‘ದಾರಿ ತಪ್ಪಿಸುವ ಗಿಡʼಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ ಮುನ್ನುಡಿ

ಆಚಾರ ಕೆಟ್ಟರೂ ಆಕಾರ ಕೆಡಬಾರದು ಅನ್ನುವ ಗಾದೆಯನ್ನು ನಾನು ಚಿಕ್ಕಂದಿನಲ್ಲಿ ಕೇಳುತ್ತಿದ್ದೆ. ಸಂಸ್ಕೃತಿ ಅನ್ನುತ್ತೇವಲ್ಲ ಅದರ ಆಕಾರ, ವ್ಯವಸ್ಥೆಗೆ ಇರುವ ಆಕಾರ ಇವು ಕೆಡದೆ ಮುಂದುವರೆಯಬೇಕು, ವರ್ತನೆ ಕೆಟ್ಟರೂ ಗೊತ್ತಾಗದ ಹಾಗೆ ಗುಟ್ಟು ಕಾಪಾಡಬೇಕು ಅನ್ನುವ ಮನೋಧರ್ಮವೇ ನಮ್ಮನ್ನು ‘ದಾರಿ ತಪ್ಪಿಸುವ ಗಿಡʼ ಆಗಿರಬಹುದು. ಈ ಆಕಾರವನ್ನು ಕಾಪಾಡಿಕೊಳ್ಳುವ ಒತ್ತಡವೇ ವ್ಯಕ್ತಿಗಳನ್ನು ದುರ್ಬಲರನ್ನಾಗಿಸಿ ರಾಜಿಗೆ ಒಲಿಯುವಂತೆ ಮಾಡುತ್ತದೆ ಅನಿಸುತ್ತದೆ. ಹಾಗೆ ನೋಡಿದರೆ ಆಳು ಕೂಗಿನ ಹಕ್ಕಿಗಿಂತ ದಾರಿ ತಪ್ಪಿಸುವ ಗಿಡ ಹೆಚ್ಚು ಅರ್ಥವ್ಯಾಪ್ತಿ ಇರುವ ರೂಪಕ.
ಕತೆಗಾರ ಸ್ವಾಮಿ ಪೊನ್ನಾಚಿ ಹೊಸ ಕಥಾ ಸಂಕಲನ “ದಾರಿ ತಪ್ಪಿಸುವ ಗಿಡ”ಕ್ಕೆ ಓ ಎಲ್‌ ನಾಗಭೂಷಣ ಸ್ವಾಮಿ ಬರೆದ ಮುನ್ನುಡಿ

Read More