Advertisement

Tag: ಸಿನಿಮಾ

ಸಿನೆಮಾ ಜಗತ್ತಿನ ಒಳಹೊರಗು…

ಗಾಸಿಪ್ ಗ್ಲಾಮರಗಳ ಹೊರತಾಗಿಯೂ ಆ ಕಲಾವಿದರೂ ಮನುಷ್ಯರು, ನಮ್ಮಂತಹುದೇ ಅಂತಃಕರಣ ಉಳ್ಳವರು ಎಂಬ ಕನಿಷ್ಠ ಪ್ರಜ್ಞೆಯಿಲ್ಲದೇ ಜನರು ಪ್ರತಿಕ್ರಿಯಿಸುತ್ತಾರೆ. ಸಿನೆಮಾದವರೆಂದರೆ ಕೇವಲ ಪರದೆಯ ಮೇಲಿನ ಪಾತ್ರಗಳು ಮಾತ್ರ ಎಂದು ಗ್ರಹಿಸುವ ಮನಸ್ಸುಗಳಿಂದ ಬೇರೆನನ್ನು ನಿರೀಕ್ಷಿಸಲು ಸಾಧ್ಯ? ಎಂಬುದನ್ನು “ಬ್ರೇಕಿಂಗ್ ನ್ಯೂಸ್‍ಗಿಂತ ಬದುಕು ದೊಡ್ಡದು” ಎಂಬ ಪ್ರಬಂಧದಲ್ಲಿ ಹೆಸರಾಂತ ಕಲಾವಿದರೇ ಅನುಭವಿಸಿದ ನೋವಿನ ಪ್ರಸಂಗಗಳನ್ನು ಕಟ್ಟಿಕೊಡುತ್ತಾರೆ ಲೇಖಕರು.
ಎನ್.ಎಸ್. ಶ್ರೀಧರ ಮೂರ್ತಿಯವರ ಪ್ರಬಂಧಗಳ ಸಂಕಲನ “ಅಂದದ ಹೆಣ್ಣಿನ ನಾಚಿಕೆ”ಯ ಕುರಿತು ನಾಗರೇಖಾ ಗಾಂವಕರ ಬರಹ

Read More

ಮಹಾಮರ್ಕಟ ಮನಸ್ಸಿನ ಸುತ್ತ…

ಮಾರ್ಟಿನ್‌ ಸಾಮಾನ್ಯರಂತಿರಲು ಮತ್ತು ಕಿರು ಪ್ರಮಾಣದ ಸಾವಧಾನದಿಂದಿರಲು ಬೇಕಾದ ಆಂತರಿಕ ಜೀವರಸವೇ ಇಲ್ಲದವನ ಹಾಗೆ ಕಾಣುತ್ತಾನೆ.. ಯಾವ ಬಗೆಯಲ್ಲಿ ಯೋಚಿಸಿದರೂ ಅವನ ಬುದ್ಧಿ, ಮನಸ್ಸಿನ ಎಳೆಗಳಲ್ಲಿ ಹಿಂಸಿಸುವುದಲ್ಲದೆ ಬೇರೆ ಬಣ್ಣಗಳ ಛಾಯೆಯೇ ಇರುವಂತೆ ಕಾಣುವುದಿಲ್ಲ. ಅವನು ಇತರ ಸಾಮಾನ್ಯರೊಂದಿಗೆ ಹೋಲಿಸಿಕೊಳ್ಳುವ ಮಾತಂತೂ ಹತ್ತಿರ ಸುಳಿಯುವ ಹಾಗೆಯೇ ಇರುವುದಿಲ್ಲ. ಅವನು ಸದಾಕಾಲ ಉಳಿದವರಿಗಿಂತ ಭಿನ್ನವಾಗಿ ರಚಿಸಿಕೊಂಡ ಮತ್ತು ಅದನ್ನೇ ಸಹಜವೆಂದು ನಂಬಿರುವ ಮನೋನೆಲೆಯಲ್ಲಿರುವ ವ್ಯಕ್ತಿ.
ಎ.ಎನ್. ಪ್ರಸನ್ನ ಸರಣಿ

Read More

ವಿಶಿಷ್ಟ ದೃಶ್ಯಕಾವ್ಯ ʻನಾನು ಕುಸುಮಾʼ ಪನೋರಮಕ್ಕೆ

ಹೀಗೆ ಎಲ್ಲವೂ ಆಗಿದ್ದ ತಂದೆಯನ್ನು ಕಳೆದುಕೊಂಡ ಮೇಲೆ ಒಂಟಿ ತರುಣಿ ಕುಸುಮ ಮುಂದೆ ಏನಾದಳು ಎಂಬುದನು ಸ್ಮರಿಸಿಕೊಂಡರೆ ಕೈ ಕಾಲುಗಳು ನಡುಗುತ್ತವೆ. ಎಷ್ಟೊಂದು ಸುಂದರವಾಗಿ ಕಾಣುವ ಈ ಜಗತ್ತು ಮತ್ತು ವ್ಯವಸ್ಥೆಯ ಕರಾಳ ಮುಖವನ್ನು ಕಂಡು ಎಂಥವರಲ್ಲೂ ಆಕ್ರೋಶ ಪುಟಿದೇಳುತ್ತದೆ. ಕುಸುಮಳ ಆ ಸ್ಥಿತಿಗೆ ಕಾರಣವಾದವರನ್ನು ಸುಟ್ಟುಹಾಕಬೇಕೆನ್ನುವಷ್ಟು ಸಿಟ್ಟು ಎಲ್ಲ ಸಾತ್ವಿಕ ಮತ್ತು ಸತ್ಯ ಪರವಾದ ಮನಸ್ಸುಗಳಲ್ಲಿ ಉಕ್ಕುತ್ತದೆ! ಆದರೂ ಈ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯವೆ ಎಂಬುದೇ ವಿಷಾದದ ಪ್ರಶ್ನೆ!
ಈ ವರ್ಷದ ಪನೋರಮಕ್ಕೆ ಆಯ್ಕೆಯಾದ ʻನಾನು ಕುಸುಮಾʼ ಚಿತ್ರದ ಕುರಿತು ಕುಮಾರ ಬೇಂದ್ರೆ ಬರಹ

Read More

ದೂರ ದೂರ ಹೋದರೆ…

ನಾಯಕಿ ನೇಯ್ಗೆ ಮಾಡಿದ ಕೆಂಪು ವಸ್ತ್ರವನ್ನು ಶಾಲಾ ಕಟ್ಟಡದಲ್ಲಿ ಕಟ್ಟಲಾಗುತ್ತದೆ. ಈ ಎಲ್ಲ ಘಟನೆಗಳು ಜರುಗಿದರೂ ಒಮ್ಮೆಯೂ ನಾಯಕ-ನಾಯಕಿಯರ ಮುಖಾಮುಖಿಯಾಗಿರುವುದಿಲ್ಲ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವುದರಿಂದ ಉಂಟಾಗುವ ಕಲರವವನ್ನು ಮನೆಯಲ್ಲಿರುವ ನಾಯಕಿ ತನ್ನಜ್ಜಿಯ ಜೊತೆಗೆ ಕೇಳಿಸಿಕೊಳ್ಳುತ್ತ ತನ್ನಷ್ಟಕ್ಕೆ ಸಂಭ್ರಮಿಸುತ್ತಾಳೆ. ಶಿಕ್ಷಕ ನಾಯಕನಿಗೆ ಪ್ರತಿದಿನ ಮಕ್ಕಳ ಜೊತೆ ಊರಾಚೆ ಓಡಾಡುವುದು ವಾಡಿಕೆ. ಅವನು ಹೀಗೆ ಮಾಡುವುದನ್ನು ನಿರೀಕ್ಷೆಯಿಂದ ಕಾಯುವ ಆತಂಕ, ಲಜ್ಜೆ ಸಂತೋಷ ಇವುಗಳನ್ನು ಒಳಗೊಂಡ ನಾಯಕಿಗೆ ನಾಯಕನ ಪ್ರಥಮ ಭೇಟಿಯಾಗುತ್ತದೆ.
ಎ.ಎನ್. ಪ್ರಸನ್ನ ಬರೆಯುವ ಸಿನಿಮಾ ಸರಣಿ

Read More

ನಿಂಬೆಗಿಡಕ್ಕೇನು ಮನಸ್ಸಿದೆಯೇ?

ಆ ಭವ್ಯ ಮನೆಗೆ ಇಸ್ರೇಲಿನ ರಕ್ಷಣಾ ಮಂತ್ರಿಯ ಜೊತೆಗೆ ಅವನ ಹೆಂಡತಿ ಮೀರಾ ನವಾನ್‌  ಮತ್ತು ಅವನ ಅಧಿಕಾರಿ ವರ್ಗದಲ್ಲಿ, ರಕ್ಷಣಾ ಮಂತ್ರಿಯಲ್ಲಿ ಅನುರಾಗದಲೆಗಳನ್ನು ಹುಟ್ಟಿಸುವ ಸುಂದರಿಯೊಬ್ಬಳು ಇರುತ್ತಾಳೆ. ಜೊತೆಗೆ ಹತ್ತಾರು ಜನ ಸಹಾಯಕ ವರ್ಗದವರು. ನೋಡನೋಡುತ್ತಿದ್ದಂತೆ ತಾನು ಅತ್ತಿತ್ತ ಓಡಾಡಿ ಇಟ್ಟಿದ್ದ ಹೆಜ್ಜೆಗಳ ಮೇಲೆ ಬೇರೆ ಬೇರೆ ಹೆಜ್ಜೆಗಳು ಕಾಣುತ್ತವೆ. ಜೊತೆಗೆ ಅಷ್ಟುದ್ದಕ್ಕೂ ಬೇಲಿ ಹಬ್ಬಲು ಪ್ರಾರಂಭವಾಗುತ್ತದೆ. ಇಸ್ರೇಲಿನ ಸೀಕ್ರೆಟ್‌ ಪೊಲೀಸ್‌ನವರು ರಕ್ಷಣಾ ಮಂತ್ರಿಯ ಹಿತ ದೃಷ್ಟಿಯಿಂದ ಮತ್ತು ಉಗ್ರರ ಆಕ್ರಮಣದ ಸಂಭಾವ್ಯದ ಕಾರಣ ಇಡೀ ನಿಂಬೆ ಗಿಡದ ತೋಟವನ್ನು ಕಡಿಯಬೇಕೆಂದು ಯೋಚಿಸುತ್ತಾರೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ