Advertisement

Tag: ವಾಸುದೇವ ನಾಡಿಗ್

ಕವಿತೆಯೂ ಉಪ್ಪು ನೀರಲ್ಲಿ ಹಾಕಿದ ಮಾವಿನ ಮಿಡಿ ಹೃದಯ

ಸದ್ಯ ಬಹಳ ದಿನಗಳಿಂದ ನನ್ನ ಅಂತರಂಗಕ್ಕೆ ಸುರಿದುಕೊಂಡ ಕವಿತಾ ಅವರ ಕವಿತೆಗಳು ಕೊಟ್ಟ ಸಂವೇದನೆಗಳಿಗೆ ಇಲ್ಲಿ ಶಬ್ದ ರೂಪ ಕೊಡಲು ಕೂತಿದ್ದೇನೆ. ಕಳೆದ ಮೂವತ್ತು ವರ್ಷಗಳಿಂದ ಕೇವಲ ಕವಿತೆಗಳನ್ನೆ ನಚ್ಚಿಕೊಂಡು ಕೂತ ನನಗೆ ಚೆನ್ನಾಗಿ ಬರೆವ ಹೊಸಬರ ಪದ್ಯಗಳು ಅವು ಪಠ್ಯವಾಗೇ ಕಾಣಿಸುತ್ತದೆ. ಗೋಚರಿಸದ ಲೋಕವೊಂದು ನನಗೆ ನೀಡಬಹುದಾದ ಅಸೀಮ ಅನುಭವಗಳಿಗೆ ಕಾಯುತ್ತಲೇ ಓದುತ್ತೇನೆ. ಕವಿತಾ ಹೆಗಡೆ ಅವರ ಇಲ್ಲಿನ ರಚನೆಗಳು ನನಗೆ ಹೊಸ ಪಠ್ಯವಾಗೇ ಅನುಭವಕ್ಕೆ ಬಂದವು.
ಕವಿತಾ ಹೆಗಡೆ ಅಭಯಂ ಅವರ “ಮಂಜಿನ ಮನೆ ಹೊಕ್ಕ ಮನ” ಕವನ ಸಂಕಲನಕ್ಕೆ ವಾಸುದೇವ ನಾಡಿಗ್‌ ಬರೆದ ಮುನ್ನುಡಿ

Read More

ವಾಸುದೇವ ನಾಡಿಗ್ ಕವನ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

ನಾಡಿಗರ ಕಾವ್ಯಪ್ರೇಮಕ್ಕೆ ಯಾವ ಸಾಕ್ಷಿಯೂ ಬೇಕಿಲ್ಲ. ಅವರನ್ನು ಓದಿದ ಪ್ರತಿಯೊಬ್ಬನಿಗೂ ಗೊತ್ತು, ಬದುಕನ್ನು ಬಂಧಿಸಿರುವ ಎಲ್ಲ ಭಾವಗಳನ್ನೂ ಧಾರಾಳವಾಗಿ ಸುರಿಸುವ ಈ ಭಾವುಕ ನಿಗೂಢ ಮೌನಕ್ಕೆ ಶರಣಾದರೆ ಮರೆಯಲಾಗದ ಕವನವೊಂದು ಮೈತಳೆಯುವುದು ಖಚಿತ. ಒಂದು ಅನೂಹ್ಯ ವಿಷಾದದಲ್ಲಿ ಮುಳುಗಿದರೆಂದರೆ ಬದುಕಿನ ಪರಮ ಸತ್ಯದ ಮಗ್ಗುಲೊಂದನ್ನು ನಮ್ಮತ್ತ ಹೊರಳಿಸಿಬಿಡುವ ಮಾಯಕಾರ. ಒಲವು ಎದೆಯನ್ನು ಹೊಕ್ಕರೆ ಅದನ್ನು ಮೊಗೆ ಮೊಗೆದು ಇತರರಿಗೆ ಸುರಿವ ಪ್ರೇಮಮಯಿ.
ವಾಸುದೇವ ನಾಡಿಗ್‌ ಬರೆದ ‘ಬಂದರಿಗೆ ಬಂದ ಹಡಗು’ ಕವನ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

Read More

ನಿರಾಡಂಬರ ಕಥನ ಕ್ರಮದಲ್ಲಿ ಸಾಗುವ ‘ಸೂತ್ರಧಾರ..’

“ಫಣೀಂದ್ರನ ಗಲಿಬಿಲಿ ಸಂಸಾರ, ಕಾಣದ ಕೈ, ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ, ಹೃದಯಾಂತರಾಳದಲಿ, ತ್ಯಾಗ, ದೊಡ್ಡವರೆಲ್ಲ ಜಾಣರಲ್ಲ, ಕಂದಾ ನೀ ನಗುತಿರು ಮತ್ತು ಸೂತ್ರಧಾರ ಮತ್ತು ಇತರ ಕಥೆಗಳು ಇಲ್ಲಿ ತಮ್ಮ ವಸ್ತು ವಿಷಯಗಳಿಂದ ಗಮನ ಸೆಳೆಯುತ್ತವೆ. ಹೃದಯಾಂತರಾಳದಲ್ಲಿ ಮತ್ತು ಕಂದ ನೀನು ನಗುತಿರು ಕತೆಗಳು ಮಾನವೀಯತೆಯ ಆರ್ದ್ರವಾದ ದನಿಯನ್ನು ಬಿಂಬಿಸಿದರೆ, ದೂರದ ಬೆಟ್ಟ ಮತ್ತು ಕಾಣದ ಕೈಗಳು ಆ ಬಾಳಿನ ಸಹಜವಾದ ಚಿತ್ರವನ್ನು ನೆಚ್ಚಿಕೊಂಡಿವೆ.”
ಶೈಲಜಾ ಸುರೇಶ್‌ ರಾವ್‌ ನಾಯಕ್ ಕಥಾ ಸಂಕಲನಕ್ಕೆ ವಾಸುದೇವ ನಾಡಿಗ್‌ ಬರೆದ ಮುನ್ನುಡಿ

Read More

ವಾಸುದೇವ ನಾಡಿಗ್ ಕವನ ಸಂಕಲನಕ್ಕೆ ದಿಲೀಪ್ ಕುಮಾರ್ ಮುನ್ನುಡಿ.

“ಕರವಸ್ತ್ರದ ಅನನ್ಯತೆ ತಿಳಿಯುವುದು ಹಿಂದಿನ ಸಂಕಲನಗಳಲ್ಲಿನ ಭಾಷೆ-ಬಂಧ-ಪ್ರತಿಮೆಗಳಲ್ಲಿಂದ ಬಿಡುಗಡೆ ಹೊಂದದೆ ಇಂದಿಗೆ ತೆರೆದುಕೊಂಡಿರುವ ತೀವ್ರವಾದ ಭಾವದ ಅಭಿವ್ಯಕ್ತಿಯ ಸ್ಥಿತಿಗೆ ಬಾಯಾಗುವ ಹಂಬಲದಿಂದ. ಎಲ್ಲ ಕಾವ್ಯಗಳೂ ತೀವ್ರವಾದ ಭಾವದ ಅಭಿವ್ಯಕ್ತಿಗೆ ತುಡಿಯುತ್ತಿದ್ದರೂ ಒಂದು ಸಂಕಲನದಿಂದ ಮತ್ತೊಂದು ಸಂಕಲನಕ್ಕೆ ಬೆಳೆದಿರುವ ಇವರ ಕಟ್ಟುವಿಕೆಯಿಂದ.”

Read More

ವಾಸುದೇವ ನಾಡಿಗ್ ಬರೆದ ದಿನದ ಕವಿತೆ

ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ. ಕೆಂಡಸಂಪಿಗೆ ಪರದೆಯ ಎಡ ತುದಿಯಲ್ಲಿ ದಿನದ ಕವಿತೆ ವಿಭಾಗದಲ್ಲಿ ನೀವು ಈ ಕವಿತೆಗಳನ್ನು ಓದಬಹುದು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ