Advertisement

Tag: ಸಣ್ಣಕತೆ

ಮುದಿರಾಜ್‌ ಬಾಣದ್ ಬರೆದ ಈ ಭಾನುವಾರದ ಕತೆ

ಬಿದ್ದಿದ್ದ ಜಡೆಗುಂಡು ರಿಬ್ಬನ್‌ ತಗಂಡು ನೀಲೇಶ್‌ ಜೇಬಲ್ಲಿ ಇಟ್ಟಿಕೊಳ್ಳುವದಕ್ಕೂ ಅವನ ತಾಯಿ ಅಲ್ಲಿಗೆ ಬರುವುದಕ್ಕೂ ಸರಿ ಹೋಯಿತು. “ಏನ್‌ ನಿಮ್ಮ ಜಗಳ ಹಾವು ಮುಂಗಸಿ ಆಡಿದಂಗಾ, ಏನಾಯ್ತು? ಹೇ ಮುದುಕ ಅದೇನ್‌ ಚಡ್ಡಿ ಬಕಣದಾಗ ಇಟ್ಟಿಕಂಡಿದ್ದು?” ಅಂತ ಕೇಳಿದಳು. ಅಕ್ಕ ತಮ್ಮ ಇಬ್ಬರೂ ಒಮ್ಮೆ ಮುಖ ಮುಖ ನೋಡಿಕೊಂಡರು. “ಅಮ್ಮ ಅದು ಅದು…” ಅಂತ ರಾಗ ಎಳೆಯುವಷ್ಟರಲ್ಲಿ, “ಲೇ ತಾರ ಅವ ಸಿಕ್ಕನಾ ಬಾರೇ ಜಲ್ದಿ” ಅಂತ ನೀಲೇಶನ ತಂದೆ ಜೋರು ಜೋರಾಗಿ ಕೂಗಿದ.
ಮುದಿರಾಜ್‌ ಬಾಣದ್‌ ಬರೆದ ಈ ಭಾನುವಾರದ ಕಥೆ “ಗಂಡುಮಲಿ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕತೆ

ಭಾಳ ಸಿಹಿಸುದ್ದಿಯೇನೂ ಅಲ್ಲ. ಆದರೂ, ಕಹಿಯಂತೂ ಅಲ್ಲಲ. ತೇರಿಗೆ ಹೂವುಹಣ್ಣು ಹಾಕವರಿದ್ರ ಇವತ್ತೇ ತಗೊಂಡು ತಯಾರಾಗ್ರಿ. ನಾಳೆ ಶಿಗತಾವೋ ಇಲ್ಲೋ. ಭಯಂಕರ ತುಟ್ಟಿನು ಇರತಾವು. ಬಿಸಿಲು ಏರಾಕ ಹೊಂಟೈತಿ. ಜರಾ ಚಹಾ ಕುಡೀತಿರೇನು ನೋಡ್ರಿ, ಹೇಳುತ್ತ ತಾನೂ ಹಗುರಾದಂತೆ ಬೋಲ್ಡಿ ಬಾಬಾ ಕೊಳವೆಗೆ ತಂಬಾಕು ತುಂಬಿ ಕಿಡಿ ಹಚ್ಚಿದ. ರುಕುಮವ್ವ, ಚಂದ್ರವ್ವಳನ್ನು ಕೈಯಿಂದ ಎಳೆದುಕೊಳ್ಳುತ್ತ ಬೆನ್ನು ಸವರಿ, ಸಮಾಧಾನ ಆತಿಲ್ಲವಾ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕಥೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ

ಕಂತುಗಳನ್ನು ಸರಿಯಾಗಿ ಕಟ್ಟಲಿಲ್ಲವೆಂದು ಮನೆಯನ್ನು, ಕಾರನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ಯಾಂಕಿನವರು ಬಂದಾಗ ಆಶ್ಚರ್ಯವೆಂಬಂತೆ ತಾನೇ ಮುಂದೆ ನಿಂತು ಅವನ್ನೆಲ್ಲಾ ಅವರಿಗೆ ಬಿಟ್ಟುಕೊಟ್ಟ. ಅಡ್ಡಬಂದ ಹೆಂಡತಿಗೆ, ‘ಇಲ್ಲಿಗೆ ಬರುವಾಗ ಏನನ್ನೂ ತಂದಿರಲಿಲ್ಲ, ಹೋಗುವಾಗಲೂ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ..
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ “ಜೀ ಗಾಂಧಿ” ನಿಮ್ಮ ಓದಿಗೆ

Read More

ಎ. ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ಆ ರಾತ್ರಿ ಯಕ್ಷಗಾನ ಎಲ್ಲಾ ನೋಡಿ ಮುಗಿದು ಬೆಳಿಗ್ಗೆ ಮನೆಗೆ ತಲುಪಿದೆ. ಕಣ್ಣೀರಿನ ಹೊರತು ಆ ದಿನ ಸಮಜಾಯಿಷಿ ಕೊಡಲು ನನ್ನಲ್ಲಿ ಯಾವ ಮಾತುಗಳೂ ಇರಲಿಲ್ಲ. ನಿಜ ನಾನೇನು ತಪ್ಪು ಮಾಡಿರಲಿಲ್ಲ, ಆದರೆ ಯಾಕೋ ನನಗೆ ಅಮ್ಮನನ್ನು ಒಬ್ಬಳನ್ನೇ ಬಿಟ್ಟು ಹೋದ ಆ ತಪ್ಪಿತಸ್ಥ ಭಾವ ಆ ದಿನದಿಂದ ಬಹಳವಾಗಿ ಕಾಡಿತು ಮಹೇಶ. ಆ ನೋವಿನಿಂದಾಗಿ ಆ ದಿನದಿಂದ ನಾನು ಎಂದಿಗೂ ಯಕ್ಷಗಾನದತ್ತ ಕಣ್ಣು ಹಾಯಿಸಲೇ ಇಲ್ಲ.
ಎ.ಬಿ. ಪಚ್ಚು ಬರೆದ ಕತೆ “ಮೈಸಾಸುರ”

Read More

ನವೀನ ಗಣಪತಿ ಬರೆದ ಈ ಭಾನುವಾರದ ಕತೆ

ಮಧ್ಯಾಹ್ನ ಒಂದು ಘಂಟೆಗೇ ತಾನು ಮನೆಯಲ್ಲಿ ಮಾಡಬಹುದಾದ ಎಲ್ಲ ಕೆಲಸಗಳೂ ಮುಗಿದು ಮತ್ತೆಲ್ಲ ಮನಸ್ಸಿಗೆ ಕಿರಿಕಿರಿಯಾಗ ಹತ್ತಿತ್ತು. ನಾಲ್ಕು ದಿನ ದಾವಣಗೆರೆಗೆ ಹೋಗಿ ಮಗಳೊಟ್ಟಿಗೆ ಇದ್ದು ಬರೋಣವೆನಿಸುತ್ತಿತ್ತು. ಆದರೆ ಶಂಭಣ್ಣನನ್ನು ಬಿಟ್ಟು ಎಲ್ಲಿಯೂ ಹೋಗುವಂತಿರಲಿಲ್ಲ. ಮಗಳೂ ವಾರ ವಾರ ಬರುವವಳಲ್ಲ. ಅವಳಿಗೆ ಭಾನುವಾರ ರಜಾದಿನಗಳು ಇದ್ದಾಗಲೇ ಜೋರು ವ್ಯಾಪಾರ. ಇನ್ನು ಆಚೀಚೆ ಎರಡು ಹೆಂಗಸರೊಟ್ಟಿಗೆ ಹರಟೆ – ಮಾತು – ಒಡನಾಟ ಮಾಡೋಣವೆಂದರೆ, ಒಬ್ಬರ ವ್ಯವಹಾರವಾದರೂ ಚೊಕ್ಕಟವಾಗಿದೆಯೇ?
ನವೀನ ಗಣಪತಿ ಬರೆದ ಈ ಭಾನುವಾರದ ಕತೆ “ಧನಲಕ್ಷ್ಮಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ