Advertisement

Tag: ಶರಣಬಸವ ಕೆ ಗುಡದಿನ್ನಿ

“ಉಡದಾರ” ಪ್ರಬಂಧ ಸಂಕಲನದ ಒಂದು ಪ್ರಬಂಧ…

ಶನಿವಾರ ಬಂದರೆ ಸಾಕು ಚೌಕದ ಮೂಗು ಅರಳುತ್ತಿತ್ತು ಒಂದು ಕಾಲಕ್ಕೆ! ಮಸೀದಿಯ ಮೂಲೆಗೆ ಸುತ್ತಲಿನ ಹಳ್ಳಿಗಳಿಂದ ಬಂದ ಹೆಣ್ಮಕ್ಕಳು ಒಲೆ ಹೂಡಿ ತುಪ್ಪ ಕಾಯಿಸುತ್ತಿದ್ದರು. ಚೌಕದಿಂದಾಚೆ ಸುಮಾರು ದೂರದವರೆಗೆ ತುಪ್ಪದ ವಾಸನೆ ಗಮ್ಮಂತ ಬರುತ್ತಿತ್ತು. ಹದವಾಗಿ ಕಾಯುತ್ತಿದ್ದ ತುಪ್ಪಕ್ಕೆ ವೀಳ್ಯದೆಲೆ ಹಾಕಿ ತುಪ್ಪದ ವಾಸನೆಗೊಂದು ಅಪ್ಯಾಯತೆ ತರುತ್ತಿದ್ದರು. ಘಮ ಘಮಿಸುವ ತುಪ್ಪ ಕಾಯಿಸಿದ ಸ್ವಲ್ಪ ಹೊತ್ತಿಗೆ ಖಾಲಿಯಾಗುತ್ತಿತ್ತು. ತುಪ್ಪ ಮಾರುವವರಿಗೆ ಚೌಕ ಖಾಯಂ ವಿಳಾಸವಾಗಿತ್ತು.
ಶರಣಬಸವ ಕೆ. ಗುಡದಿನ್ನಿ ಬರೆದ ಹೊಸ ಪ್ರಬಂಧಗಳ ಸಂಕಲನ “ಉಡದಾರ” ಪುಸ್ತಕದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಶರಣಬಸವ ಕೆ. ಗುಡದಿನ್ನಿ ಹೊಸ ಕಥಾ ಸಂಕಲನದಿಂದ ಒಂದು ಕಥೆ

“ಅವನಿಗೇನು ಗೊತ್ತು ಅವ್ರವ್ವನ ತ್ರಾಸು. ತವರುಮನ್ಯಾಗ ಒಂದು ಕಾಲು ಹೊರಗಾಕಲಾರದ್ಹಂಗ ಕಮ್ಮಗ ಕುಂತಗಂಡು ಬೆಳ್ದಾಕಿ ಇವರಪ್ಪನ ಕಟಿಗೆಂಡು ಏಟು ತ್ರಾಸು ಪಟ್ಟಿನಂತ. ನಮ್ಮ ಅತ್ತಿ ಬೇಗಂ ಏನ್ ಸಣ್ಣಾಗಿ ತ್ರಾಸು ಕೊಟ್ಲಾ ಕುಂತ್ರ ನಿರಮ್ಮಳಿಲ್ಲ ನಿಂತ್ರ ನಿರಮ್ಳಿಲ್ಲ ರಾತ್ರೀ ಮಕ್ಕಾಂಡಾಗೂ ವಟವಟ ಕೇಳಿ ಕೇಳಿ ಮನಿ ಯಾವಾಗ ಬಿಟ್ಟೀನಪೋ ದೇವ್ರೇ ಅನುಸೋದು. ಮನ್ಯಾಗ ನೋಡಿದ್ರ ಸರೀಗಿ ತಿಂಬಾಕ ಕೂಳಿಲ್ಲ ಅಂದ್ರೂ ನನಗಂಡುಂದು ಅತ್ತೀದು ಟಬರು ಬಾಳ.”

Read More

ದೇವರೇ ನಿನ್ನೆಸರ ಬದಲಿಸಿಕೊ.. : ಶರಣಬಸವ ಕೆ ಗುಡದಿನ್ನಿ ಬರೆದ ಕಥೆ

“ಅಪ್ಪ ಆ ಕಾಲಕ್ಕಾಗಲೇ ಮಟ್ಕಾ ಬರೆಯುತ್ತಿದ್ದ. ಬರೀ ಕುರಿ ಕಾಯ್ದೇ ಬದುಕಿದ್ದ ಆತನಿಗೆ ಅವುಗಳನ್ನ ಮಾರಿದ ಮೇಲೆ ಹೊಲ-ಗದ್ದೆಗಳಲಿ ಹೋಗಿ ಬಗ್ಗಿ ಕೆಲಸ ಮಾಡಲು ಸೈರಣೆ ಆಗುತ್ತಿರಲಿಲ್ಲವೆನಿಸುತ್ತದೆ. ಅಲ್ಲದೇ ಹುಡುಕಿಕೊಂಡು ಕೈಯಲ್ಲಿ ಕಾಸಿಡಿದುಕೊಂಡು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ