Advertisement

Tag: ಶೇಷಾದ್ರಿ ಗಂಜೂರು

ಇರಾನಿಗೂ ಹಿಂದೂಸ್ತಾನಕ್ಕೂ ಅಂಟಿರುವ ಸಾವಿರಾರು ವರ್ಷಗಳ ನಂಟು: ಶೇಷಾದ್ರಿ ಗಂಜೂರು ಬರಹ

ಗಹನವಾದ ವಿಚಾರಗಳನ್ನು ಪ್ರಸ್ತಾಪಿಸುವಾಗ ಅವಕ್ಕೆ ಭಾರತದೊಂದಿಗೆ ಸಂಬಂಧ ಕಲ್ಪಿಸುವುದನ್ನು ಪರ್ಷಿಯನ್ ಕಾವ್ಯಪರಂಪರೆಯಲ್ಲಿ ನಾವು ಮತ್ತೆ ಮತ್ತೆ ಕಾಣಬಹುದು. ಉದಾಹರಣೆಗೆ, ಫಿರ್ದೂಸಿಯ ಒಂದು ಶತಮಾನದ ನಂತರ ಬಂದ ನಿಜ಼ಾಮಿ ಗಂಜಾವಿಯ ಹಫ್ತ್ ಪೇಕಾರ್ ಕಾವ್ಯದಲ್ಲಿ ಭಾರತೀಯ ರಾಜಕುಮಾರಿಯೊಬ್ಬಳು ಆ ಕಥನದ ನಾಯಕ ಬೆಹ್ರಾಮನಿಗೆ ಆತ್ಮ ಸಂಯಮದ ಮಹತ್ವವನ್ನು ಹೇಳಿಕೊಡುತ್ತಾಳೆ.
ಇರಾನಿಗೂ ಹಿಂದೂಸ್ತಾನಕ್ಕೂ ಇರುವ ನಂಟಿನ ಕುರಿತು ಶೇಷಾದ್ರಿ ಗಂಜೂರು ಬರಹ

Read More

ಪ್ರಸಿದ್ಧ ಫೋಟೋದ ಹಿಂದಿನ ರಹಸ್ಯ: ಶೇಷಾದ್ರಿ ಗಂಜೂರು ಸರಣಿ

ಆ ಫೋಟೊ ನೋಡಿದ ತಕ್ಷಣವೇ ಅವಳಿಗೆ ಅದು ಕಂಡಿತು. ಆ ಫೋಟೋದಲ್ಲಿನ ಸ್ಪಷ್ಟತೆ, ಅದರಲ್ಲೂ ಫ್ರಾಂಕ್ಲಿನ್‌ಳಂತಹ ಅನುಭವ-ಪಾಂಡಿತ್ಯ ಎರಡೂ ಇದ್ದ ಮೇಧಾವಿಗೆ, ಒಂದರೆ ಕ್ಷಣ ಅವಳ ಉಸಿರುಗಟ್ಟಿಸಿರಬಹುದು. ಆ ಫೋಟೋ ಮುಖಾಂತರ, ಡಿಎನ್‌ಎ ಗಟ್ಟಿದನಿಯಲ್ಲಿ, ಖಡಾಖಂಡಿತವಾಗಿ ಸಾರುತ್ತಿತ್ತು: “ನಾನೊಂದು ಸುರುಳಿ!”. ಪೈಥಾಗೊರಾಸನಿಂದ ಹಿಡಿದು, ಕೊನೆಗೂ ಡಾರ್ವಿನ್ನನವರೆಗೆ ಸಾವಿರಾರು ವರ್ಷಗಳ ಸಿದ್ಧಾಂತಗಳ, ಮೆಂಡೆಲ್-ಮಾರ್ಗನ್ ಅಂತಹವರ ಪ್ರಯೋಗಗಳ ಗುರಿಯ ಸ್ವರೂಪದ ದರ್ಶನವಾಗಿತ್ತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”ಯಲ್ಲಿ ಹೊಸ ಬರಹ

Read More

ಜಗತ್ತಿನ ಅತ್ಯಂತ ಸುಂದರ ಫೋಟೋ(2):ಶೇಷಾದ್ರಿ ಗಂಜೂರು ಸರಣಿ

ಈ ಆಲೋಚನೆ ಹೊಳೆದ ರಾತ್ರಿ ಅವನಿಗೆ ನಿದ್ದೆಯೇ ಬರಲಿಲ್ಲ. ಕಾಲೇಜಿನ ಇನ್ನೊಬ್ಬ ಪ್ರೊಫೆಸರ್ ಕೊಟ್ಟಿದ್ದ ಹೋಂ ವರ್ಕ್ ಮಾಡಲೂ ಸಹ ಮನಸು ಬರಲಿಲ್ಲ. ಬದಲಿಗೆ, ಹಾಸಿಗೆಯಿಂದೆದ್ದು, ಇಲ್ಲಿಯವರೆಗೆ ಕಲೆ ಹಾಕಿದ್ದ ಅಂಕಿ-ಸಂಖ್ಯೆಗಳು-ಮಾಹಿತಿಗಳನ್ನೆಲ್ಲಾ ಮತ್ತೆ-ಮತ್ತೆ ನೋಡಿ, ಸಣ್ಣ ಕಾಗದದ ಮೇಲೊಂದು ದಾರದಂತೆ ಗೆರೆಯೊಂದನ್ನು ಎಳೆದು ಅದರ ಮೇಲೆ, ತನ್ನ ಲೆಕ್ಕಾಚಾರ ಬಳಸಿ ಬಿಳಿಗಣ್ಣು, ಹಳದಿ ಬಣ್ಣ, ಕಿರು ರೆಕ್ಕೆ, ಹಾರೆಗಣ್ಣು ಇತ್ಯಾದಿ ಜೀನುಗಳನ್ನು ಮಾರ್ಕ್ ಮಾಡಿದ. ವಂಶವಾಹಿ ಗುಣಗಳು ಒಂದು ಪೀಳಿಗೆಯಿಂದ ಇನ್ನೊಂದಕ್ಕೆ ಹೇಗೆ ಸಂವಹಿಸುತ್ತದೆ ಎಂದು ತೋರುವ “ಜೀನ್ ಮ್ಯಾಪ್” ಒಂದು ಹೀಗೆ ಮಾನವ ಇತಿಹಾಸದಲ್ಲೇ ಮೊದಲ ಬಾರಿಗೆ ಸಿದ್ಧವಾಯಿತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”

Read More

ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು” ಇಂದಿನಿಂದ

ಮನುಷ್ಯನಿಗೆ ಮನುಷ್ಯನೇ ಹುಟ್ಟುವ ತದ್ರೂಪಿತನ ಪುರಾತನ ಕಾಲದಿಂದಲೂ ಕುತೂಹಲ ಮೂಡಿಸಿದೆ. ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ಗ್ರೀಕ್ ಗಣಿತಜ್ಞ-ತತ್ವಶಾಸ್ತ್ರಿ ಪೈಥಾಗೊರಸ್ ಅನುವಂಶೀಯತೆಯ ಸೂತ್ರ ವೀರ್ಯದಲ್ಲಿದೆ ಎನ್ನುತ್ತಾನೆ. ಅವನ ಪ್ರಕಾರ, ವೀರ್ಯ ಪುರುಷನಿಂದ ಹೊರಬರುವ ಮುನ್ನ ದೇಹದ ಎಲ್ಲಾ ಭಾಗಗಳಲ್ಲಿ ಹರಿದು ಆ ಭಾಗಗಳೆಲ್ಲದುರ ಮಾಹಿತಿಯನ್ನೂ ಕಲೆಹಾಕಿ ತದ್ರೂಪಿ ಇರುವ ಬೀಜವಾಗುತ್ತದೆ. ಈ ಬೀಜ ಗರ್ಭವನ್ನು ಸೇರಿದಾಗ, ಆ ತದ್ರೂಪಿಗೆ ಬೇಕಿರುವ ಪೋಷಕಾಂಶ ನೀಡಿ ಅದನ್ನು ದೊಡ್ಡದು ಮಾಡುವುದಷ್ಟೇ ಹೆಣ್ಣಿನ ಕೆಲಸ.
ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”

Read More

ಒಲಿವಿಯಾ ನ್ಯೂಟನ್ ಜಾನ್ ಮತ್ತು ಬೆಂಗಳೂರು ಒಳ ಚರಂಡಿ ಆಫೀಸು

ಮ್ಯಾಕ್ಸ್ ಬೋರ್ನ್ ಬೆಂಗಳೂರಿನಲ್ಲಿದ್ದ ಕೆಲವೇ ತಿಂಗಳುಗಳಲ್ಲಿ, ರಾಮನ್‌ರ ಮೂಲಕ ಅವರಿಗೆ ಮೈಸೂರು ಸಂಸ್ಥಾನದ ಅಂದಿನ ಹಲವಾರು ಗಣ್ಯರ ಪರಿಚಯವಾಯಿತು. ಹೀಗೆ ಪರಿಚಯವಾದವರಲ್ಲಿ ದಿವಾನ್ ಮಿರ್ಜಾ ಇಸ್ಮಾಯಿಲ್ ಸಾಹೇಬರೂ ಒಬ್ಬರು. ಆ ಕಾಲದಲ್ಲಿ, ಇಸ್ಮಾಯಿಲ್ ಸಾಹೇಬರು ಬೆಂಗಳೂರಿನಲ್ಲಿ ಹಲವಾರು ಸಾರ್ವಜನಿಕ ಮೂಲ ಸೌಕರ್ಯ ಮತ್ತು ಕಟ್ಟಡಗಳನ್ನು ನಿರ್ಮಿಸುವ ಆಲೋಚನೆಯಲ್ಲಿದ್ದರು. ಈ ಕಟ್ಟಡಗಳನ್ನು ವಿನ್ಯಾಸ ಮಾಡಲು ಅವರು ಒಬ್ಬ ನುರಿತ ಆರ್ಕಿಟೆಕ್ಟ್‌ಗಾಗಿ ಹುಡುಕಾಟದಲ್ಲಿದ್ದರು.
ಶೇಷಾದ್ರಿ ಗಂಜೂರು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ