Advertisement

Tag: ಸಾಹಿತ್ಯ

ಒಂದು ಸುಳ್ಳು ಒಂದು ಸತ್ಯ: ಆಶಾ ಜಗದೀಶ್ ಅಂಕಣ

ಬಹುಶಃ ಕತೆಗಳ ಅವಶ್ಯಕತೆಯಿಲ್ಲ ಆ ವನಸಿರಿಗೆ. ಜೀವಂತ ಕತೆ ಹೊತ್ತು ಓಡಾಡುವ ಅದೆಷ್ಟು ಜನ ಇಲ್ಲೊಮ್ಮೆ ಬಂದು ತಮ್ಮ ಜೋಡಿ ಹೆಜ್ಜೆಗಳ ಗುರುತು ಮಾಡಿ ಹೋಗಿದ್ದರೋ… ಕತೆಗಳು ನಮಗೆ ಬೇಕು. ನಮ್ಮೊಳಗಿನ ಕತೆಗಿಂತ ಭಿನ್ನವಾದ ಕತೆಯ ಕುರಿತಾದ ಹುಚ್ಚು ಕೂತೂಹಲವನ್ನ ತಣಿಸಿಕೊಳ್ಳಲಿಕ್ಕಾಗಿ… ಸುಳ್ಳೇ ಆದರೂ ನಂಬಲು ಸಿದ್ಧರಿರುತ್ತೇವಲ್ಲ ಹೇಗಿದ್ದರೂ… ಕತೆ ಕಟ್ಟುವುದರಲ್ಲಿ ನಿಸ್ಸೀಮರು ನಾವು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣ

Read More

ಕೇರಿಯ ಕುಟುಂಬವೊಂದರ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಪಕ್ಕದ ಊರಿಗೆ ಒಂದೆರಡು ಬಾರಿ ಹೋದಾಗ ಅವರ ಮನೆಗೆ ನಾವು ಹೋಗಿದ್ದೆವು. ಆದರೆ ಹಿರಿಮಗ ಪಾಂಡುರಂಗನ ಮೇಲೆ ಬಹಳಷ್ಟು ಜವಾಬ್ದಾರಿ ಇತ್ತು. ಆತ ದುಡಿದ… ದುಡಿಯುತ್ತಲೆ ಇದ್ದ. ತಂಗಿಯ ಮದುವೆಯನ್ನು ಬಹಳ ಜೋರಾಗಿಯೆ ಮಾಡಿದ. ವ್ಯಾಪಾರ ಚೆನ್ನಾಗಿಯೇ ನಡೆಯುತ್ತಿತ್ತು. ತಮ್ಮನ ಮದುವೆಯೂ ಆಗಿ ಆತ ಬೇರೆಯಾದನು. ಪಾಂಡುರಂಗ ಎಲ್ಲ ಜವಾಬ್ದಾರಿಗಳ ನಡುವೆ ಒಂದಿಷ್ಟು ಸಾಲಗಾರನಾದ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

ಮೈಮನಗಳ ತಾಕಲಾಟದಲ್ಲಿ ಮೂಡಿದ ಜೀವನ ಶೋಧ: ಸುಧಾಕರ ದೇವಾಡಿಗ ಬಿ ಬರಹ

ಸುಮನ ತನ್ನ ಉದ್ಯೋಗದಲ್ಲಿ ಎದುರಿಸುವ ಮತ್ತೊಂದು ಸೂಕ್ಷ್ಮ ಇಕ್ಕಟ್ಟೆಂದರೆ, ತಾಯಿಯ ಮೊಲೆಯನ್ನು ಕಚ್ಚಿಕೊಂಡಿರುವ ಮರಿಗಳನ್ನು ತಾಯಿ ಇಲಿಯಿಂದ ಬೇರ್ಪಡಿಸುವ ಕ್ರಿಯೆ. ಇದು ಅವಳಿಗೆ ಹಿಂಸೆಯನ್ನುಂಟು ಮಾಡುತ್ತದೆ. ಆ ಟ್ರಾನ್ಸ್‌ಜೆನಿಕ್‌ ಇಲಿಗಳ ಸ್ಥಿತಿಯು ತನ್ನ ಸ್ಥಿತಿಗಿಂತ ಭಿನ್ನವೇನಲ್ಲ ಎಂದು ಭಾಸವಾಗುತ್ತದೆ. ಆ ಇಲಿಗಳಿಗೆ ಅನಸ್ತೇಶಿಯಾ ನೀಡಿ ಪ್ರಜ್ಞೆಯನ್ನು ತಪ್ಪಿಸುವುದು. ನಂತರ ಅದರ ದೇಹದ ಒಂದೊಂದು ಭಾಗವನ್ನು ಬೇರ್ಪಡಿಸುವ ಕ್ರಿಯೆ ಇದು ತನ್ನಿಂದ ಸಾಧ್ಯವಿಲ್ಲ ಎಂದು ಕೈ ಚೆಲ್ಲುತ್ತಾಳೆ.
ಚೀಮನಹಳ್ಳಿ ರಮೇಶ್‌ಬಾಬು ಕಾದಂಬರಿ “ಮಂಪರು” ಕುರಿತು ಸುಧಾಕರ ದೇವಾಡಿಗ ಬಿ ಬರಹ

Read More

ದೇವರ ಉತ್ಸವ, ಅಭಿಮಾನ, ಬಾಲ್ಯದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಒಮ್ಮೆ ನಾನು ನನ್ನ ಓರಗೆಯವ ಇದೇ ಕ್ರಿಕೆಟ್‌ ಕಾರಣಕ್ಕೆ ಜಗಳಕ್ಕೆ ಬಿದ್ದಿದ್ದೆವು. ನನಗೂ ಎಲ್ಲಿಲ್ಲದ ಕೋಪ ಬಂದು ಉಸಿರು ಕಟ್ಟುವಂತೆ ಅವನ ಕೊರಳಿಗೆ ಕೈ ಹಾಕಿ ಒಬ್ಬರನ್ನೊಬ್ಬರು ಬಿಗಿಯಾಗಿ ಹಿಡಿದುಕೊಂಡು ಹೊರಳಾಡುವಾಗ ಕರ್ಕೆಯ (ಹಸಿರು ಹುಲ್ಲು) ದಂಟು ನನ್ನ ಭುಜವನ್ನು ಗಾಯ ಮಾಡಿತ್ತು. ಅದರ ಮಾರ್ಕ್ ಈಗಲೂ ಇದೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ನಮ್ಮೊಳಗೂ ಒಂದು “ಬೌಲ್” ಇದೆಯೇ?: ಬಿ.ಕೆ. ಸುಮತಿ ಬರಹ

ಮನುಷ್ಯ ಬದುಕಿನ ಎಲ್ಲ ಹೋರಾಟಗಳನ್ನೂ ಆರಂಭದ ಬಿಕು ಮತ್ತು ಮಾಲಿಂಗನ ಯುದ್ಧದಲ್ಲಿಯೇ ಕಾಣಬಹುದು. ಆ ಯುದ್ಧ ಒಂದು ಚಿತ್ರಮಾಲಿಕೆಯ ಹಾಗಿದೆ. ವಸ್ತುವನ್ನು ಅಪ್ಪಿಕೊಳ್ಳುವುದು, ಬಿಟ್ಟು ಕೊಡಲು ಹೆಣಗಾಡುವುದು, ಕಿತ್ತುಕೊಳ್ಳುವುದು, ಇದೇ ಅಲ್ಲವೇ ನಮ್ಮ ಹೋರಾಟ? ಶಬ್ದ ನಿಶ್ಶಬ್ದದ ಹೋರಾಟ. ಕೊಟ್ಟು ಬಿಟ್ಟಿದ್ದರೆ ಏನಾಗುತ್ತಿತ್ತು? ಮಾಲಿಂಗನಿಗೆ ಅದನ್ನು ಪಡೆಯುವ ಅರ್ಹತೆ ಇತ್ತೇ? ಬಿಕು ಆನಂದನ ಅಗಲಿಕೆಯಿಂದ ವಿಚಲಿತನಾಗಿ ಬಳಲಿ ನಿತ್ರಾಣನಾಗುವುದು ಏಕೆ? ಬಿಕುವಿನ ಆರೈಕೆಯಲ್ಲಿ ಅರಳಿದ ಸುಮಲತೆ ಆತನನ್ನು ಬಿಟ್ಟು ಹೊರಡಲು ಮನಸ್ಸು ಮಾಡಿದ್ದಾದರೂ ಹೇಗೆ?
ಡಾ. ಎಂ.ಎಸ್.‌ ಮೂರ್ತಿಯವರ “ಬೌಲ್‌” ಕಾದಂಬರಿಯ ಕುರಿತು ಬಿ.ಕೆ. ಸುಮತಿ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ