊಗರಿ ಬ್ಯಾಳಿ ಹೋಳಿ, ಆ ಕಡಬು ಈ ಕಡುಬು, ಮತ್‌ ಆ ಥರದ್‌ ಹುಗ್ಗಿ, ಇಂಥಾ ಹುಗ್ಗಿ ಅಂತೆಲ್ಲ ಮಾಡೂದ ಮಾಡೂದು. ಸೀ ಇಷ್ಟಾ ಅಂತ ಒಬ್ಬಾಕೇ ಮಾಡಿ ಕುತ್ಕೊಂಡ್‌ ತಿನ್ನೂವಂಥ ಹೆಣಮಗಳು ಅಲ್ಲ ಬಿಡ್ರಿ. ತಾ ಜಗ್ಗ ಕೆಲಸಾ ಮಾಡಿ ಮಂದೀಗೆ ತಿನ್ನಸೂದಂದ್ರ ಸಂಭ್ರಮ ಅಕೀಗೆ. ಹಂಗಂತನ, ನಮ್‌ ಹಳೇಮನ್ಯಾಗಿದ್ದ ನನ್‌ ಕ್ಲಾಸ್‌ ಮೇಟು ಡುಮ್ಮನ ದಿನೇಶಾ, “ಏ, ನಿಮ್‌ ಮಮ್ಮೀನ ನಮ್‌ ಮಮ್ಮೀನ ಎಕ್ಸ್ಚೇಂಜ್‌ ಮಾಡ್ಕೊಳ್ಳೂಣಣ… ಪ್ಲೀಸ್‌..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ