Advertisement

Tag: ವಿನಾಯಕ ಅರಳಸುರಳಿ

ಸ್ನೇಹ-ಸಂಬಂಧಗಳ ಮೊಕದ್ದಮೆಗಳಲ್ಲಿ ಸಾಕ್ಷಿ ಕೊಡಬೇಕಾದವರು ನಿರಪರಾಧಿಗಳೇ!: ವಿನಾಯಕ ಅರಳಸುರಳಿ ಅಂಕಣ

ನಿಜವಾದ ಸಂಗತಿಯೇನೆಂದರೆ ಎಷ್ಟೋ ಬಾರಿ ಇಂಥಾ ಅಪವಾದ, ಅಪನಂಬಿಕೆಗಳು ಆ ಕ್ಷಣಕ್ಕೆ ಹುಟ್ಟಿದವುಗಳಾಗಿರುವುದೇ ಇಲ್ಲ. ಒಬ್ಬ ವ್ಯಕ್ತಿಯ ಸ್ನೇಹ, ಸಾಂಗತ್ಯದಲ್ಲಿರುವಾಗಲೇ ಮನುಷ್ಯ ಇಂಥಾದ್ದೊಂದು ಅಗಲಿಕೆಗೆ ತಯಾರಿ ಮಾಡಿಕೊಳ್ಳುತ್ತಿರುತ್ತಾನೆ. ತನಗೆ ಇಷ್ಟವಾಗದ ಆತನ ವ್ಯಕ್ತಿತ್ವಗಳನ್ನು ಹೆಕ್ಕಿಟ್ಟುಕೊಳ್ಳುತ್ತಿರುತ್ತಾನೆ! ಇಂಥಾದ್ದೊಂದು ಸಮಯ ಬಂದಾಗ ಥಟ್ಟನೆ ಅವನ್ನೆಲ್ಲ ಆಚೆ ತೆಗೆದು ‘ಅಕಾರ್ಡಿಂಗ್ ಟೂ ಆ್ಯಕ್ಟ್ ತ್ರೀ ನಾಟ್ ಟೂ’ ಎಂದು ಅವನ್ನು ಹಾಜರುಪಡಿಸಿಯೇ ಬಿಡುತ್ತಾನೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ ಶುರು

ಮೊದಲಿನಿಂದ ಖಾಲಿಯೇ ಇರುವ ಕುರ್ಚಿಗಿಂತ ನಡುವೆ ಒಂದಷ್ಟು ಹೊತ್ತು ಯಾರೋ ಕುಳಿತಿದ್ದು ಎದ್ದು ಹೋದ ಆಸನ ಹೆಚ್ಚು ಖಾಲಿಯಾಗಿ ಕಾಣುತ್ತದೆ. ನವ ಮಾಸ ತುಂಬಿದ ಬಳಿಕ ಜೀವದ ಬದಲಿಗೆ ಶೂನ್ಯವನ್ನು ಹಡೆದ ಒಡಲು ಹೊಸದಾದ ಖಾಲಿತನಕ್ಕೀಡಾಗುತ್ತದೆ. ಬಂದೇ ಬರುವನೆಂದು ನಂಬಿದ್ದ ಅತಿಥಿ.. ಬರಲೇ ಬೇಕಿದ್ದ ಅತಿಥಿ.. ಅವನ ಸ್ವಾಗತಕ್ಕೆ ಏನೆಲ್ಲ ತಯಾರಾಗಿತ್ತು! ತಂದಿಟ್ಟುಕೊಂಡ ಮಲ್ಲಿಗೆ ಮೆದುವಿನ ಟೊಪ್ಪಿಯಿತ್ತು. ಮೊಲದ ತುಪ್ಪಳದಂಥಾ ಅಂಗಿಯಿತ್ತು. ಅದರ ಅಂಚಲ್ಲಿ ಕೈಯಲ್ಲೇ ಹೊಲಿದ ಕಸೂತಿಯಿತ್ತು.
ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ, ಮಂಗಳವಾರಗಳಂದು, ಹದಿನೈದು ದಿಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ

Read More

ತಮ್ಮ ಬೆಂಗಳೂರಿಗೆ ಬಂದ..: ವಿನಾಯಕ ಅರಳಸುರಳಿ ಲಲಿತ ಪ್ರಬಂಧ

ಕೊಂಚ ಸ್ಥಿತಿವಂತರಾಗಿದ್ದ ಪಕ್ಕದ ಮನೆಯ ಅಣ್ಣನ ಮಗನ ಬರ್ತಡೇ ಪಾರ್ಟಿಯಲ್ಲಿ ತಿನ್ನಲು ಸಿಕ್ಕ ಚಿಕ್ಕ ಕೇಕ್‌ನ ತುಣುಕನ್ನೇ ಸ್ವರ್ಗ ಲೋಕದ ತಿನಿಸೆಂಬಂತೆ ಅದೊಂದು ದಿನ ತಿಂದಿದ್ದೆವು. ಇನ್ನೊಂದು ಪೀಸ್ ಬೇಕು ಎಂಬ ಆಸೆಯನ್ನು ಬಾಯಲ್ಲೇ ಇಟ್ಟುಕೊಂಡು ಕೈ ತೊಳೆದಿದ್ದೆವು. ಯಾರೋ ತುಂಡೊಂದನ್ನು ಬೇಡವೆಂದು ತಟ್ಟೆಯಲ್ಲೇ ಬಿಟ್ಟಾಗ ಅದು ನಮಗೆ ಸಿಗುವುದೇನೋ ಎಂದು ಆಸೆಯಿಂದ ಕಾದಿದ್ದೆವು. ಇಂತಿಪ್ಪ ಅಪೂರ್ಣ ಬಯಕೆಗಳ ಬಾಲ್ಯವನ್ನೇ ಕಳೆದ ತಮ್ಮನಿಗೆ ಈಗಲೂ ಈ ಪಟ್ಟಣದ ವಿಶೇಷ ತಿಂಡಿಗಳ ಬಗ್ಗೆ ಆಸೆಯಿದ್ದರೆ ಅದರಲ್ಲಿ ಯಾವ ತಪ್ಪಾಗಲೀ, ಅತಿಯಾಸೆಯಾಗಲೀ ನನಗೆ ಕಾಣಲಿಲ್ಲ.
ವಿನಾಯಕ ಅರಳಸುರಳಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಉಪ್ಪನ್ನು ಹೀರಿಕೊಂಡ ನೀರಿನಂಥ ಕತೆಗಳು: ಮುನವ್ವರ್ ಕಥಾಸಂಕಲನಕ್ಕೆ ವಿನಾಯಕ ಅರಳಸುರಳಿ ಮುನ್ನುಡಿ

ಎಲ್ಲರೂ ಅರ್ಥವಾದಂತೆ ನಟಿಸುವ ಆದರೆ ನಿಜದಲ್ಲಿ ಸಂಕೀರ್ಣ ಸಮೀಕರಣದಂತಿರುವ ಬಡತನವೆನ್ನುವ ಬಾಳೆ ದಿಂಡಿನ ತಿರುಳನ್ನು ಪದರ ಪದರವಾಗಿ ಬಿಚ್ಚಿಟ್ಟು ‘ಇದು ಜಗತ್ತು, ಇದೇ ಜಗತ್ತು’ ಎಂದು ದಿಟ್ಟವಾಗಿ ಹೇಳುವ ಗಟ್ಟಿತನ ಇಲ್ಲಿನ ಹಲವು ಕಥೆಗಳಲ್ಲಿದೆ.‌ ಬಲ್ಬಿಗೆ ಬೆಳಕನ್ನು ತಲುಪಿಸುವ ತಂತಿಯ ವಿದ್ಯುತ್ತಿನಲ್ಲೇ ಪ್ರಾಣ ತೆಗೆಯುವ ಕರೆಂಟೂ ಇದೆ. ದುರಂತವೆಂದರೆ ನಮ್ಮ ಸಮಾಜದ ಕತ್ತಲನ್ನು ಹೋಗಲಾಡಿಸಲು ಕಂಡು ಹಿಡಿದ ನಾನಾ ಕರೆಂಟುಗಳು ಇಲ್ಲಿಯ ತನಕ ಬೆಳಕು ಕೊಟ್ಟಿದ್ದಕ್ಕಿಂತ ಪ್ರಾಣ ತೆಗೆದಿದ್ದೇ ಹೆಚ್ಚು ಎನ್ನುವ ಸೂಕ್ಷ್ಮವನ್ನು ಉಪ್ಪನ್ನು ಹೀರಿಕೊಂಡ ನೀರಿನಂತೆ ಇಲ್ಲಿನ ಕಥೆಗಳು ಕರಗಿಸಿಕೊಂಡಿವೆ.
ಮುನವ್ವರ್ ಜೋಗಿಬೆಟ್ಟು ಹೊಸ ಕಥಾಸಂಕಲನ “ಟಚ್‌ ಮೀ ನಾಟ್”ಕ್ಕೆ ವಿನಾಯಕ ಅರಳಸುರಳಿ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ