Advertisement

Tag: ಸಿನಿಮಾ

ಹಲವು ಹೃದಯಗಳ ಮುಟ್ಟಿದ ಚಲನಚಿತ್ರೋತ್ಸವ..

ಮೂರನೇ ಅತ್ತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿರುವ ʻಫೋಟೋʼ ಚಿತ್ರದ್ದು ಬೇರೆಯದೇ ರೀತಿಯ ಛಾಪು. ಚಿತ್ರೋತ್ಸವದ ಎರಡನೇ ದಿನ 4ನೇ ಪರದೆಯಲ್ಲಿ ಮೊದಲ ಪ್ರದರ್ಶನ ಕಂಡ ಈ ಚಿತ್ರ ನೋಡಲು ಪ್ರೇಕ್ಷಕರು ಕಿಕ್ಕಿದು ತುಂಬಿದ್ದರು. ಆಸನಗಳು ಸಾಲದಕ್ಕೆ ಚಿತ್ರಮಂದಿರದ ನಿಯಮವನ್ನೂ ಮುರಿದು ಮೆಟ್ಟಿಲುಗಳ ಮೇಲೆ ಕುಳಿತು ಸಹ ಹಲವರು ಚಿತ್ತ ಬದಲಿಸದೇ ನೆಟ್ಟ ದೃಷ್ಟಿಯಲ್ಲೇ ಚಿತ್ರವನ್ನು ವೀಕ್ಷಿಸಿದರು.
‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ನೋಡಿದ ಸಿನಿಮಾಗಳ ಕುರಿತು ಕುಮಾರ ಬೇಂದ್ರೆ ಬರಹ

Read More

ಕಪ್ಪು ಬಿಳುಪಿನಾಚೆಯ…. ಇರಟ್ಟ

ಕೊನೆಗೂ ವಿನೋದ್ ಸತ್ತಿದ್ದು ಹೇಗೆ?! ಊರ ತುಂಬ ಶತ್ರುಗಳನ್ನು ಸಂಪಾದಿಸಿದ ಅವನನ್ನು ಅವನು ಕೆಲಸ ಮಾಡುವ ಸ್ಟೇಷನ್ನಿನಲ್ಲಿಯೇ ಸಾಯಿಸಿದವರು ಯಾರು?! ಎನ್ನುವುದು ಚಿತ್ರದ ಕಥಾ ಹಂದರ. ಚಿತ್ರವನ್ನು ಮತ್ತೆ ಮತ್ತೆ ನೋಡುತ್ತಾ, ಅದು ಹೇಳುತ್ತಿರುವ ವಿಷಯವನ್ನು ಬಗೆಯುತ್ತಾ ಹೋದರೆ ಪ್ರತಿ ಸಲವೂ ಹೊಸ ಹೊಸ ಆಯಾಮಗಳು ಹೊಳೆಯುತ್ತವೆ, ಮನುಷ್ಯನ ಎರಡು ವೈರುಧ್ಯಗಳನ್ನ ಯಾವ ಅವಸರವಿಲ್ಲದೆ ಬೆನ್ನಲ್ಲೊಂದು ಛಳುಕು ಹುಟ್ಟಿಸುತ್ತ ಸಾಗುತ್ತದೆ.
ಮಲಯಾಳಂನ “ಇರಟ್ಟ” ಸಿನೆಮಾದ ಕುರಿತು ಜಯರಾಮಚಾರಿ ಬರಹ ನಿಮ್ಮ ಓದಿಗೆ

Read More

ಸಿನಿಲೋಕದಲ್ಲಿ ವಿಹರಿಸುತ್ತಾ….

ಜಗತ್ತಿನಲ್ಲಿ ಮೂಡಿದ ಎಲ್ಲ ವಿಪ್ಲವಗಳಿಗೆ ಪ್ರತಿಸ್ಪಂದಿಸುತ್ತಾ ಬಂದ ಜಾಗತಿಕ ಸಿನಿಮಾ ಇಪ್ಪತ್ತೊಂದನೆಯ ಶತಮಾನದ ಬೆಳವಣಿಗೆಗೆ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದನ್ನು ಈ ನಲವತ್ತು ಸಿನಿಮಾಗಳು ದಾಖಲಿಸುತ್ತವೆ. ಹಾಗಾಗಿ ಈ ಲೇಖನಗಳು ಒಂದು ಸಾರ್ಥಕ ಪ್ರಯತ್ನ ಎಂದು ನನ್ನ ಅನಿಸಿಕೆ. ಹೀಗೆ ಹೇಳುತ್ತಲೇ ಕಳೆದೆರಡು ದಶಕಗಳಲ್ಲಿ ಜಾಗತಿಕ ಸಿನಿಮಾಗಳಲ್ಲಿ ಮೂಡಿಬಂದ ಹೊಸಾ ಶೈಲಿಯಾದ ʻಸ್ಲೋ ಸಿನಿಮಾ ಚಳುವಳಿʼಯ ಒಂದೆರಡು ಕೃತಿಗಳನ್ನು ಪರಿಚಯಿಸಿದ್ದರೆ ಸಾಂದರ್ಭಿಕವಾಗಿ ಇನ್ನಷ್ಟು ಉಪಯುಕ್ತತೆ ಬರುತ್ತಿತ್ತೇನೋ. ಹಾಲಿವುಡ್ ಉದ್ದಿಮೆಯ ಜನಪ್ರಿಯ ಸಿದ್ಧಸೂತ್ರಕ್ಕೆ ಪರ್ಯಾಯವಾಗಿ ಮೂಡಿಬಂದದ್ದೇ ʻಸ್ಲೋ ಸಿನಿಮಾ ಚಳುವಳಿʼ.
ಎ.ಎನ್. ಪ್ರಸನ್ನರವರ ಆಯ್ದ ಜಾಗತಿಕ ಸಿನಿಮಾಗಳ ಕುರಿತ ಲೇಖನಗಳ ಸಂಕಲನ “ಸಿನಿ ಲೋಕ 21”ಕ್ಕೆ ಗಿರೀಶ್‌ ಕಾಸರವಳ್ಳಿ ಬರೆದ ಮುನ್ನುಡಿ

Read More

ಬದುಕೇ ಒಂದು ಓಟದ ಸ್ಪರ್ಧೆ…

ಚಿತ್ರಕ್ಕೆ ನಮ್ಮ ಪ್ರವೇಶ, ಗಡಿಯಾರವನ್ನು ತಲೆಯ ಮೇಲಿಟ್ಟುಕೊಂಡಿದ್ದ ಮರದ ಮುಖದ ಅಷ್ಟಾವಕ್ರ ಪ್ರಾಣಿ ಬಾಯಿ ತೆರೆದು ಉಂಟಾದ ಕತ್ತಲೆಯಲ್ಲಿ ಕ್ಯಾಮೆರಾ ಜೂ಼ಮ್-ಇನ್ ಮಾಡುವ ಮೂಲಕ. ಆಗ ಎದುರಾಗುತ್ತದೆ ಒಂದಕ್ಕೊಂದು ಸಂಬಂಧ ಮತ್ತು ಸಾತತ್ಯವಿರದ ಪ್ರಶ್ನೆ ಮತ್ತು ಉತ್ತರಗಳನ್ನು ಹುಡುಕಾಡುವುದೇ ಮನುಷ್ಯನ ಬದುಕು ಎನ್ನುವುದನ್ನು ಟಿ. ಎಸ್. ಎಲಿಯಟ್ ಮತ್ತು ಹೆರ್‌ಬರ್ಗರ್ ಅವರಿಂದ ಉದ್ಧರಿಸಿದ ಸಾಲುಗಳು ಮೂಡಿ, ಅಡ್ಡಾದಿಡ್ಡಿ ಓಡೋಡುತ್ತಲಿರುವ ಜನಜಂಗುಳಿ ಮರೆಯಾಗುತ್ತಿದ್ದಂತೆ ಒಂದು ಕ್ಷಣವನ್ನೂ ವ್ಯರ್ಥ ಮಾಡದೆ, ಟೆಲಿಫೋನ್ ಬೂತಿನಲ್ಲಿ ಮಾನಿ ಲೋಲಾಗೆ ಮಾತಾಡುವ ದೃಶ್ಯದಲ್ಲಿ ಘಟನೆಯ ಮೂಲಕ್ಕೆ ಪರಿಚಿತಗೊಳ್ಳುತ್ತೇವೆ.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ ಸರಣಿ

Read More

ಭಾರತದ ಮೊದಲ ಮಕ್ಕಳ ಮೂಕಿ ಚಿತ್ರ ʻದಿ ಗಾರ್ಡ್‌ʼ

ಮಾತುಗಳು ಇರಬೇಕಾದ ಜಾಗದಲ್ಲಿ ಭಾವ ಸಂವೇದನೆ ಮತ್ತು ಸಂಜ್ಞೆಗಳನ್ನು ಪ್ರತಿಮಾತ್ಮಕವಾಗಿ ಸೃಷ್ಟಿಸಿ ಮೌನ ಪ್ರತಿಮೆ, ಭಾವರೂಪಕಗಳಲ್ಲೇ ಕತೆ ಹೇಳುವ ಪ್ರಯೋಗದಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ಇದು ಹಿರಿಯರ ಚಿತ್ರವಾಗಿದ್ದರೂ ಅಷ್ಟೇನೂ ಮಹತ್ವ ಅಥವಾ ಹೊಸತನದ ವಿಶೇಷತೆ ಇದಕ್ಕೆ ಸಲ್ಲುತ್ತಿರಲಿಲ್ಲ. ಈ ರೀತಿಯ ಮಕ್ಕಳ ಚಿತ್ರವನ್ನು ನಿರ್ಮಿಸಿದ ದಾಖಲೆ ಭಾರತೀಯ ಚಲನಚಿತ್ರ ಇತಿಹಾಸದಲ್ಲೇ ಇಲ್ಲ. ಹಾಗಾಗಿ ʻದಿ ಗಾರ್ಡ್‌ʼ ಚಿತ್ರ ಆ ಸ್ಥಾನವನ್ನು ತುಂಬಿ ಕನ್ನಡದ ಹೆಚ್ಚುಗಾರಿಕೆ ಮೆರೆದಿದೆ.
ಉಮೇಶ್‌ ಬಡಿಗೇರ ನಿರ್ದೇಶನದ ಭಾತರದ ಮೊದಲ ಮಕ್ಕಳ ಮೂಕಿ ಚಿತ್ರ ʻದಿ ಗಾರ್ಡ್‌ʼ ಕುರಿತು ಕುಮಾರ ಬೇಂದ್ರೆ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ