Advertisement

Tag: ಸುಮಾವೀಣಾ

“ಧಂ”ಪತಿ ಮುಯ್ಯಿ: ಸುಮಾವೀಣಾ ಸರಣಿ

‘ಧಂ’ ಅಂದರೆ ಧೈರ್ಯ ಉಸಿರು ಎನ್ನುವ ಅರ್ಥವೂ ಇದೆ. ಹೊಸ ಮನೆ ಕಟ್ಟುವಾಗ ಮನೆ ಕಟ್ಟುವವರಿಗೆ, ಪಕ್ಕದ ಸೈಟವರಿಗೆ ಕಾಂಪೌಂಡ್‌ಗೆ ಜಾಗ ಬಿಡುವ ವಿಚಾರದಲ್ಲಿ ತಕರಾರು ಇದ್ದೇ ಇರುತ್ತದೆ. ಆಗ ಪರಸ್ಪರೂ ‘ಧಮ್’ ಇದ್ದರೆ ಕಟ್ಟು ನೋಡೋಣ ಅಂದರೆ ಪ್ರತಿಯಾಗಿ ಇನ್ನೊಬ್ಬ ‘ಧಮ್’ ಇದ್ದರೆ ನಿಲ್ಲಿಸು ನೋಡೋಣ ಎನ್ನುವ ಸವಾಲುಗಳು ಪ್ರತಿ ಸವಾಲುಗಳನ್ನು ಹಾಕಿಯೇ ಇರುತ್ತಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಎರಡನೆಯ ಬರಹ

Read More

ಕುಂಬಳೆಯೆಂಬ ನಿಲ್ದಾಣದಲ್ಲಿ ತಿರುಮಲೇಶರು: ಸುಮಾವೀಣಾ ಬರಹ

‘ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ಡದೇನಲ್ಲ’ ಎನ್ನುವ ಮೂಲಕ ಕಾಲ ನಿರಂತತೆಯಿಂದ ಕೂಡಿರುತ್ತದೆ. ಆದರೆ ಕಾಲದ ತೆಕ್ಕೆಯಲ್ಲಿ ಜೀವಿಸುವ ಜೀವಿ ನಿರಂತರವಾಗಿ ಇರಲು ಸಾಧ್ಯವಿಲ್ಲ. ಆತ ಅಲ್ಪ ಎನ್ನುತ್ತಾರೆ. ‘ಕಾಲ’ ಎನ್ನುವುದೇ ನಿಲ್ದಾಣವಾದರೆ ಅಲ್ಲಿ ಚರಿತ್ರೆ, ಸಂಸ್ಕೃತಿ, ನಾಗರಿಕತೆ ಇತ್ಯಾದಿಗಳು ಬಂದು ಹೋಗುತ್ತಿರುತ್ತವೆ. ಹೇಗೆ ಕುಂಬಳೆಯ ರೈಲು ನಿಲ್ದಾಣದಲ್ಲಿ ಮದರಾಸು ಮೇಲ್, ಜನತಾ, ಜಯಂತಿ ಮೊದಲಾದ ವೇಗಧೂತ ರೈಲುಗಳು ನಿಲ್ಲುವುದಿಲ್ಲವೋ ಹಾಗೆ ಅನುಸರಿಸಲಾಗದ, ಹೊಂದಿಕೊಳ್ಳಲಾರದವು ಸರ್ರನೆ ಸರಿದು ಹೋಗುತ್ತವೆ.
ಇಂದು ಕೆ.ವಿ. ತಿರುಮಲೇಶರ ಹುಟ್ಟುಹಬ್ಬ. ಕಳೆದ ವರ್ಷ ತೀರಿಹೋದ ಅವರ ನೆನಪಿಗೆ ಅವರ ‘ಅವಧ’ ಕವನ ಸಂಕಲನದ ಕುರಿತ ಸುಮಾವೀಣಾ ಬರಹ ಇಲ್ಲಿದೆ

Read More

ಸುಮಾವೀಣಾ ಹೊಸ ಸರಣಿ “ಮಾತು-ಕ್ಯಾತೆ” ಆರಂಭ

ಮಕ್ಕಳಲ್ಲಿ ಜ್ಞಾನದ ಮಟ್ಟ ಹೆಚ್ಚಿದ್ದರೂ ಅದನ್ನು ಅಭಿವ್ಯಕ್ತಗೊಳಿಸಲು ಸಾಧ್ಯವಾಗುವುದಿಲ್ಲ. ಕಾರಣ ಶಬ್ದಗಳ ಕೊರತೆ. ಮನಸ್ಸಿನಲ್ಲಿ ಭಾವನೆಗಳಿರುತ್ತವೆ….! ಇನ್ನೇನೋ ವಿಶೇಷವಾಗಿರುವುದನ್ನು ಹೇಳಬೇಕು…! ನಾನೂ ಮಾತನಾಡಬೇಕು….! ಎಂದಾಗ ಆ ಭಾವನೆಗಳಿಗೆ ಆತ ಶಬ್ದರೂಪವನ್ನು ಕೊಡಲು ಸಾಧ್ಯವಾಗುವುದಿಲ್ಲ.
ಪದ ಪ್ರಯೋಗಗಳ ಕುರಿತು ಸುಮಾವೀಣಾ ಬರೆಯುವ ಹೊಸ ಸರಣಿ “ಮಾತು-ಕ್ಯಾತೆ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಬದುಕಿನ ವರ್ಷಕಾಲದ ವಸಂತೋತ್ಸವ: ಸುಮಾವೀಣಾ ಸರಣಿ

ಇಂಥ ಮಳೆಯಲ್ಲಿ ಶಾಲೆಗೆ ಹೋಗುವುದೇ ದೊಡ್ಡ ಸಮಸ್ಯೆ. ಎಂಥ ಚಿಕ್ಕ ಹೊಂಡವಿದ್ದರೂ ಸರಿ ಪೇಪರಿನ ದೋಣಿಗಳನ್ನು ತೇಲಿಬಿಡುವ ನಗರದ ಹುಡುಗರ ಆಟ ಒಂದೆಡೆಯಾದರೆ ಬೆಟ್ಟ ಗುಡ್ಡಗಳ ತಪ್ಪಲಲ್ಲಿ ಹಳ್ಳ ತೋಡಿನ ಪಕ್ಕದಲ್ಲಿ ತೋಟದ ಮನೆಗಳವರ ಕಷ್ಟ ಹೇಳತೀರದು. ರಭಸದ ಮಳೆ ಬಂದರೆ ಒಂದೋ ಗುಡ್ಡ ಕುಸಿಯುವ ಭೀತಿ. ಇಲ್ಲವೇ ಮಳೆ ನೀರು ಮನೆಗೆ ನುಗ್ಗುವ ಭೀತಿ ಸ್ವಲ್ಪ ಮಳೆ ಬಂದರೂ ಸೇತುವೆಗಳು ತೇಲುವ ಹಾಗಾಗುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಮುಂಗಾರಿನ ಸವಿ ಸಂಜೆ: ಸುಮಾವೀಣಾ ಸರಣಿ

ಅಂತೂ ಶೆಟ್ಟಿ ಬೇಕರಿಗೆ ಹೋಗಿ ಕಾಲು ಕೆ.ಜಿ. ಲಡ್ಡುವನ್ನು 17.50 ಪೈಸೆ ಕೊಟ್ಟು ತೆಗೆದುಕೊಂಡು ಹೋಗಿ ಸೀತವ್ವಗೆ ಕೊಟ್ಟೆ. ಸ್ವೀಟ್ ತೆಗೆದುಕೊಂಡ ನಂತರ “ಎಷ್ಟುನೆ ಹಣ ಬಂದಿದು ನಿಂಗೆ….” ಅಂದರೆ “25” ಎಂದೆ “ಅಷ್ಟೆಯಾ…..?” ಎಂದು ಜೋರಾಗಿ ನಕ್ಕರು. ಪಾಪ ಅವರಿಗೆ ಇವೆಲ್ಲಾ ಹೇಗ್ ತಿಳಿಯಬೇಕು…?
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ