Advertisement

Tag: ಶ್ರೀನಿವಾಸ ವೈದ್ಯ

ಅಕ್ಷರದ ಮೂಲಕ ಚಿರಂಜೀವಿಯಾಗಿರುವ ಶ್ರೀನಿವಾಸ ವೈದ್ಯ

ನವೋದಯಕಾಲದ ಲೇಖಕರು ಎದುರಿಸುವ ಎಲ್ಲಬಗೆಯ ವಿಪ್ಲವ ಮತ್ತು ಆತಂಕಗಳನ್ನು ಒಂದು ಕುಟುಂಬದ ಕಥೆಯಮೂಲಕ ಹೇಳುವ ಶ್ರೀನಿವಾಸ ವೈದ್ಯರ ಕ್ರಿಯಾಶೀಲತೆಯನ್ನು ಇಲ್ಲಿ ಕಾಣಬಹುದಾಗಿದೆ. ಅನೇಕ ಸಲ ಅನಂತಮೂರ್ತಿಯವರ ಮೌನಿಯಲ್ಲಿ ಈ ಕಾದಂಬರಿಯ ನೆರಳು ಬಿದ್ದಿರಬಹುದೇ ಅನಿವುವಷ್ಟು ಪ್ರಭಾವಶಾಲಿಯಾಗಿದೆ. ಬೇರು ಕಳೆದುಕೊಂಡ ವ್ಯಕ್ತಿ ಹೊಸ ಬೇರಿನೊಂದಿಗೆ ಕಂಡುಕೊಳ್ಳುವ ಆರ್ಥಿಕ ಭದ್ರತೆ ಮತು ಸಾಮಾಜಿಕ ಸ್ಥಾನಮಾನವನ್ನೂ ಪಡೆದುಕೊಳ್ಳುವ ಕ್ರಿಯೆ ಬ್ರಿಟಿಷರಿಂದ ಭಾರತಕ್ಕೆ ಸಿಗುವ ಸ್ವಾಂತಂತ್ರ್ಯದ ಜೊತೆಗೆ ಹಾಸುಹೊಕ್ಕಾಗಿದೆ.
ಇಂದು ತೀರಿಹೋದ ಶ್ರೀನಿವಾಸ ವೈದ್ಯರ ಕೃತಿಗಳ ಕುರಿತು ನಾರಾಯಣ ಯಾಜಿ ಬರಹ

Read More

ಶ್ರೀನಿವಾಸ ವೈದ್ಯರು ಇನ್ನಿಲ್ಲ….

‘ಹಳ್ಳ ಬಂತು ಹಳ್ಳ’ ಕೃತಿ ಬಂದಾಗ ಅವರ ವಿದ್ವತ್ತು ಓದುಗರಿಗೆ ಪರಿಚಯವಾಯ್ತು. ಶುದ್ಧ ಹಾಸ್ಯ ಸೃಷ್ಟಿಸುವ ಶಕ್ತಿ ಇರುವವರಿಗೆ ಬದುಕನ್ನು ಗಾಢವಾಗಿ ನೋಡುವ ಶಕ್ತಿಯೂ ಇರುತ್ತದೆ ಎಂಬುದು ಈ ಕೃತಿ ನಿರೂಪಿಸಿತ್ತು. ಯಾವುದೇ ಅನುಮಾನವಿಲ್ಲದೆ ಈ ಕಾದಂಬರಿ ಕನ್ನಡ ಸಾಹಿತ್ಯಲೋಕದ ಅಪರೂಪದ ಕೃತಿ. ಅದು ಬಿಡುಗಡೆಯಾದಾಗ ನಾನು ಸಂಭ್ರಮ ಪಟ್ಟು ಅದರ ಕುರಿತು ವಿ.ಕ. ದಲ್ಲಿ ವಿಮರ್ಶೆ ಬರೆದಿದ್ದೆ. ಆ ವಿಮರ್ಶೆಯಲ್ಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರಲಿ ಎಂದು ಆಶಿಸಿದ್ದೆ. ಅಂತೆಯೇ ಅವರಿಗೆ ಆ ಪ್ರಶಸ್ತಿ ಅನಂತರದ ವರ್ಷ ಬಂದಿತು.
ಇಂದು ಬೆಳಗ್ಗಿನ ಜಾವ ತೀರಿಕೊಂಡ ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯರ ಕುರಿತು ಕಥೆಗಾರ ವಸುಧೇಂದ್ರ ಬರಹ

Read More

ಭಾನುವಾರದ ವಿಶೇಷ: ಶ್ರೀನಿವಾಸ ವೈದ್ಯರು ಬರೆದ ಸಣ್ಣಕಥೆ ‘ಶ್ರದ್ಧಾ’

ನಮ್ಮದು ನರಸಿಂಹನ ಒಕ್ಕಲು. ನಮ್ಮ ತಂದೀದು ಶ್ರೀಮದ್ಗಾಂಭಿರ್ಯದಿಂದೊಪ್ಪುವ, ತುಸು ಮಟ್ಟಿಗೆ ಉಗ್ರವೇ ಎನ್ನಬಹುದಾದ ರೂಪ. ಸಾಮಾನ್ಯಕ್ಕಿಂತ ಸ್ವಲ್ಪ ಎತ್ತರವೇ, ದಪ್ಪವೇ ಎನ್ನಬಹುದಾದ ಮೈಕಟ್ಟು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ