Advertisement

Tag: ಸುಮಾವೀಣಾ

ಕೊಡಗಿನ ಮೊಟ್ಟೆಯೂ… ಮದ್ದು ಪಾಯಸವೂ: ಸುಮಾವೀಣಾ ಸರಣಿಸ

ಕೊಡವರಲ್ಲಿ ಕಕ್ಕಡ ಪದಿನೆಟ್ಟು, ಆಟಿಪದಿನೆಟ್ಟು, ಅತ್ಯಂತ ಮಹತ್ವವನ್ನು ಪಡೆದುಕೊಂಡಿರುವ ಈ ಜಾನಪದೀಯ ಪರ್ವ ಕೃಷಿಕರ ಪಾಲಿಗೆ ಮಹಾಪರ್ವವೆಂದೇ ಹೇಳಬಹುದು. ಆದರೆ ಮದುವೆ ಮುಂತಾದ ಶುಭ ಕಾರ್ಯಗಳಿಗೆ ಈ ಮಾಸ ನಿಷಿದ್ಧ. ಜೊತೆಗೆ ಗ್ರಾಮೀಣ ಭಾಗದ ದೇವಾಲಯಗಳಲ್ಲೂ ನಿತ್ಯ ಪೂಜೆಯನ್ನು ಸ್ಥಗಿತಗೊಳಿಸುವುದು ವಾಡಿಕೆ. ಈ ವರ್ಷ ಆಗಸ್ಟ್ 3 ನೆ ತಾರೀಖು ಈ ಆಚರಣೆ ಇದೆ. ಸರಿ ಸುಮಾರು ಮುಂಗಾರಿನ ಭತ್ತದ ನಾಟಿ ಮಾಡಿ ಮುಗಿಯುವ ಕಾಲಕ್ಕೆ ಈ ಆಟಿ ಹದಿನೆಂಟರ ಆಚರಣೆ ಇರುತ್ತದೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಬರವಣಿಗೆಯ ಶಿಸ್ತನ್ನು ಕಲಿಸಿದ ಸಿಸ್ಟರ್ ಲಾರೆನ್ಸಿಯಾ: ಸುಮಾವೀಣಾ ಸರಣಿ

ಸಿಸ್ಟರ್ ಲಾರೆನ್ಸಿಯ ಅವರಿಗೆ ಗಾರ್ಡೆನಿಂಗ್ ಅಂದರೂ ಇವರಿಗೆ ಬಹಳ ಇಷ್ಟವಿತ್ತು. ನಮ್ಮ ತರಗತಿಯ ಮುಂದೆ ಇದ್ದ ಹೂತೋಟದಲ್ಲಿ ಚಂದದ ಗಿಡಗಳನ್ನು ಬೆಳೆಸಿದ್ದರು. ಅದರಲ್ಲಿ ದಾಳಿಂಬೆ ಬಣ್ಣದ ಪಾಪಿ ಹೂಗಳು ಅರಳುತ್ತಿದ್ದುದನ್ನು ಅದರ ನಯವಾದ ಎಸಳುಗಳನ್ನು ಇವತ್ತಿಗೂ ಮರೆಯಲಾಗುತ್ತಿಲ್ಲ. ತಮ್ಮ ತಲೆಯ ವಸ್ತ್ರವನ್ನು ಸರಿ ಮಾಡಿಕೊಂಡು ಬಗ್ಗಿ ಕೆಲಸ ಮಾಡುತ್ತಿದ್ದರು. “ಮುಂದೆ ಮಿಡ್ಲ್ ಸ್ಕೂಲಿಗೆ ಹೋಗುತ್ತೀರ ಚಂದ ಕಲಿತು ಹೋಗಬೇಕು” ಎಂದು ಪದೇ ಪದೇ ಹೇಳುತ್ತಿದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ನಾಲ್ಕನೆಯ ಬರಹ

Read More

ಪ್ರಕೃತಿಯ ರಿಯಲ್ ಡೆಮೋ: ಸುಮಾವೀಣಾ ಸರಣಿ

ಇಲ್ಲಿನ ಜನರು ಮಳೆಗಾಲಕ್ಕೆ ಪ್ರತ್ಯೇಕ ಶಾಪಿಂಗ್ ಮಾಡಬೇಕು. ಜರ್ಕಿನ್ಸ್, ರೇನ್ಕೊಟ್, ಕೊಡೆಗಳು, ಸ್ಕಾರ್ಫ್‌ಗಳು, ಸ್ವೆಟರ್‌ಗಳು, ಟೋಪಿಗಳು, ಟಾರ್ಪಲ್ಸ್ ಮೆಡಿಸಿನ್ಸ್, ಜೇನು ಇತ್ಯಾದಿ. ಇದರ ಜೊತೆಗೆ ಸೌದೆಯನ್ನು ಹಾಕಿಸಿಕೊಳ್ಳುವುದು. ಒಂದು ಜೀಪ್ ಇಲ್ಲವೆ ಮಿನಿ ಲಾರಿಯಲ್ಲಿ ಒಂದು ಅಟ್ಟಿ ಎರಡು ಅಟ್ಟಿ ಸೌದೆ ಹೀಗೆ ಹಾಕಿಸಿಕೊಂಡರೆ ಅದನ್ನು ಒಡೆಯಲು ಜನ ಇರುತ್ತಿದ್ದರು. ‘ಕೊಡ್ಲಿ ಸೌದೆಯನ್ನು ಒಡೆಯಲು ಬಳಸುವ ಪರಿಕರ. ‘ಕೊಡ್ಲಿ’ ಪದದಲ್ಲಿ ಒತ್ತಕ್ಷರ ಬಿಡಿಸಿ ಹೊಸದೊಂದು ‘ಅ’ ಸ್ವರವನ್ನು ಸೇರಿಸಿದರೆ ‘ಕೊಡಲಿ’ ಆಗುತ್ತದೆ ನಮ್ಮ ಶಿಷ್ಟ ಭಾಷೆಯನ್ನು ‘ಕೊಡಲಿ’ ಎಂದರೆ ‘ನೀಡಲಿ’ ಎಂದರ್ಥ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಬಿಡದೇ ಸುರಿವ ಮಳೆಯೂ.. ಜೊತೆಗೆ ಕೊಡೆಯೂ: ಸುಮಾವೀಣಾ ಸರಣಿ

ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳು ಪಾಠ ಕೇಳಬೇಕು. ಆಗ ಈ ರೌದ್ರಮಳೆಯಾಗಮನವಾಗುತ್ತಿತ್ತು. ನಾವು ಶಾಲೆಗೆ ಹೊರಡುವ ಸಮಯಕ್ಕೆ ಸರಿಯಾಗಿ ಶಾಲೆ ಬಿಡುವ ಕಡೆಯ ಅವಧಿಯಲ್ಲಿ ಮಳೆ ಹಾಜರಿ ಹಾಕುತ್ತಿತ್ತು. ಜೊತೆಗೆ ಮೈ ಕೊರೆಯುವ ಚಳಿ. ಈ ಕಾರಣಕ್ಕೆ ಮೊದಲ ಬೆಂಚ್ ಬೇಡ ಅನ್ನಿಸುತ್ತಿತ್ತು ಹಿಂದಿನ ಬೆಂಚ್ ಆದರೆ ಕಾಲ ಮೇಲೆ ಕಾಲು ಹಾಕಿ ಚಳಿ ಕಡಿಮೆ ಮಾಡಿಕೊಳ್ಳಬಹುದಲ್ಲ ಅನ್ನುವ ಉಪಾಯ ಅಷ್ಟೇ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ ಆರಂಭ

ಒಂದು ಕಾಲಕ್ಕೆ ಭರ್ಜರಿ ಭತ್ತ ಬೆಳೆಯುತ್ತಿದ್ದ ಗದ್ದೆಗಳು ಈಗ ವಾಸದ ಮನೆಗಳಾಗಿವೆ. ತಿಳಿ ನೀರು ಹರಿಯುತ್ತಿದ್ದ ತೋಡು ಮನುಷ್ಯನ ಕೊಳಕು ಆ ತೋಡನ್ನು ಸೇರಿ ಸೇರಿಸಿಕೊಂಡು ಕಪ್ಪಗೆ ಹರಿಯುತ್ತಿದ್ದರೆ ಇದು ಮನುಷ್ಯನ ನಾಗರೀಕತೆಯ ಹಂಬಲದ ಮುಖವಾಣಿ ಅನ್ನಿಸುತ್ತದೆ. ಒಟ್ಟು ನಮ್ಮೂರು ಮಡಿಕೇರಿ ಅಲ್ಲ ಮಡಿಯಾದಕೇರಿ ಈಗ ನಗರೀಕರಣಕ್ಕೆ ಒಳಗುಗೊಳ್ಳುವ ಹಂಬಲದಲ್ಲಿ ಮೂಲ ಸೌಂದರ್ಯವನ್ನು ಕಳೆದುಕೊಳ್ಳುತ್ತಿದೆ.
ಸುಮಾವೀಣಾ ಬರೆಯುವ ಮಡಿಕೇರಿಯಲ್ಲಿ‌ ಕಳೆದ ಬಾಲ್ಯದ‌ ನೆನಪುಗಳ ಸರಣಿ “ಕೊಡಗಿನ ವರ್ಷಕಾಲ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ