Advertisement

Tag: ಶಶಿಧರ ಹಾಲಾಡಿ

ದೊಡ್ಡ ದೇಶದ  ಸಂಗತಿಗಳು  ಚಿಕ್ಕ ಚಿಕ್ಕ  ಟಿಪ್ಪಣಿಗಳಲ್ಲಿ: ಶಶಿಧರ ಹಾಲಾಡಿಯವರ ಕೃತಿಯ ಕುರಿತು ನಾರಾಯಣ ಯಾಜಿ ಬರಹ

ಅಮೆರಿಕದಂತಹ ವಿಶಾಲ ದೇಶವನ್ನು ಸಾವಿರಾರು ಪ್ರವಾಸಿಗರು ನೋಡಿರಬಹುದು. ಆದರೆ ಎಲ್ಲರೂ ಅದನ್ನು ಓದುಗರ ಕಣ್ಮುಂದೆ ಜೀವಂತಗೊಳಿಸಲು ಸಾಧ್ಯವಿಲ್ಲ. ಒಂದು ಸ್ಥಳದ ಸೌಂದರ್ಯವನ್ನು ವರ್ಣಿಸುವುದು ಸುಲಭ; ಆದರೆ ಆ ಸ್ಥಳದ ಇತಿಹಾಸ, ಸಾಮಾಜಿಕ ಹಿನ್ನೆಲೆ, ವೈಜ್ಞಾನಿಕ ಅಂಶಗಳು, ಅಲ್ಲಿನ ಜನಜೀವನ ಮತ್ತು ಮಾನವ ನಾಗರಿಕತೆಯ ಪಯಣವನ್ನು ಒಂದೇ ಬರಹದಲ್ಲಿ ಬೆರೆಸಿ ಹೇಳುವುದು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಹಾಲಾಡಿಯವರು ಅದನ್ನು ಸಾಧಿಸಿದ್ದಾರೆ. ಈ ಕೃತಿಯ ಅತ್ಯಂತ ದೊಡ್ಡ ಶಕ್ತಿ ಅವರ ‘ಸೂಕ್ಷ್ಮ ಅವಲೋಕನ’. ಸಾಮಾನ್ಯ ಪ್ರವಾಸಿಗನ ಕಣ್ಣಿಗೆ ಕಾಣದ ಸಂಗತಿಗಳನ್ನೂ ಲೇಖಕರು ಹಿಡಿದುಕೊಡುತ್ತಾರೆ.
ಶಶಿಧರ ಹಾಲಾಡಿ ಬರೆದ ಪ್ರವಾಸ ಕಥನ “ಇಲ್ಲಿ ಶಾಸ್ತ್ರ ಹೇಳಲಾಗುವುದು” ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಸ್ವಾತಂತ್ರ್ಯ ಪೂರ್ವೋತ್ತರದ ಸಂಘರ್ಷ: ಬಿ. ಕೆ. ಮೀನಾಕ್ಷಿ ಬರಹ

ಒಂದು ಸ್ಥಳದಿಂದ ನಿರ್ಗತಿಕರಾಗಿ ಓಡಿಬಂದವರಿಗೆ ಅನ್ನ ಆಶ್ರಯ ನೀಡಿ ಬದುಕು ಕೊಟ್ಟವರ, ಬದುಕನ್ನೇ ಬುಡಮೇಲು ಮಾಡುವ ಕೆಲಸಗಾರರ ಚಿತ್ರಣ, ಅದಕ್ಕೆ ಕುಮ್ಮಕ್ಕು ನೀಡಿ ಜಮೀನನ್ನೆಲ್ಲ ತಮ್ಮ ವಶ ಮಾಡಿಕೊಳ್ಳುವ ಕೆಲಸಗಾರರ ದಬ್ಬಾಳಿಕೆ, ನಿಯತ್ತಿಗೆ ಹೊರತಾದ ಅವರ ಕಾರ್ಯಭಾರವೆಲ್ಲದರ ಚಿತ್ರಣ ಗಮನಿಸಿದರೆ, ದ್ರೋಹವೆಂಬುದು ಸಾರ್ವಕಾಲಿಕವಾದದ್ದು, ಮನುಷ್ಯನ ಕುಟಿಲತೆ, ನೀಚ ಪ್ರವೃತ್ತಿ ಸಾವಿರ ವರ್ಷ ಕಳೆದರೂ ಬದಲಾಗದಂತಹುದು ಎಂಬುದು ಕಠೋರ ಸತ್ಯವಾಗಿ ಮನಸ್ಸನ್ನು ಆವರಿಸುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ನದಿ ದಾಟಿ ಬಂದವರು” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಪರಿಸರದ ಪಾಠಕ್ಕೆ ಇದೇ ಸೂಕ್ತ ತಾಣ!

ಪ್ರಕೃತಿಯ ಮೊದಲ ಪಾಠಗಳನ್ನು ನಾನು ಕಲಿತದ್ದು ಆ ಹಕ್ಕಲಿನಲ್ಲಿ ಎಂದು ಹೇಳಿದರೆ ತಪ್ಪಾಗದು. ಹಾಗೆ ನೋಡಿದರೆ, ನಮ್ಮ ಹಳ್ಳಿಯ ಮನೆಯ ಪರಿಸರವೇ ಒಂದು ಒಳ್ಳೆಯ ಪಾಠಶಾಲೆ. ಮನೆ ಎದುರು ಗದ್ದೆ, ಮನೆ ಸುತ್ತಲೂ ಮರಗಳು, ಮನೆಯ ಛಾವಣಿಯ ಮೇಲೆ ಚಾಚಿಕೊಂಡ ಭಾರೀ ಗಾತ್ರದ ಹಲಸಿನ ಮರ, ಇಪ್ಪತ್ತು ಅಡಿ ದೂರದಲ್ಲಿರುವ ಬೃಹತ್ ಗಾತ್ರದ ಎರಡು ತಾಳೆ ಮರಗಳ ಒಣಗಿದ ಎಲೆಗಳು ಮಾಡುವ ಬರಬರ ಸದ್ದು, ಅಂಗಳದ ಅಂಚಿನ ಹೂಗಿಡಗಳು, ಬಳ್ಳಿಗಳು, ದಾಸವಾಳ, ಬೆಟ್ಟ ತಾವರೆ – ಪಟ್ಟಿ ಮಾಡುತ್ತಾ ಹೋದರೆ ಬೇಗನೆ ಮುಗಿಯದು. ಜತೆಗೆ ನಾವು ಶಾಲೆಗೆ ಹೋಗುತ್ತಿದ್ದ ದಾರಿಯೂ ಇನ್ನೊಂದು ಪಾಠಶಾಲೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಶಶಿಧರ ಹಾಲಾಡಿಯವರ “ನಾ ಸೆರೆಹಿಡಿದ ಕನ್ಯಾಸ್ತ್ರೀ” ಪ್ರಬಂಧ ಸಂಕಲನದ ಒಂದು ಬರಹ ನಿಮ್ಮ ಓದಿಗೆ

Read More

ಪರಿಸರ ಕಾಳಜಿಯ ಸಾಮಾಜಿಕ ಕಾದಂಬರಿ

ಹಿರೇಕಲ್ಲುಗುಡ್ಡ ಅನೇಕ ವಿಷಯಗಳನ್ನು ಸಾಕ್ಷೀಕರಿಸುವ ಸಾಕ್ಷಾತ್ ಸಾಕ್ಷಿಕಲ್ಲೆಂದರೂ ಆದೀತು. ದೇವಸ್ಥಾನ, ಜೀವವೈವಿಧ್ಯತೆ, ಪಾಳುಬಂಗಲೆ, ಸನ್ಯಾಸಿಗಳ ಆಶ್ರಮತಾಣ, ಮುಕುಂದೂರುಸ್ವಾಮಿಗಳು ಬಂದು ಹೋಗುವ ಸ್ಥಳ, ಹಣದ ವ್ಯಾಮೋಹಕ್ಕೆ ಬಿದ್ದು, ಯಾವುದರ ಬೆಲೆಯನ್ನೂ ಅರಿಯದೆ ಚಿಪ್ಪುಹಂದಿ, ಹಾವುಗಳು ಇನ್ನಿತರ ಪ್ರಾಣಿಗಳನ್ನು ಹಿಡಿದು ಕಳ್ಳಸಾಗಣೆ ಮಾಡುವ ಪೆದ್ದು ಮುಖವಾಡದ ನಿರ್ದಯೀ ಪ್ರವೃತ್ತಿಯ ಕೆಂಚಪ್ಪನ ಕಾರಸ್ಥಾನ…. ಹೀಗೆ ಹಿರೇಕಲ್ಲುಗುಡ್ಡ ಕೆಟ್ಟ ರಾಜಕೀಯ, ಅಧ್ಯಾತ್ಮ, ಐತಿಹ್ಯ, ದುರಾಸೆಗಳ ಪ್ರತೀಕವಾಗಿ ನಿಲ್ಲುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ಅಬ್ಬೆ” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ