Advertisement

Tag: AN Prasanna

ಎ.ಎನ್.‌ ಪ್ರಸನ್ನ ಬರೆದ ನಾಲ್ಕು ಅತಿ ಸಣ್ಣ ಕತೆಗಳು

ಇದು ಅವರ ಊಹೆಯನ್ನು ಮೀರಿ ನೂರಾರು ಬಗೆಯಲ್ಲಿ ಹಬ್ಬಿತು. ನಾಲಗೆ ಒಳಗೊಂದು ಮೂಳೆ ಇದೆ. ಅದಕ್ಕೆ ಘಾತವಾದರೆ ಮಾತನಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎನ್ನುವ ಅಭಿಪ್ರಾಯ ಇನ್ನಿಲ್ಲದಷ್ಟು ಬೆಳೆಯಿತು. ಜನರು ಪರಸ್ಪರ ಮಾತನಾಡುವಾಗ ಏನು ಮಾತನಾಡುತ್ತಿದ್ದಾರೆ ಎನ್ನುವುದಕ್ಕಿಂತ ಹೇಗೆ ಮಾತನಾಡುತ್ತಿದ್ದಾರೆ, ತಾವು ಮಾತನಾಡುವುದೂ ಅದೇ ಬಗೆಯಲ್ಲಿದೆಯೇ ಅಥವ ಭಿನ್ನವಾಗಿದೆಯೇ… ಹೀಗೆ ಹಲವು ಆಲೋಚನೆಗಳಿಗೆ ಆಸ್ಪದ ಉಂಟಾಯಿತು. ಒಮ್ಮೆ ಅನುಮಾನ ಉಂಟಾದರೆ ಸುಮ್ಮನೆ ಒಂದಿಲ್ಲೊಂದು ನೆಪದ ಕಾರಣ ತೆಗೆದುಕೊಳ್ಳಬೇಕಾದ ಕ್ರಮವನ್ನು ಮುಂದೆ ಹಾಕಲು ಯಾರಿಗೂ ಇಷ್ಟವಾಗುವಂತಿರಲಿಲ್ಲ.
ಎ.ಎನ್.‌ ಪ್ರಸನ್ನ ಬರೆದ ಅತಿ ಸಣ್ಣ ಕತೆಗಳ ಸಂಕಲನ “ಅದೊಂದು ದಿನ” ಕೃತಿಯ ನಾಲ್ಕು ಸಣ್ಣ ಕತೆಗಳು ನಿಮ್ಮ ಓದಿಗೆ

Read More

ನಮ್ಮದೇ ಎನ್ನಿಸುವ ಕತೆಗಳು…

ವಿಹಾರ’ಕ್ಕಿಂತ ‘ಹದ್ದು ಹಾರುವ ಹೊತ್ತು’ ಇನ್ನೂ ವಿಸ್ತಾರವಾದ ಕ್ಯಾನ್ವಾಸ್ ಹೊಂದಿರುವ ಕತೆ. ಊರಿಗೆ ಹೊಸತಾಗಿ ಬಂದು ಹೊರವಲಯದಲ್ಲಿ ಬಾಡಿಗೆ ಮನೆ ಮಾಡಿರುವ ಈ ಕತೆಯ ನಿರೂಪಕನು ಬಡಾವಣೆಯ ಪರಿಸರವನ್ನು ತಿಳಿದುಕೊಳ್ಳುವ ಹವಣಿಕೆಯಲ್ಲಿ ಕೇಳಿಸಿಕೊಂಡಿದ್ದೆಲ್ಲ ಕತೆಯ ಪ್ರಥಮಾರ್ಧವಾದರೆ ಉತ್ತರಾರ್ಧದ ಘಟನೆಗಳಿಗೆ ಆತ ಸಾಕ್ಷಿಯಾಗುತ್ತಾನೆ. ಹೀಗೆ ಹೊರಗಿನವನಾದ, ಆದರೆ ಒಂದು ಮಟ್ಟದಲ್ಲಿ ಭಾಗಿಯೂ ಆಗಿರುವ ನಿರೂಪಕನಿಗೆ ಎಲ್ಲಾ ಪಾತ್ರ ಮತ್ತು ಘಟನೆಗಳನ್ನು ಸನಿಹದಿಂದ, ಆದರೆ ವಸ್ತುನಿಷ್ಠವಾಗಿ, ನಿರೀಕ್ಷಿಸುವ ಅನುಕೂಲತೆ ಇದೆ.
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ”ಕ್ಕೆ ಎಂ. ಜಿ. ಹೆಗಡೆ ಬರೆದ ಮುನ್ನುಡಿ

Read More

ಏಕಾಂಗಿಯ ಸ್ವಗತಗಳು…

ಪ್ರಕಾಶನ ಸಂಸ್ಥೆಯ ಸಹಾಯಕಿ ಅವನ ಬಗ್ಗೆ ಹಿತವಾದ ಭಾವನೆಯಿಂದ ಪ್ರತಿಕ್ರಿಯಿಸುತ್ತಾಳೆ. ಇಂಟವ್ಯೂ ಮುಗಿದ ಮೇಲೆ ಭೇಟಿಯಾಗಲು ಇಷ್ಟಪಡುತ್ತಾಳೆ. ಪ್ರಕಾಶನದ ಒಡೆಯನಿಗೆ ಮಾತು ಮುಂದುವರಿಸಲು ಇಷ್ಟವಿರುತ್ತದೆ. ಆದರೆ ಆಂಡರ್ಸ್‌ನ ಶಿಥಿಲವಾದ ಅಂತರಂಗ ಅವನನ್ನು ವಿಪರೀತವಾಗಿ ವರ್ತಿಸುವಂತೆ ಮಾಡುತ್ತದೆ. ಅವನಿಂದ ಸಿವಿಯನ್ನು ಕಸಿದುಕೊಂಡು ಹಠಾತ್ತನೆ ಹೊರಡುತ್ತಾನೆ.
ಎ.ಎನ್. ಪ್ರಸನ್ನ ಬರೆಯುವ ಸಿನಿಮಾದ ಸರಣಿ

Read More

ಮಹಾಮರ್ಕಟ ಮನಸ್ಸಿನ ಸುತ್ತ…

ಮಾರ್ಟಿನ್‌ ಸಾಮಾನ್ಯರಂತಿರಲು ಮತ್ತು ಕಿರು ಪ್ರಮಾಣದ ಸಾವಧಾನದಿಂದಿರಲು ಬೇಕಾದ ಆಂತರಿಕ ಜೀವರಸವೇ ಇಲ್ಲದವನ ಹಾಗೆ ಕಾಣುತ್ತಾನೆ.. ಯಾವ ಬಗೆಯಲ್ಲಿ ಯೋಚಿಸಿದರೂ ಅವನ ಬುದ್ಧಿ, ಮನಸ್ಸಿನ ಎಳೆಗಳಲ್ಲಿ ಹಿಂಸಿಸುವುದಲ್ಲದೆ ಬೇರೆ ಬಣ್ಣಗಳ ಛಾಯೆಯೇ ಇರುವಂತೆ ಕಾಣುವುದಿಲ್ಲ. ಅವನು ಇತರ ಸಾಮಾನ್ಯರೊಂದಿಗೆ ಹೋಲಿಸಿಕೊಳ್ಳುವ ಮಾತಂತೂ ಹತ್ತಿರ ಸುಳಿಯುವ ಹಾಗೆಯೇ ಇರುವುದಿಲ್ಲ. ಅವನು ಸದಾಕಾಲ ಉಳಿದವರಿಗಿಂತ ಭಿನ್ನವಾಗಿ ರಚಿಸಿಕೊಂಡ ಮತ್ತು ಅದನ್ನೇ ಸಹಜವೆಂದು ನಂಬಿರುವ ಮನೋನೆಲೆಯಲ್ಲಿರುವ ವ್ಯಕ್ತಿ.
ಎ.ಎನ್. ಪ್ರಸನ್ನ ಸರಣಿ

Read More

ನಿಂಬೆಗಿಡಕ್ಕೇನು ಮನಸ್ಸಿದೆಯೇ?

ಆ ಭವ್ಯ ಮನೆಗೆ ಇಸ್ರೇಲಿನ ರಕ್ಷಣಾ ಮಂತ್ರಿಯ ಜೊತೆಗೆ ಅವನ ಹೆಂಡತಿ ಮೀರಾ ನವಾನ್‌  ಮತ್ತು ಅವನ ಅಧಿಕಾರಿ ವರ್ಗದಲ್ಲಿ, ರಕ್ಷಣಾ ಮಂತ್ರಿಯಲ್ಲಿ ಅನುರಾಗದಲೆಗಳನ್ನು ಹುಟ್ಟಿಸುವ ಸುಂದರಿಯೊಬ್ಬಳು ಇರುತ್ತಾಳೆ. ಜೊತೆಗೆ ಹತ್ತಾರು ಜನ ಸಹಾಯಕ ವರ್ಗದವರು. ನೋಡನೋಡುತ್ತಿದ್ದಂತೆ ತಾನು ಅತ್ತಿತ್ತ ಓಡಾಡಿ ಇಟ್ಟಿದ್ದ ಹೆಜ್ಜೆಗಳ ಮೇಲೆ ಬೇರೆ ಬೇರೆ ಹೆಜ್ಜೆಗಳು ಕಾಣುತ್ತವೆ. ಜೊತೆಗೆ ಅಷ್ಟುದ್ದಕ್ಕೂ ಬೇಲಿ ಹಬ್ಬಲು ಪ್ರಾರಂಭವಾಗುತ್ತದೆ. ಇಸ್ರೇಲಿನ ಸೀಕ್ರೆಟ್‌ ಪೊಲೀಸ್‌ನವರು ರಕ್ಷಣಾ ಮಂತ್ರಿಯ ಹಿತ ದೃಷ್ಟಿಯಿಂದ ಮತ್ತು ಉಗ್ರರ ಆಕ್ರಮಣದ ಸಂಭಾವ್ಯದ ಕಾರಣ ಇಡೀ ನಿಂಬೆ ಗಿಡದ ತೋಟವನ್ನು ಕಡಿಯಬೇಕೆಂದು ಯೋಚಿಸುತ್ತಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ