Advertisement

Tag: ಸಾಲೇಬೈಲು

ತಾಕಲಾಟಗಳ ಮೌನದಲ್ಲಿ ಮೂಡಿದ ವಸಂತ: ನಾರಾಯಣ ಯಾಜಿ ಬರಹ

ಚರ್ಚಿನಲ್ಲಿ ಹಾಡಿದ ಮಗಳು ರೈಲಿನ ಟಿಕೆಟ್ಟಿಗೆ ಹಣ ಕೂಡಿಟ್ಟಿದ್ದನ್ನು ತಿಳಿದಾಗ ಅದನ್ನು ದೆವ್ವವೆನ್ನುವಂತೆ ದೂರ ಎಸೆಯುವ ಅಸಹಾಯಕತೆ ಮತ್ತು ಉಮ್ಮಳಿಸುವ ದುಃಖ, ಕೋಪಬಂದರೂ ಅಜ್ಜನ ಭಾವನೆಯನ್ನು ಅರ್ಥಮಾಡಿಕೊಂಡು ಮೊಮ್ಮಗಳು ಒಳಗೊಳಗೇ ಅನುಭವಿಸುವ ತುಮುಲ ಇವೆಲ್ಲವನ್ನೂ ರಂಗದಲ್ಲಿ ತೆರೆದಿಡುವ ನಾಟಕದ ಕೊನೆಯಲ್ಲಿ ಮೊಮ್ಮಗಳು ಅಜ್ಜನನ್ನು ಒಪ್ಪಿಸಿ ಹೊರಟು ಹೋಗುವಾಗ ಮಗುವಿನ ಪ್ರತಿಭೆ ಕಾಡ ಬೆಳದಿಂಗಳಾಗಲಿಲ್ಲವಲ್ಲ ಎನ್ನುವ ನಿಟ್ಟಿಸಿರು, ಅಜ್ಜನ ಪಾಡು ಎಂಥದೋ ಎನ್ನುವ ನೋವು ಎರಡೂ ಕಾಡುತ್ತದೆ.
ಡಾ. ಶ್ರೀಪಾದ ಭಟ್ ನಿರ್ದೇಶನದ “ಮೌನ ಕಣಿವೆಯ ಹಾಡು” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಪ್ರಜ್ಞಾ ಪ್ರವಾಹವನ್ನು ಧಾರೆಯಾಗಿಸಿದ ಆಖ್ಯಾನಕಾರ ಕೆ. ಟಿ. ಗಟ್ಟಿ: ನಾರಾಯಣ ಯಾಜಿ ಬರಹ

ಗಟ್ಟಿಯವರು ಕಾದಂಬರಿ ಬರೆಯುವಾಗ ನವ್ಯ ತನ್ನ ಉತ್ತುಂಗದಲ್ಲಿ ಇತ್ತು. ತೇಜಸ್ವಿ, ಆಲನಹಳ್ಳಿ ಶ್ರೀ ಕೃಷ್ಣ, ಅಡಿಗರು, ಅನಂತಮೂರ್ತಿ ಇವರೆಲ್ಲರೂ ತಮ್ಮ ವಿಶಿಷ್ಟ ಬಗೆಯ ಬರಹಗಳಿಂದ ಕನ್ನಡ ಸಾಹಿತ್ಯಲೋಕವನ್ನು ರಂಜನೆಯಿಂದ ವೈಚಾರಿಕತೆಯೆಡೆಗೆ ತೆಗೆದುಕೊಂಡು ಹೋಗಿದ್ದರು.
ಇತ್ತೀಚೆಗೆ ತೀರಿಕೊಂಡ ಖ್ಯಾತ ಕಾದಂಬರಿಕಾರ ಕೆ.ಟಿ. ಗಟ್ಟಿಯವರ ಸಾಹಿತ್ಯದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಅರ್ಥಗಾರಿಕೆಯ ಭೇಷಜ, ಡಾ. ಹೈಗುಂದ ಪದ್ಮನಾಭಯ್ಯ: ನಾರಾಯಣ ಯಾಜಿ ಬರಹ

ಹೈಗುಂದ ಡಾಕ್ಟರರು ಕಾವ್ಯವನ್ನು ಅರ್ಥಗಾರಿಕೆಗೆ ಆಧಾರವನ್ನಾಗಿ ಬಳಸುತ್ತಿದ್ದರೂ ಅವರ ಆದ್ಯತೆ ಪ್ರಸಂಗಗಳ ಪದ್ಯಗಳಾಗಿತ್ತು. ಇಲ್ಲಿನ ಕಥಾನಕಕ್ಕೆ ನಿಷ್ಠರಾಗಿಯೇ ಅವರು ಕುಮಾರವ್ಯಾಸನನ್ನೊ ಜೈಮಿನಿಯನ್ನೋ ಬಳಸುತ್ತಿದ್ದರು. ಹಾಗಂತ ಅಲ್ಲಿನ ಪದ್ಯಗಳನ್ನು ಯಥಾವತ್ತಾಗಿ ತರುವದಕ್ಕೆ ಇವರ ವಿರೋಧವಿರುತ್ತಿತ್ತು. ಪ್ರಸಂಗಗಳಲ್ಲಿ ಕನ್ನಡವಲ್ಲದೇ ಅನ್ಯ ಭಾಷೆ ಅದು ಸಂಸ್ಕೃತವೇ ಆಗಿರಲಿ ಅದನ್ನು ಬಳಸುವದನ್ನು ಅಷ್ಟೇ ಉಗ್ರವಾಗಿ ವಿರೋಧಿಸುತ್ತಿದ್ದರು.
ಪ್ರಸಿದ್ಧ ಅರ್ಥಧಾರಿಗಳಾಗಿದ್ದ ಡಾ. ಹೈಗುಂದ ಪದ್ಮನಾಭಯ್ಯನವರ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಏಕೆ ಕುಣಿವೆ ತೂಕ ತಪ್ಪಿ ಸಾಕು ಕಾಲ ಭೈರವ

ಗೇರುಹಣ್ಣನ್ನು ತಿಂದು ಬೀಜವನ್ನು ಎಲ್ಲರೂ ಸೇರಿ ಒಂದೆಡೆ ಕೂಡಿಡುತ್ತಿದ್ದೆವು. ನೂರು ಬೀಜಗಳಾದ ಮೇಲೆ ಅದನ್ನು ಕಮ್ತೀರ ಅಂಗಡಿಗೆ ಕೊಟ್ಟರೆ ಅವರು ನಮಗೆಲ್ಲ ಒಂದೊಂದು ಆಯ್ಸ್-ಕ್ಯಾಂಡಿ ಕೊಡುತ್ತಿದ್ದರು. ತಂಪಾಗಿರುವ ಅದನ್ನು ತಿನ್ನುತ್ತಾ ಅದಕ್ಕೆ ಹಾಕಿರುವ ಕೆಂಪನೆಯ ಬಣ್ಣ ನಮ್ಮ ಬಾಯಿಯ ಸುತ್ತಮುತ್ತ ಚಂದದ ಪ್ರಭಾವಳಿಯನ್ನು ರಚಿಸುತ್ತಿತ್ತು. ನಮ್ಮ ಈ ಘನಂದಾರಿ ನಡೆ ಅದು ಹೇಗೋ ಪರಮಜ್ಜನಿಗೆ ಗೊತ್ತಾಗಿಬಿಡುತ್ತಿತ್ತು. ನಾರಾಯಣ ಯಾಜಿ ಬರಹ

Read More

ಪುರಾಣ ವಾಙ್ಮಯದ ರಸಋಷಿ ದೇರಾಜೆ ಸೀತಾರಾಮಯ್ಯ

ಕಲೆಯು ಕಾಲಕ್ಕೆ, ಕಾಲವು ನಟನಿಗೆ ಅನುಗುಣವಾಗಿ ತಿರುವುಗಳನ್ನು ಪಡೆಯುತ್ತದೆ ಎನ್ನುವುದನ್ನು ಮರೆಯಬಾರದು.  “ಕಾವ್ಯದ ರಚನೆ ಎಂದರೆ ಅದು ಭಾವನೆಗಳಲ್ಲಿ ಮುಳುಗಿಹೋಗುವುದಲ್ಲ, ಆದರೆ ಭಾವನೆಗಳಿಂದ ಮುಕ್ತನಾಗುವುದು, ವ್ಯಕ್ತಿತ್ವವನ್ನು ಪ್ರದರ್ಶಿಸುವುದಲ್ಲ ಬದಲಾಗಿ ತನ್ನ ವ್ಯಕ್ತಿತ್ವದಿಂದ ಬಿಡುಗಡೆ ಹೊಂದುವುದು” ಎಂದು ಎಲಿಯಟ್‌ ಹೇಳುತ್ತಾನೆ. ದೇರಾಜೆಯವರ ಸಂದರ್ಭದಲ್ಲಿ ಇದನ್ನು ನಾವು ಚೆನ್ನಾಗಿ ಅನ್ವಯಿಸಬಹುದು. ನಾರಾಯಣ ಯಾಜಿ ಬರಹ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ