Advertisement

Tag: ಸುಧಾ ಆಡುಕಳ

ನೀಲಿ ಜಗತ್ತು: ಸುಧಾ ಆಡುಕಳ ಅಂಕಣ

“ಇಕಾ, ನೀನು ಇದನ್ನೊಂದು ಸಲ ಓದು. ಬರೀ ನಿನ್ನ ಶಾಲೆ ಪುಸ್ತಕ ಓದಿ ಹಾಳಾಗಬೇಡ. ಇದನ್ನು ಓದಿದ್ರೆ ನಿಂಗೂ ಮಾನ, ಮರ್ಯಾದೆ ಎಲ್ಲ ಮರೆತುಹೋಗ್ತದೆ.” ಎನ್ನುತ್ತಾ ಹೆಣ್ಣು ಗಂಡುಗಳೆರಡು ವಿಚಿತ್ರ ಭಂಗಿಯಲ್ಲಿರುವ ಪುಸ್ತಕವನ್ನು ಅವಳೆಡೆಗೆ ಹಿಡಿದ. ಅದನ್ನು ನೋಡಿದ್ದೇ ನೀಲಿಯ ಎದೆಯಲ್ಲಿ ನಡುಕ ಪ್ರಾರಂಭವಾಗಿ ಇದ್ದೆನೋ ಬಿದ್ದೆನೋ ಎಂದು ಮನೆಯೆಡೆಗೆ ಓಡತೊಡಗಿದಳು. ಆನಂದನ ಅಮ್ಮನಿಗೆ ಇವೆಲ್ಲವನ್ನೂ ಹೇಳಬೇಕೆಂದು ಎಷ್ಟೋ ಸಲ ಅಂದುಕೊಂಡಳಾದರೂ ಮಗನನ್ನು ದನಕ್ಕೆ ಬಡಿಯುವಂತೆ ಬಡಿಯುವ ಅವಳು ಇಂಥ ಸುದ್ದಿ ಕೇಳಿದರೆ ಅವನನ್ನು ಕೊಂದೇಬಿಟ್ಟಾಳೆಂದು ಸುಮ್ಮನಾದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಲಕ್ಕೀ ನಂಬರ್ 55: ಸುಧಾ ಆಡುಕಳ ಅಂಕಣ

ಓಸಿಯೆಂಬುದು ಹೊಳೆಸಾಲಿನ ದಿನದ ಮಾತುಕತೆಯ ಭಾಗವಾಗಿಹೋಯಿತು. ಪಡ್ಡೆ ಹುಡುಗರು ಹಣ ಕಟ್ಟುವುದನ್ನು ನೋಡಿ ಕೆಲವು ವಯಸ್ಸಾದ ಗಂಡಸರು ರೂಪಾಯಿ, ಎರಡು ರೂಪಾಯಿಗಳನ್ನು ತಮ್ಮ ಹೆಂಡತಿಯರ ಕಣ್ತಪ್ಪಿಸಿ ಕಟ್ಟತೊಡಗಿದರು. ಆದರೆ ನಿಧಾನವಾಗಿ ಅವರಿಗೆಲ್ಲ ತಮ್ಮ ಹೆಂಗಸರೂ ಕೂಡ ಕವಳದ ಸಂಚಿಯಲ್ಲಿ ಬಚ್ಚಿಟ್ಟ ನಾಲ್ಕಾಣೆ, ಎಂಟಾಣೆಯನ್ನು ತಮಗೆ ಗೊತ್ತಿಲ್ಲದೇ ಕಟ್ಟುತ್ತಿರುವ ಸತ್ಯ ತಿಳಿಯಿತು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಜೀವಕ್ಕಿಂತ ದೊಡ್ದು ಯಾವ್ದು?: ಸುಧಾ ಆಡುಕಳ ಅಂಕಣ

ಗುಲಾಬಿಯ ಸಾವಿನಿಂದಾಗಿ ಡಾಕ್ಟರಮ್ಮನಿಗೆ ಹೊಳೆಸಾಲಿನ ಸ್ಥಿತಿಗತಿಯ ಬಗ್ಗೆ ಒಂದಿಷ್ಟು ಅರ್ಥವಾಗಿತ್ತು. ಅವರಲ್ಲಿ ಅರಿವನ್ನು ಮೂಡಿಸುವುದು ರೋಗಿಗಳಿಗೆ ಚಿಕಿತ್ಸೆ ನೀಡುವಷ್ಟೇ ಮಹತ್ವದ ಕಾರ್ಯವೆಂದು ತಿಳಿದ ಅವರು ಮಾಸ್ರ‍್ರು ಕರೆದಾಗ ದೂಸರಾ ಮಾತನಾಡದೇ ಬರಲೊಪ್ಪಿದ್ದರು. ಸೇರಿದ್ದ ಎಲ್ಲ ಅಮ್ಮಂದಿರಿಗೆ ಅರ್ಥವಾಗುವ ಭಾಷೆಯಲ್ಲಿ ಮುಟ್ಟು, ಕಿಟ್ಟುಗಳ ಒಳಗುಟ್ಟುಗಳನ್ನು ಬಿಡಿಸಿ ಹೇಳಿದರು. ಮುಟ್ಟೆಂದು ಮುಟ್ಟದೇ ಮೀನಮೇಷ ಎಣಿಸಿ ಆಸ್ಪತ್ರೆಗೆ ತರಲು ತಡವಾಗಿ ಅಸುನೀಗಿದ ಗುಲಾಬಿಯ ನೆನಪಿನಲ್ಲಿ ಒಂದಿಷ್ಟು ಹೊತ್ತು ಮೌನಪ್ರಾರ್ಥನೆ ಮಾಡಿಸಿ ಅಗಲಿದ ಜೀವದ ಘನತೆಯನ್ನು ಎತ್ತಿಹಿಡಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಮೂಳೆ ಮಾಂಸದ ತಡಿಕೆ: ಸುಧಾ ಆಡುಕಳ ಅಂಕಣ

ಇವಳ ಜತೆಯಲ್ಲಿ ನಡೆಯುವ ಗೆಳತಿಯರು ಮೈ ಕೈ ತಾಗಿಸಿಕೊಳ್ಳದೇ ದೂರದೂರವೇ ನಡೆಯುವಾಗ ನೀಲಿಗೆ ಅಳುವೇ ಬಂದಂತಾಗಿತ್ತು. “ನಾ ಹೇಳದಿದ್ರೆ ನಿಮಗೆಲ್ಲ ನಾ ಮುಟ್ಟು ಅಂತ ಗೊತ್ತಾಗ್ತಾನೇ ಇರಲಿಲ್ಲ. ದಿನಾ ಶಾಲೇಲಿ ಅದೆಷ್ಟು ಹುಡುಗಿರು ಮುಟ್ಟಾಗಿ ಬರ್ತಾರೋ ಗೊತ್ತಿದ್ಯಾ?” ಎಂದು ಅವರನ್ನು ತಿದ್ದಲು ನೋಡಿದಳು. ಅದಕ್ಕವರು ಜಗ್ಗದೇ, “ಗೊತ್ತಾಗದಿದ್ರೆ ದೋಷ ಇಲ್ಲಾಂತ ನಮ್ಮಜ್ಜಿ ಹೇಳಿದಾರೆ. ಗೊತ್ತಾಗಿಯೂ ಮೈಲಿಗೆಯಾದ್ರೆ ಅದು ನಮ್ಮ ತಪ್ಪು.” ಎಂದು ಬೇರೆಯದೇ ವಾದ ಹೂಡಿದರು. ಬಸ್ ಹತ್ತಿದಾಗಲೂ ತನ್ನ ಸೀಟಿನಲ್ಲಿ ಪರಚಯದವರ‍್ಯಾರೂ ಕುಳಿತುಕೊಳ್ಳದಿದ್ದಾಗ ನೀಲಿ ಈ ಹುಡುಗಿಯರೆಲ್ಲ ಇಡಿಯ ಶಾಲೆಗೆ ಈ ವಿಷಯವನ್ನು ಡಂಗೂರ ಸಾರದಿದ್ದರೆ ಸಾಕೆಂದುಕೊಂಡಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಕಾಡುವ ಪ್ರಶ್ನೆಗಳ ಕಾಡಿನಲ್ಲಿ ನೀಲಿ: ಸುಧಾ ಆಡುಕಳ ಅಂಕಣ

ಸೀತಜ್ಜಿ, ಗೌರಜ್ಜಿ, ಅಮ್ಮಣ್ಣೆಜ್ಜಿ ಇವರ ಕತೆಗಳೂ ಇದಕ್ಕಿಂತ ಬೇರೆಯೇನಿರಲಿಲ್ಲ. ಅವರೆಲ್ಲರೂ ತಮ್ಮ ಮದುವೆಯ ಕತೆಯನ್ನು ಯಾವುದೇ ವಿಷಾದಗಳಿಲ್ಲದೇ ಹೇಳಿಕೊಳ್ಳುತ್ತಿದ್ದರು. ಆದರೆ ಇವರ ನಂತರದ ತರುವಾಯದವರಾದ ಕೆಂಪಿ, ಗಣಪಿ, ನಾಗವೇಣಿಯರು ತಮ್ಮ ಮದುವೆಯ ಕತೆಯನ್ನು ಇಷ್ಟು ತಣ್ಣಗೆ ಹೇಳುತ್ತಿರಲಿಲ್ಲ. ಅವರ ಮಾತುಗಳಲ್ಲಿ ಕಹಿ, ಸಿಟ್ಟು, ಹತಾಶೆ ಎಲ್ಲವೂ ಮಡುಗಟ್ಟಿದ್ದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ