Advertisement

Tag: ಸತೀಶ್‌ ತಿಪಟೂರು

ಜೀವಜಾಲದ ಪ್ರೋಗ್ರಾಮಿಂಗ್‌ನ ವಿಸ್ಮಯ: ಸತೀಶ್‌ ತಿಪಟೂರು ಬರಹ

ವ್ಯಕ್ತಿ ಪ್ರಕೃತಿಯು ತನ್ನ ಪರಿಸರದ ಪ್ರಭಾವದ ವಿರುದ್ಧ ಪ್ರತಿಭಟಿಸಿ, ಸೆಣೆಸಿ ತನ್ನದೇ ನಡೆಗಳ ದಾರಿಯಲ್ಲಿ ಚಲಿಸಲು ಯಾವುದೋ ಒಂದು ಆಂತರಿಕ ಸೆಳೆತವಿರಬೇಕು. ಈ ಸೆಳೆತ ಇಂದು ನೆನ್ನೆಯದಲ್ಲ; ಇನ್ನೂ ಹಿಂದಿನದು, ಬಹುದೂರ ಕಾಲ ಹಿಂದಿನದು. ಎಂದೋ ಯಾವ ಕಾಲದಲ್ಲೋ ಯರ‍್ಯಾರ ಕಾಲ-ದೇಶ-ಪ್ರಭಾವ-ಪ್ರವಾಹಗಳ ಹರಿವಿನಲ್ಲೋ ಮೊಳೆತಿದ್ದಿರಬೇಕು. ಹೀಗೆ ಕಾಲಾಂತರ ಕಾದು ಕಾದು ತನ್ನನ್ನು ತಾನು ಅರಿವಿನಲ್ಲಿ ಕಂಡುಕೊಂಡುದುದು. ಇದು ಮೊಳೆತು ಬೆಳೆದು ವಿಕಾಸವಾಗಬಹುದಾದ ಬೀಜರೂಪ ಮಾತ್ರ. ಇದು ಬೆಳೆದು ಬೃಹತ್ ವೃಕ್ಷವಾಗಲು ಏನೆಲ್ಲಾ ಒದಗಿ ಬರಬೇಕೋ?
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿ ಸರಣಿಯ ಕೊನೆಯ ಕಂತು ನಿಮ್ಮ ಓದಿಗೆ

Read More

ವಸಂತಸೇನೆ ಎಂಬ ನನ್ನ ಮುತ್ತಜ್ಜಿಯ ಕಥೆ: ಸತೀಶ್‌ ತಿಪಟೂರು ಬರಹ

ನಮ್ಮ ಅಜ್ಜಿಯರಿಂದ ಬಳುವಳಿಯಾಗಿ ಬಂದ ನಿವೇಶನದಲ್ಲಿ ಅರವತ್ತು ವರ್ಷಗಳ ಹಿಂದೆ ನಮ್ಮ ತಂದೆಯವರು ಕಟ್ಟಿದ್ದ ಈ ಮನೆಯಲ್ಲಿ ಇವರೆಲ್ಲರ ವೈವಿಧ್ಯಮಯ ಸ್ಮೃತಿ ಕಥನಗಳು ನೆಲೆಗೊಂಡಿವೆ. ಇಷ್ಟಲ್ಲದೇ ಈ ಮನೆಯೇ ಕೇಂದ್ರವಾಗಿ ಇಷ್ಟು ವರ್ಷಗಳಲ್ಲಿ ನಡೆಯುತ್ತಿರುವ ನೃತ್ಯಶಾಲೆ, ಸಂಗೀತ ಶಾಲೆ, ನಾಟಕ ಶಾಲೆಯ ನೂರಾರು ಹುಡುಗ ಹುಡುಗಿಯರು ಈ ಮನೆಯ ಒಡನಾಟದಲ್ಲಿ ಬೆಳೆದಿದ್ದಾರೆ. ಮತ್ತು ಹೋರಾಟ, ಚಳುವಳಿ, ಕ್ರಾಂತಿ ಎನ್ನುವ ಕಾಮ್ರೇಡ್‌ಗಳು, ಕವಿಗಳೂ, ಲೇಖಕರು, ಪತ್ರಕರ್ತರು, ಪ್ರಗತಿಪರ ರಾಜಕೀಯ ನೇತಾರರೂ ಅಟ್ಟದ ಮೇಲಿನ ಸಭೆಗಳಿಂದಾಗಿ ಈ ಮನೆಯ ಭಾಗವಾಗಿದ್ದಾರೆ. ಅಂದಿನ ದಿನಗಳ ಈ ಮನೆಯನ್ನು ಕೆಲವು ಸ್ನೇಹಿತರು ಜಾತ್ಯಾತೀತ ಮಠವೆಂದೂ; ಅಲ್ಲಿ ನಿತ್ಯ ದಾಸೋಹವೆಂದು ನೆನಪಿಸಿಕೊಂಡು ಮಾತನಾಡುತ್ತಿದ್ದುದುಂಟು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಅಧ್ಯಾಯ ನಿಮ್ಮ ಓದಿಗೆ

Read More

ಆರ್ಯಕನೆಂಬ ನಾಯಕ: ಸತೀಶ್‌ ತಿಪಟೂರು ಬರಹ

ನಾವು ಮಾಡುವ ರಂಗಕೃಷಿಯು ಪ್ರಾಮಾಣಿಕವಾಗಿದ್ದರೆ ಪ್ರತಿಕ್ಷಣವೂ ಹುಟ್ಟುವ ಅಹಂಕಾರವನ್ನು ವಿಸರ್ಜಿಸುತ್ತಲೇ ಇರುತ್ತದೆ ಎಂದು ಹೇಳಿದೆ. ಯಾರ ಸ್ಮೃತಿಗಳು ಸಮಾಜದ ನೋವಿನಿಂದ ಅದ್ದುಕೊಂಡಿರುತ್ತದೋ, ಸಮುದಾಯದ ಕಾಳಜಿಗಳಲ್ಲಿ ಬೆಸೆದುಕೊಂಡಿರುತ್ತದೋ, ಅಂತಹ ಪ್ರಕೃತಿಗಳು ಹಣ, ಅಧಿಕಾರ, ಪ್ರಭಾವಳಿಗಳಿಂದ ಒದಗಿಬರಬಹುದಾದ ಅಹಂಕಾರದಿಂದ ಮುಕ್ತವಾಗಿರುತ್ತದೆ. ಇಲ್ಲಿ ಯಾರ ಬೇರುಗಳು ಸಡಿಲವಾಗಿರುತ್ತದೋ ಅಂತಹವರ ಪ್ರಕೃತಿ ಪಲ್ಲಟವಾಗುತ್ತದೆ; ಮತ್ತು ಹಾಗೆ ಆದುದಕ್ಕೆ ಇರುವ ಕಾರಣಗಳನ್ನು ದೊಡ್ಡದು ಮಾಡುತ್ತಾ ತಮ್ಮ ಇರುವಿಕೆಗೆ ಸಮರ್ಥನೆಯನ್ನು ನೀಡುತ್ತದೆ ಎಂದು ಹೇಳಿದೆ. ಹಣ, ಅಧಿಕಾರ, ಪ್ರಭಾವಳಿಗಳನ್ನು ಧಾರಣೆ ಮಾಡಿಕೊಂಡು ಜೀರ್ಣಿಸಿಕೊಳ್ಳುವ ಶಕ್ತಿಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

ಆದಿವಾಸಿಗಳ ಜಗತ್ತು: ಸತೀಶ್‌ ತಿಪಟೂರು ಬರಹ

ಇಲ್ಲಿ ನಮಗರಿವಿಲ್ಲದಂತೆ ರಂಗ ಕ್ರಿಯೆಯೊಂದು ಜರಗುತ್ತಿರುವುದನ್ನು ನಾನು ಗಮನಿಸಿದೆ. ಪ್ರತಿಯೊಂದು ತಂಡ ಅವರ ಕ್ರಿಯಾವಿಧಿ ಆಚರಣೆಗಳನ್ನು ತೋರುವಾಗ, ಕಥನಗಳನ್ನು ಹೇಳುವಾಗ, ನೃತ್ಯ ಪ್ರದರ್ಶಿಸುವಾಗ ಉಳಿದ ತಂಡದವರು ಪ್ರೇಕ್ಷಕರಾಗಿರುತ್ತಿದ್ದರು. ಇದನ್ನೆಲ್ಲ ಗಮನಿಸುತ್ತಿದ್ದ ನನಗೆ ಒಂದು ರೀತಿಯ ಕಳವಳ ಶುರುವಾಯಿತು. ಕಾಡಿನೊಳಗಿನ ಇವರ ಆಚರಣೆಯ, ಸಂಪ್ರದಾಯ, ಕ್ರಿಯಾವಿಧಿ, ನೃತ್ಯ ಸಂಭ್ರಮಗಳೆಲ್ಲವೂ ಹೊರಗೆ ನೋಡಲು ಕುತೂಹಲವೆನಿಸಿದರೂ ಶುಷ್ಕವೆನಿಸುತ್ತಿತ್ತು. ಸಂದರ್ಭಗಳಿಲ್ಲದೆ ವಾತಾವರಣವಿಲ್ಲದೆ ಭಾವನೆಗಳು ಅರಳುವುದಿಲ್ಲ. ಅನುಕರಿಸಿದರೂ ಅಣಕವೆಂಬಂತೆ ಕಾಣುತ್ತಿತ್ತು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

‘ಆದಿಮ’ದ ಸನ್ನಿಧಿಯಲ್ಲಿ: ಸತೀಶ್‌ ತಿಪಟೂರು ಬರಹ

ನಾಟಕದ ಪ್ರಕ್ರಿಯೆಯಲ್ಲಿ ನಾಟಕಕಾರ, ನಿರ್ದೇಶಕ ಮುಂತಾದವರು ನಾಟಕವನ್ನು ಅವರವರ ದೃಷ್ಠಿಕೋನಗಳಲ್ಲಿ ಮಕ್ಕಳ ಮೂಲಕ ವ್ಯಾಖ್ಯಾನಿಸಲು ಪ್ರಯತ್ನಿಸುತ್ತಿದ್ದರೆ, ಒಮ್ಮೊಮ್ಮೆ ಮಕ್ಕಳು ಅದನ್ನು ಮತ್ತೊಂದು ನೆಲೆಯಲ್ಲಿ ಕಾಣಿಸಿಬಿಡುತ್ತಾರೆ. ನಾಟಕವು ಮಕ್ಕಳನ್ನು ಒಳಗೊಳ್ಳುವ ಪ್ರಕ್ರಿಯೆಯು ಅವರ ಮನಸುಗಳಲ್ಲಿ ಕತೆಗಳ ಬೀಜಗಳನ್ನು ಬಿತ್ತಿ ಅವರ ಕಲ್ಪನೆಗಳ ಕಾವಿನಲ್ಲಿ ಮೊಳೆಸಿ, ಬೆಳೆಸುತ್ತಾ ನಾಟಕವು ಅವರ ದೇಹ – ಧ್ವನಿಗಳನ್ನು ವ್ಯಾಪಿಸಿ ಆಕಾರ ಪಡೆದು ಅರಳಿಕೊಂಡತೆ ಆಗಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ