Advertisement

Tag: ಸರಣಿ

ಕಾಡುವ ಕಷ್ಟದ ಆ ದಿನಗಳು: ಮಾರುತಿ ಗೋಪಿಕುಂಟೆ ಸರಣಿ

ಅಂದು ಪೋಲೀಸರು ಹೋದ ಮೇಲೂ ಅಮ್ಮ ಅಳುತ್ತಲೆ ಇದ್ದಳು. ಬಡವರ ಪಾಲಿಗೆ ಕಣ್ಣೀರೇ ಅಲ್ಲವೆ ಸಾಂತ್ವನದ ಸೆಲೆಗಳು ಆಗಾಗಿ ಧಾರಾಕಾರವಾಗಿ ಹರಿಯುತ್ತಲೆ ಇತ್ತು. ಊರಿನಲ್ಲಿ ಯಾರ್ಯಾರೊ ಸಹಾಯವನ್ನು ಮಾಡಿದರು. ಅಮ್ಮನ ಒಳ್ಳೆಯ ಗುಣವೇ ಅದಕ್ಕೆ ಕಾರಣವಾಗಿತ್ತು. ಇದೆಲ್ಲ ನೋಡುತ್ತಿದ್ದಾಗ ದೇವರ ಮೇಲೆ ಕೋಪವು ಬರುತ್ತಿತ್ತು. ನನ್ನ ಓರಗೆಯವರೆಲ್ಲ ನಿಮ್ಮ ಮನೆಯ ಸಾಮಾನುಗಳನ್ನು ಪೋಲಿಸ್ನೋರು ತಗೊಂಡ್ಹೋದ್ರು ಅನ್ನುತ್ತಿದ್ದರು. ಆಗ ಇಡೀ ವ್ಯವಸ್ಥೆಯ ಮೇಲೆ ರೋಷವೇನೊ ಬರುತ್ತಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಬರವಣಿಗೆಯ ಶಿಸ್ತನ್ನು ಕಲಿಸಿದ ಸಿಸ್ಟರ್ ಲಾರೆನ್ಸಿಯಾ: ಸುಮಾವೀಣಾ ಸರಣಿ

ಸಿಸ್ಟರ್ ಲಾರೆನ್ಸಿಯ ಅವರಿಗೆ ಗಾರ್ಡೆನಿಂಗ್ ಅಂದರೂ ಇವರಿಗೆ ಬಹಳ ಇಷ್ಟವಿತ್ತು. ನಮ್ಮ ತರಗತಿಯ ಮುಂದೆ ಇದ್ದ ಹೂತೋಟದಲ್ಲಿ ಚಂದದ ಗಿಡಗಳನ್ನು ಬೆಳೆಸಿದ್ದರು. ಅದರಲ್ಲಿ ದಾಳಿಂಬೆ ಬಣ್ಣದ ಪಾಪಿ ಹೂಗಳು ಅರಳುತ್ತಿದ್ದುದನ್ನು ಅದರ ನಯವಾದ ಎಸಳುಗಳನ್ನು ಇವತ್ತಿಗೂ ಮರೆಯಲಾಗುತ್ತಿಲ್ಲ. ತಮ್ಮ ತಲೆಯ ವಸ್ತ್ರವನ್ನು ಸರಿ ಮಾಡಿಕೊಂಡು ಬಗ್ಗಿ ಕೆಲಸ ಮಾಡುತ್ತಿದ್ದರು. “ಮುಂದೆ ಮಿಡ್ಲ್ ಸ್ಕೂಲಿಗೆ ಹೋಗುತ್ತೀರ ಚಂದ ಕಲಿತು ಹೋಗಬೇಕು” ಎಂದು ಪದೇ ಪದೇ ಹೇಳುತ್ತಿದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ನಾಲ್ಕನೆಯ ಬರಹ

Read More

ಜಾರುವ ಜಡೆಯ ಹುಡುಗಿಯ ಪಾತ್ರ!: ಮಾರುತಿ ಗೋಪಿಕುಂಟೆ ಸರಣಿ

ಈ ಸಲ ತಲೆಗೆ ಜೋಡಿಸಿಕಟ್ಟಿದ್ದ ಜಡೆಕುಚ್ಚು ಬಿಚ್ಚಿಕೊಳ್ಳುವ ಸಂಭವವೆ ಜಾಸ್ತಿ ಇತ್ತು. ಹೇಗೊ ನೃತ್ಯವಂತೂ ಮುಗಿದಿತ್ತು. ಆದರೆ ನಂತರದ್ದು ಇನ್ನೊಂದು ಸಂಕಟ ದೃಶ್ಯ ಮುಂದುವರಿದಿತ್ತು. ಜಡೆ ಬೀಳಬಾರದು ಬಿದ್ದರೆ ಅಸಹ್ಯವಾಗಿ ಕಾಣುತ್ತದೆ ಎಂಬ ಭಯದಿಂದಲೆ ನಿಂತ ಸ್ಥಳದಲ್ಲಿಯೇ ನಿಂತು ಸಂಭಾಷಣೆ ಹೇಳುವುದಕ್ಕೆ ಪ್ರಾರಂಭಿಸಿದೆ. ನನ್ನ ಎದುರಿನ ಪಾತ್ರಧಾರಿ ಈ ಕಡೆಯಿಂದ ಆ ಕಡೆಯಿಂದ ಓಡಾಡುತ್ತ ಸಂಭಾಷಿಸುತ್ತಿದ್ದಾನೆ. ಆತ ನೀನು ಓಡಾಡುತ್ತ ಸಂಭಾಷಿಸು ಎಂಬ ಕಣ್ಸನ್ನೆ ನೀಡುತ್ತಿದ್ದಾನೆ. ಆದರೆ ನನ್ನ ಕಷ್ಟ ಅವನಿಗೆ ಅರ್ಥವಾಗುತ್ತಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

“ಆ ಸಾವು ಮತ್ತು ಹಸಿವು”: ಮಾರುತಿ ಗೋಪಿಕುಂಟೆ ಸರಣಿ

ಅಂದು ಮಧ್ಯಾಹ್ನದ ಉಪ್ಪಿಟ್ಟು ತರುವವನು ಮಧ್ಯಾಹ್ನ ಒಂದುಗಂಟೆಯಾದರೂ ಬಂದಿರಲಿಲ್ಲ. ಈಗಿನಂತೆ ಅವಾಗ ಯಾವ ಫೋನು ಸಹ ಇರಲಿಲ್ಲ. ಹಾಗಾಗಿ ಅವನು ಯಾಕೆ ಬರಲಿಲ್ಲ ಎಂದು ತಿಳಿದುಕೊಳ್ಳುವುದು ಹೇಗೆ ಎಂದು, ಹಿರಿಯ ವಿದ್ಯಾರ್ಥಿಯೊಬ್ಬನನ್ನು ಸೈಕಲ್ಲಿನಲ್ಲಿ ಆತ ಬರುವ ಹಾದಿಗೆ ಹೋಗಿ ನೋಡಿಕೊಂಡು ಬರುವಂತೆ ಕಳುಹಿಸಲಾಯ್ತು. ಆದರೆ ರಸ್ತೆಯಲ್ಲಿ ಆತನ ಸುಳಿವಿರಲಿಲ್ಲ. ಆದರಲ್ಲಿ ಮಕ್ಕಳು ಮಧ್ಯಾಹ್ನದ ಫಲಹಾರಕ್ಕಾಗಿ ಕಾದಿದ್ದರು. ಕೆಲವರ ಮುಖಗಳು ಬಾಡಿಹೋಗಿದ್ದವು. ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ಕತ್ತಲಲಿ ಕಂಡ ಮಿನುಗುವ ಕಣ್ಣುಗಳು….

ಆ ಹಾಳು ಗುಡಿಯ ಮುಂದೆ ಹೋದೆವು. ಒಬ್ಬರೂ ಕಾಣಲಿಲ್ಲ. ಅಷ್ಟೊತ್ತಿಗೆ ಒಳಗಿನಿಂದ ಒಬ್ಬ ಯುವಕ ಬಂದ. ದೇವಾಲಯದೊಳಗೆ ಸಂಪೂರ್ಣ ಕತ್ತಲು ಕವಿದಿತ್ತು. ಇದೇನು ಹೀಗೆ ಎಂದಾಗ, ಆತ ‘ಇರುವುದೊಂದೇ ಮೋಂಬತ್ತಿ ನಿಮ್ಮ ಬರುವಿಗೆ ಕಾಯುತ್ತಿದ್ದೆವು’ ಎಂದ. ಒಳಗೆ ಕಾಲಿಟ್ಟಕೂಡಲೆ ಆತ ಮೋಂಬತ್ತಿ ಹಚ್ಚಿದ. ಅಲ್ಲಿ ಕುರ್ಚಿ ಟೇಬಲ್ ಏನೂ ಇರಲಿಲ್ಲ. ಆ ಮೋಂಬತ್ತಿಯ ಬೆಳಕಲ್ಲಿ ನೂರಾರು ಯುವಕರು ಕುಳಿತಿದ್ದು ಮಸುಕು ಮಸುಕಾಗಿ ಕಾಣುತ್ತಿತ್ತು. ಅವರ ಕಣ್ಣುಗಳು ಮಾತ್ರ ನಕ್ಷತ್ರಗಳ ಹಾಗೆ ಹೊಳೆಯುತ್ತಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 64ನೇ ಕಂತು ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ