ಧರೆಗೆ ಮೆರುಗು ತಂದು ನಕ್ಷತ್ರಗಳಾದವರು

ಶಾರ್ಟ್‌ ಹ್ಯಾಂಡ್ ಬರಹದಲ್ಲಿ ವಿಸ್ತಾರ ಸ್ವರೂಪವನ್ನು ಹೇಗೆ ಸಂಕೇತರೂಪದಲ್ಲಿ ಚಿಕ್ಕದಾಗಿ ದಾಖಲಿಸಿಕೊಳ್ಳುತ್ತಾರೋ ಹಾಗೆಯೇ ಇಲ್ಲಿ ವೀರೇಶರು ನಿಜ ಸಾಧಕರ ವ್ಯಕ್ತಿತ್ವ ಮತ್ತು ಸಾಧನೆಯನ್ನು ಕೆಲವೇ ಸಾಲುಗಳಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿ ಗೆದ್ದಿದ್ದಾರೆ. ಓದುಗರಿಗೆ ಬೇಸರವಾಗದಿರಲೆಂದು ಪ್ರಾಸ ಬಳಕೆಗೆ ಒತ್ತು ನೀಡಿರುವ ವೀರೇಶರು ತಮ್ಮ ಕವನಗಳನ್ನು ಶಾಲಾ ಮಕ್ಕಳೂ ಸಂತಸದಿಂದ ಕಲಿತು ಹಾಡಲು ಅನುಕೂಲವಾಗುವಂತಾಗಿಸಿರುವುದು ಅವರ ಹೆಗ್ಗಳಿಕೆ.
ವೀರೇಶ ಬ. ಕುರಿ ಸೋಂಪೂರ ಬರೆದ ‘ಧರೆಗೆ ಮೆರುಗು ತಂದವರು’ ಕವನ ಸಂಕಲನದ ಕುರಿತು ಪ.ನಾ. ಹಳ್ಳಿ ಹರೀಶ್‌ ಕುಮಾರ್‌ ಬರಹ

Read More