Advertisement

Tag: agriculture

ಅಯ್ಯೋ ಸರ್ ಇಲ್ಲಿ ಹಲ್ಲಿಗಳು ಇವೆ!

ನನ್ನ ಬೆಂಗಳೂರಿನ ತರಬೇತಿಗಳು ಮುಗಿದ ತಕ್ಷಣ ನಾನು ರಾಮ್ ಇಬ್ಬರೂ ಕಾರಿನಲ್ಲಿ ಹಳ್ಳಿಗೆ ಹೊರಟೆವು. ಅದೇ ವಾರಾಂತ್ಯದಲ್ಲಿ ವಿನೋದ ಅವರಿಗೂ ಕೂಡ ಬರಲು ಹೇಳಿದ್ದೆ. ಅವರೂ ಹಳ್ಳಿಯಲ್ಲಿ ನಾವು ಸಧ್ಯ ವಾಸಕ್ಕಿದ್ದ ಹೊಸ ಮನೆಯನ್ನು ಇನ್ನೂ ನೋಡಿರಲಿಲ್ಲ. ಅದೂ ಅಲ್ಲದೆ ರಾಮನನ್ನು ಅವರಿಗೆ ಪರಿಚಯಿಸಿದಂತಾಗುತ್ತದೆ ಎಂಬುದು ನನ್ನ ಯೋಚನೆ. ಬೆಂಗಳೂರಿನಿಂದ ನಮ್ಮ ಹಳ್ಳಿಗೆ ಹೋಗಲು ಹೆಚ್ಚು ಕಡಿಮೆ ಏಳು ಗಂಟೆಗಳು ಬೇಕು. ರಾಮನಿಗೆ ಅದು ಮೊದಲ ಆಘಾತ!
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ನಿಮ್ಮ ಜಾತಿ ಯಾವುದು!

ಹೊಲದ ಹತ್ತಿರ ಅನ್ನುವ ಕಾರಣಕ್ಕೆ ನನಗೆ ಮನೆ ಇಷ್ಟವಾಯ್ತು. ಮನೆಯನ್ನು ಕೂಲಂಕುಷವಾಗಿ ನೋಡಿದ ಮೇಲೆ ಗೌಡರ ಜೊತೆಗೆ ಮಾತಾಡಲು ಅಲ್ಲೇ ಹತ್ತಿರವೇ ಇದ್ದ ಅವರ ಮನೆಗೆ ಹೋದೆ. ಹೆಸರು ಕೇಳಿದವರೆ ಯಾವ ಜಾತಿ ನಿಮ್ಮದು ಅಂದರು. ನನಗೆ ತುಂಬಾ ಇರುಸು ಮುರುಸು ಆಯ್ತು. ನಾನು ಯಾರಿಗೂ ಜಾತಿ ಕೇಳೋದಿಲ್ಲ, ನನಗೆ ಯಾರಾದರೂ ಕೇಳಿದರೂ ನನಗೆ ಆಗೋಲ್ಲ. ಆದರೆ ಹಳ್ಳಿಯಲ್ಲಿ ಜಾತಿ ವ್ಯವಸ್ಥೆ ಇನ್ನೂ ಗಟ್ಟಿಯಾಗಿಯೇ ಇದೆ. ನನ್ನ ಜಾತಿ ಯಾಕೆ ಬೇಕು ಅಂತ ಕೇಳಿದಾಗ “ಒಳ್ಳೆಯವರಿಗೆ ಕೊಡಬೇಕಲ್ರಿ ಮನಿ ಅದಕ್ಕ ಕೇಳತೀವಿ” ಅಂದರು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಸರಿರಾತ್ರಿಯಲಿ.. ಹುಳ ಹುಪ್ಪಟೆಗಳ ಸಂಗದಲಿ…

ಮನೆಗೆ ಒಂದು ಗಂಡು ಬೇಕು ಅನ್ನುವ ಮೋಹ ಜನರಿಗೆ ಇನ್ನೂ ಕಡಿಮೆಯಾಗಿಲ್ಲ. ವಯಸ್ಸಾದ ಮೇಲೆ ನೋಡಿಕೊಳ್ಳುತ್ತಾರೆ ಎಂಬ ಭ್ರಮೆ ಹಳ್ಳಿಯಲ್ಲಿ ಇನ್ನೂ ಇದೆ. ಎಷ್ಟೋ ವಯಸ್ಸಾದವರನ್ನು ಒಂದೋ ಹೊರ ಹಾಕಿದ್ದಾರೆ ಇಲ್ಲವೇ ಮಕ್ಕಳೇ ಹಳ್ಳಿ ಬಿಟ್ಟು ದೂರ ಇದ್ದಾರೆ. ಇದು ಗಂಡು ಹಡೆದವರ ಭಾಗ್ಯ! ಹಾಗಂತ ಎಲ್ಲ ಗಂಡು ಮಕ್ಕಳು ಹಾಗಿಲ್ಲ ಬಿಡಿ. ಹೆಣ್ಣು ಕರುಳಿನ ಗಂಡು ಹುಡುಗರು ಇನ್ನೂ ಇರುವುದಕ್ಕೆ ಮಳೆ ಬೆಳೆ ಆಗುತ್ತಿರುವುದು!
ಗುರುಪ್ರಸಾದ್‌ ಕುರ್ತಕೋಟಿ ಅಂಕಣ

Read More

“ಜೀವಾಮೃತ” ಘಳಿಗೆ ಬಂದೇಬಿಟ್ಟಿತು…

ಶಂಭುಲಿಂಗ ಮಾವನ ಮನೆಯಲ್ಲಿ ಎರಡು ಹಸುಗಳಿದ್ದವು; ಆದರೆ ಅವು ನಾಟಿ ಆಗಿರಲಿಲ್ಲ. ಹೀಗಾಗಿ ನಾಟಿ ಹಸುಗಳ ಹುಡುಕಾಟ ಶುರು ಆಯ್ತು. ಮಲೆನಾಡು ಗಿಡ್ಡ ಎಂಬ ತಳಿ ಅಲ್ಲಿನ ನಾಟಿ ಹಸು. ಹಳ್ಳಿಯಲ್ಲಿ ಎಲ್ಲೋ ಒಂದು ಕಡೆ ಸಿಕ್ಕೆ ಸಿಗುತ್ತದೆ ಅಂದುಕೊಂಡಿದ್ದ ನನಗೆ ಹುಡುಕಿದ ಕಡೆಯೆಲ್ಲ ಅವುಗಳನ್ನು ಕಾಣದೆ ಭ್ರಮನಿರಸನವಾಯ್ತು. ವಿಚಿತ್ರ ಅಂದರೆ ಈಗ ಬೆಂಗಳೂರಿನಲ್ಲೇ ಬೇಕಾದಷ್ಟು ನಾಟಿ ಹಸುಗಳ ಹಾಲಿನ ಡೈರಿಗಳು ಇವೆ, ಆದರೆ ಹಳ್ಳಿಯಲ್ಲಿ ತುಂಬಾ ಅಪರೂಪ. ಇದೊಂದು ದುರಂತ ಅಂತ ನನಗೆ ಅನಿಸಿತು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ಕ್ರಮೇಣ ನಮಗೆ ಊರು ಪರಿಚಯವಾಗತೊಡಗಿತ್ತು. ಅದು ತುಂಬಾ ಮುಖ್ಯ. ಯಾವ ಊರಿನಲ್ಲಿ ನಾವು ಬೆಳೆಯಲು ಬಯಸುತ್ತೇವೋ ಅಲ್ಲಿನ ಜನರ ಜೊತೆಗೆ ಬೆಳೆಯಬೇಕೆ ವಿನಹ ನಮ್ಮಷ್ಟಕ್ಕೆ ನಾವು ಇರಲು ಸಾಧ್ಯವಿಲ್ಲ. ಇದೆ ರೀತಿ ನಾವು ನಮ್ಮ ಹೊಲದ ಬಳಿಯ ಜನರಿಗೂ ಹತ್ತಿರವಾಗಬೇಕಿತ್ತು. ಅದು ಇನ್ನೂ ಸಾಧ್ಯವಾಗಿರಲಿಲ್ಲ. ನಮಗಿನ್ನೂ ಅಲ್ಲೊಂದು ಮನೆ ಸಿಕ್ಕಿರಲಿಲ್ಲ. ಆದರೆ ಅದಕ್ಕಿಂತ ಮೊದಲು ಶಂಭುಲಿಂಗ ಹೆಗಡೆ ಅವರು ನಮಗೆ ಸಿಕ್ಕಿದ್ದು ತುಂಬಾ ಅನುಕೂಲ ಆಗಿತ್ತು. ಅವರು ನಮಗೆ ಬೇಕಾದ ಮೂಲಭೂತ ಸೌಕರ್ಯಗಳನ್ನೆಲ್ಲ ಚಿಟಿಕೆ ಹೊಡೆದಂತೆ ಕೊಡಿಸಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣದಲ್ಲಿ ಹೊಸ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ