Advertisement

Tag: ಸರಣಿ

ಕಣಗಾಲ ಮತ್ತು ಕಳ್ಳರು: ಎಸ್. ಗಂಗಾಧರಯ್ಯ ಅನುಭವ ಕಥನ

ಮೂರ್ತಿ ಚಕ್ಕನೆ ಎದ್ದವನೇ ನನ್ನನ್ನು `ಲೇ ಆ ಕಡಿಂದ ಓಡಿ ಬಾರೋ’ ಅಂತ ನನಗೆ ಕೂಗಿ ಹೇಳುತ್ತಾ ಕಳ್ಳನ ಹಿಂದೆ ಬಿದ್ದ. ನಾನು ಕೂತಲ್ಲಿಂದ ಬೇಗನೇ ಮೇಲೆದ್ದರೂ ಇದು ನಾನು ನೋಡಿದ್ದ ಮೊದಲ ಕಳ್ಳ ಹಾಗೂ ಕಳ್ಳತನವಾದ್ದರಿಂದ ಒಂಚೂರು ಗಲಿಬಿಲಿಗೊಂಡು ಅವರತ್ತ ತಕ್ಷಣ ಓಡಲಾಗಲಿಲ್ಲ. ಅವರಿಬ್ಬರೂ ಆಗಲೇ ನಮ್ಮ ಹೊಲವನ್ನು ದಾಟಿದ್ದರು. ಪಕ್ಕದ ಹೊಲದಲ್ಲಿ ಮೂರ್ತಿಯ ಕೂಗು ಕೇಳಿಸುತ್ತಿತ್ತು. ನಾನು ಉಸುರುಯ್ದುಕೊಂಡು ನಮ್ಮ ಹೊಲದ ಬದಿಗೆ ಬರುವಷ್ಟರಲ್ಲಿ ಮೂರ್ತಿ ಹಿಂದಿರುಗಿ ಬರುತ್ತಿದ್ದ. `
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಎಂಟನೆಯ ಕಂತು

Read More

ಸಂದರ್ಶಕರಿಗೆ ಆಟ ಹಾಜರಾದವರಿಗೆ ಸಂಕಟ…: ಬಸವನಗೌಡ ಹೆಬ್ಬಳಗೆರೆ ಸರಣಿ

ಈ ಘಟನೆಯಿಂದ ನಾನು ಕಲಿತ, ಪರರೂ ಅನುಸರಿಸಬಹುದಾದ ಒಂದು ಪಾಠವನ್ನು ನಾನಿಲ್ಲಿ ಹಂಚಿಕೊಳ್ಳ ಬಯಸುತ್ತೇನೆ. ನಾವು ಯಾವುದೇ ಸಂದರ್ಶನಕ್ಕೂ ಹಾಜರಾಗುವ ಮುನ್ನ ನಾವು ಅವರು ನೀಡಿದ್ದ ಸಮಯಕ್ಕಿಂತ ಮುಂಚಿತವಾಗಿ ಹೋಗಬೇಕು. ಅಲ್ಲದೇ ಅವರು ಕೋಪ ಬರುವಂತಹ ಯಾವುದೇ ಪ್ರಶ್ನೆಯನ್ನು ಕೇಳಿದ್ರೂ ಅವರು ನಿಮ್ಮ ಮಾತಿನ ಶೈಲಿ ಮತ್ತು ಸಹನೆ ಪರೀಕ್ಷಿಸುತ್ತಿದ್ದಾರೆ ಎಂದು ತಿಳಿಯಬೇಕು. ಸಾಧ್ಯವಾದಷ್ಟು ಸಂದರ್ಶಕರ ಕಣ್ಣಲ್ಲಿ ಕಣ್ಣಿಟ್ಟು ಉತ್ತರಿಸಬೇಕು. ಉತ್ತರ ಗೊತ್ತಿಲ್ಲದಿದ್ದಾಗ ಪ್ರಾಮಾಣಿಕವಾಗಿ ಗೊತ್ತಿಲ್ಲವೆಂದು ಹೇಳುವುದರ ಜೊತೆಗೆ ನಾನು ಇದರ ಬಗ್ಗೆ ತಿಳಿದುಕೊಳ್ಳುತ್ತೇನೆ ಎಂದು ಹೇಳಬೇಕೇ ಹೊರತು ತಪ್ಪು ಉತ್ತರ ಹೇಳಬಾರದು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಬರವಣಿಗೆಯ ಹುಚ್ಚು ಹತ್ತಿದ್ದ ದಿನಗಳು…: ಎಚ್. ಗೋಪಾಲಕೃಷ್ಣ ಸರಣಿ

ಪತ್ರಿಕೆಗಳಿಗೆ ಬರಹ ರವಾನೆ ಆದಾಗ ಅಸ್ವೀಕೃತ ಆದರೆ ವಾಪಸ್ ಕಳಿಸಲು ಅಂಚೆ ಚೀಟಿ ಹಚ್ಚಿದ ಕವರ ಸಂಗಡ ಹೋಗುತ್ತಿತ್ತು. ಆಗ ಅರವತ್ತು ಎಪ್ಪತ್ತರ ದಶಕದಲ್ಲಿ “ಅಸ್ವೀಕೃತ ಲೇಖನಗಳನ್ನು ವಾಪಸ್ ಪಡೆಯಲು ಅಂಚೆ ಚೀಟಿ ಹಚ್ಚಿದ ಸ್ವ ವಿಳಾಸದ ಕವರ್ ಸಂಗಡ ಇರಲಿ” ಎಂದು ಎಲ್ಲಾ ಪತ್ರಿಕೆಗಳೂ ಬರಹಗಾರ ಪ್ರಭುಗಳಿಗೆ ವಿನಂತಿ ಮಾಡುತ್ತಿದ್ದರು. ಅದರಂತೆ ನಾವು ಬರಹಗಾರ ಪ್ರಭುಗಳು ಅವರ ವಿನಂತಿಯನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೨ನೇ ಬರಹ ನಿಮ್ಮ ಓದಿಗೆ

Read More

ಸುಂದರ, ಸಮೃದ್ಧ ಕಾಡಿನ ರೋಚಕ ಕಥೆಗಳು: ರೂಪಾ ರವೀಂದ್ರ ಜೋಶಿ ಸರಣಿ

ತುಂಬ ದಟ್ಟವಾದ ಎತ್ತರವಾದ ಮರಗಳಿಂದ ಕಂಗೊಳಿಸುವ ಕಾಡಿನಿಂದ ಆವೃತವಾದ ಆ ಗುಡ್ಡ ನೋಡುವುದೆಂದರೆ ಎಲ್ಲಿಲ್ಲದ ಖುಶಿ ನನಗೆ. ಅದರಲ್ಲಿ ಒಂದು ವಿಚಿತ್ರ ಆಕರ್ಷಣೆ ಇತ್ತು. ಹಗಲು ಅಷ್ಟು ಪ್ರೀತಿಯಿಂದ ನೋಡುವ ಗುಡ್ಡ, ರಾತ್ರಿ ಮಾತ್ರ ಭಯ ಹುಟ್ಟಿಸುತ್ತಿತ್ತು. ರಾತ್ರಿ ಊಟ ಮಾಡಿ ಕೈತೊಳೆಯಲು, ‘ವಂದ’ ಮಾಡಲು ಹೊರಗೆ ಬಂದಾಗಲೆಲ್ಲ ನಾವು ಅತ್ತ ದೃಷ್ಟಿ ಹರಿಸುವ ಸಾಹಸವನ್ನೇ ಮಾಡುತ್ತಿರಲಿಲ್ಲ. ಆಕಸ್ಮಿಕವಾಗಿ ಕಣ್ಣು ಅತ್ತ ಹೋದರೆ ಸಾಕು, ಕಾರ್ಗತ್ತಲೆಯಲ್ಲಿ ಮಸಿ ಬಳಿದಷ್ಟು ಕರ್ರಗೆ ಬೃಹದಾಕಾರವಾಗಿ ಕುಳಿತ ಅದು, ಭಯಂಕರವಾದ ಕಲ್ಪನೆ ಮೂಡಿಸಿ, ಎದೆಯ ನಗಾರಿ ಬಡಿತ ಏರುತ್ತಿತ್ತು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಹುಳಿ ಹಿಂಡುವವರ ಮಧ್ಯೆ ನಾವು ಹೇಗಿರಬೇಕು??: ಬಸವನಗೌಡ ಹೆಬ್ಬಳಗೆರೆ ಸರಣಿ

ನ್ಯಾಯಾಧೀಶರು ತಮ್ಮ ಮಾತನ್ನು ಮುಂದುವರೆಸಿ “ನೀನು ಹೇಗೆ ಕಿತ್ತ ಚೂರುಗಳನ್ನು ವಾಪಸ್ ತರಲು ಸಾಧ್ಯವಿಲ್ಲವೋ ಅದೇ ರೀತಿ ನೀನು ಮತ್ತೊಬ್ಬನ ಬಗ್ಗೆ ಹರಡಿದ ಸುಳ್ಳು ಸುದ್ದಿಯು ಹಲವರ ಕಿವಿ ತಲುಪಿ ಅವರು ಅದನ್ನೇ ಸತ್ಯವೆಂದು ನಂಬಿದ್ದಾರೆ. ಈ ರೀತಿ ನಂಬಿದವರೆಲ್ಲರಿಗೂ ಇದು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ ತಾನೇ?!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ