Advertisement

Tag: AN Prasanna

ನಮ್ಮದೇ ಎನ್ನಿಸುವ ಕತೆಗಳು…

ವಿಹಾರ’ಕ್ಕಿಂತ ‘ಹದ್ದು ಹಾರುವ ಹೊತ್ತು’ ಇನ್ನೂ ವಿಸ್ತಾರವಾದ ಕ್ಯಾನ್ವಾಸ್ ಹೊಂದಿರುವ ಕತೆ. ಊರಿಗೆ ಹೊಸತಾಗಿ ಬಂದು ಹೊರವಲಯದಲ್ಲಿ ಬಾಡಿಗೆ ಮನೆ ಮಾಡಿರುವ ಈ ಕತೆಯ ನಿರೂಪಕನು ಬಡಾವಣೆಯ ಪರಿಸರವನ್ನು ತಿಳಿದುಕೊಳ್ಳುವ ಹವಣಿಕೆಯಲ್ಲಿ ಕೇಳಿಸಿಕೊಂಡಿದ್ದೆಲ್ಲ ಕತೆಯ ಪ್ರಥಮಾರ್ಧವಾದರೆ ಉತ್ತರಾರ್ಧದ ಘಟನೆಗಳಿಗೆ ಆತ ಸಾಕ್ಷಿಯಾಗುತ್ತಾನೆ. ಹೀಗೆ ಹೊರಗಿನವನಾದ, ಆದರೆ ಒಂದು ಮಟ್ಟದಲ್ಲಿ ಭಾಗಿಯೂ ಆಗಿರುವ ನಿರೂಪಕನಿಗೆ ಎಲ್ಲಾ ಪಾತ್ರ ಮತ್ತು ಘಟನೆಗಳನ್ನು ಸನಿಹದಿಂದ, ಆದರೆ ವಸ್ತುನಿಷ್ಠವಾಗಿ, ನಿರೀಕ್ಷಿಸುವ ಅನುಕೂಲತೆ ಇದೆ.
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ”ಕ್ಕೆ ಎಂ. ಜಿ. ಹೆಗಡೆ ಬರೆದ ಮುನ್ನುಡಿ

Read More

ಏಕಾಂಗಿಯ ಸ್ವಗತಗಳು…

ಪ್ರಕಾಶನ ಸಂಸ್ಥೆಯ ಸಹಾಯಕಿ ಅವನ ಬಗ್ಗೆ ಹಿತವಾದ ಭಾವನೆಯಿಂದ ಪ್ರತಿಕ್ರಿಯಿಸುತ್ತಾಳೆ. ಇಂಟವ್ಯೂ ಮುಗಿದ ಮೇಲೆ ಭೇಟಿಯಾಗಲು ಇಷ್ಟಪಡುತ್ತಾಳೆ. ಪ್ರಕಾಶನದ ಒಡೆಯನಿಗೆ ಮಾತು ಮುಂದುವರಿಸಲು ಇಷ್ಟವಿರುತ್ತದೆ. ಆದರೆ ಆಂಡರ್ಸ್‌ನ ಶಿಥಿಲವಾದ ಅಂತರಂಗ ಅವನನ್ನು ವಿಪರೀತವಾಗಿ ವರ್ತಿಸುವಂತೆ ಮಾಡುತ್ತದೆ. ಅವನಿಂದ ಸಿವಿಯನ್ನು ಕಸಿದುಕೊಂಡು ಹಠಾತ್ತನೆ ಹೊರಡುತ್ತಾನೆ.
ಎ.ಎನ್. ಪ್ರಸನ್ನ ಬರೆಯುವ ಸಿನಿಮಾದ ಸರಣಿ

Read More

ಮಹಾಮರ್ಕಟ ಮನಸ್ಸಿನ ಸುತ್ತ…

ಮಾರ್ಟಿನ್‌ ಸಾಮಾನ್ಯರಂತಿರಲು ಮತ್ತು ಕಿರು ಪ್ರಮಾಣದ ಸಾವಧಾನದಿಂದಿರಲು ಬೇಕಾದ ಆಂತರಿಕ ಜೀವರಸವೇ ಇಲ್ಲದವನ ಹಾಗೆ ಕಾಣುತ್ತಾನೆ.. ಯಾವ ಬಗೆಯಲ್ಲಿ ಯೋಚಿಸಿದರೂ ಅವನ ಬುದ್ಧಿ, ಮನಸ್ಸಿನ ಎಳೆಗಳಲ್ಲಿ ಹಿಂಸಿಸುವುದಲ್ಲದೆ ಬೇರೆ ಬಣ್ಣಗಳ ಛಾಯೆಯೇ ಇರುವಂತೆ ಕಾಣುವುದಿಲ್ಲ. ಅವನು ಇತರ ಸಾಮಾನ್ಯರೊಂದಿಗೆ ಹೋಲಿಸಿಕೊಳ್ಳುವ ಮಾತಂತೂ ಹತ್ತಿರ ಸುಳಿಯುವ ಹಾಗೆಯೇ ಇರುವುದಿಲ್ಲ. ಅವನು ಸದಾಕಾಲ ಉಳಿದವರಿಗಿಂತ ಭಿನ್ನವಾಗಿ ರಚಿಸಿಕೊಂಡ ಮತ್ತು ಅದನ್ನೇ ಸಹಜವೆಂದು ನಂಬಿರುವ ಮನೋನೆಲೆಯಲ್ಲಿರುವ ವ್ಯಕ್ತಿ.
ಎ.ಎನ್. ಪ್ರಸನ್ನ ಸರಣಿ

Read More

ನಿಂಬೆಗಿಡಕ್ಕೇನು ಮನಸ್ಸಿದೆಯೇ?

ಆ ಭವ್ಯ ಮನೆಗೆ ಇಸ್ರೇಲಿನ ರಕ್ಷಣಾ ಮಂತ್ರಿಯ ಜೊತೆಗೆ ಅವನ ಹೆಂಡತಿ ಮೀರಾ ನವಾನ್‌  ಮತ್ತು ಅವನ ಅಧಿಕಾರಿ ವರ್ಗದಲ್ಲಿ, ರಕ್ಷಣಾ ಮಂತ್ರಿಯಲ್ಲಿ ಅನುರಾಗದಲೆಗಳನ್ನು ಹುಟ್ಟಿಸುವ ಸುಂದರಿಯೊಬ್ಬಳು ಇರುತ್ತಾಳೆ. ಜೊತೆಗೆ ಹತ್ತಾರು ಜನ ಸಹಾಯಕ ವರ್ಗದವರು. ನೋಡನೋಡುತ್ತಿದ್ದಂತೆ ತಾನು ಅತ್ತಿತ್ತ ಓಡಾಡಿ ಇಟ್ಟಿದ್ದ ಹೆಜ್ಜೆಗಳ ಮೇಲೆ ಬೇರೆ ಬೇರೆ ಹೆಜ್ಜೆಗಳು ಕಾಣುತ್ತವೆ. ಜೊತೆಗೆ ಅಷ್ಟುದ್ದಕ್ಕೂ ಬೇಲಿ ಹಬ್ಬಲು ಪ್ರಾರಂಭವಾಗುತ್ತದೆ. ಇಸ್ರೇಲಿನ ಸೀಕ್ರೆಟ್‌ ಪೊಲೀಸ್‌ನವರು ರಕ್ಷಣಾ ಮಂತ್ರಿಯ ಹಿತ ದೃಷ್ಟಿಯಿಂದ ಮತ್ತು ಉಗ್ರರ ಆಕ್ರಮಣದ ಸಂಭಾವ್ಯದ ಕಾರಣ ಇಡೀ ನಿಂಬೆ ಗಿಡದ ತೋಟವನ್ನು ಕಡಿಯಬೇಕೆಂದು ಯೋಚಿಸುತ್ತಾರೆ.

Read More

ರಾಜಕೀಯ ಸ್ಥಿತಿಗೊಂದು ಪ್ರತಿಕ್ರಿಯೆ ಇರಾನ್‌ ನ ʻಕಾಂದಹಾರ್ʼ

ಮೊಹಿಸಿನ್ ಮಕ್ಬಲ್‌ಬಫ್ ಆಫ್ಘಾನಿಸ್ತಾನದ ಬಗ್ಗೆ ತಯಾರಿಸಿದ ಇತರ ಚಿತ್ರಗಳಿಗಿಂತ ಆಫ್ಘಾನಿಸ್ತಾನದಲ್ಲಿಯೇ ಚಿತ್ರೀಕರಣಗೊಂಡು ವಿಶೇಷ ಹೆಗ್ಗಳಿಕೆಗೆ ಪಾತ್ರವಾದ ಚಿತ್ರ ʻಕಾಂದಹಾರ್ʼ. ನರಕದಲ್ಲಿರುವವರ ಬಗ್ಗೆ ಅಲ್ಲಿಯೇ ಹೋಗಿ ಚಿತ್ರೀಕರಣ ಮಾಡುತ್ತೇನೆ ಎನ್ನುವ ಎದೆಗಾರಿಕೆ ಮಕ್ಬಲ್‌ಬಫ್‌ನದು. ತಾನು ಅಲ್ಲಿರುವಷ್ಟು ಕಾಲ ಪ್ರತಿದಿನವೂ ಒಂದು ಪರೀಕ್ಷೆಯಾಗಿತ್ತು, ಜೀವವನ್ನು ಎಡಗೈಯಲ್ಲಿ ಹಿಡಿದಿರಬೇಕಾಗಿತ್ತು. ಅಲ್ಲಿನ ಜನರ ಅನುಮಾನ, ಆತಂಕಗಳನ್ನು ತೀರ ಪ್ರಯಾಸದಿಂದ ನಿವಾರಿಸಬೇಕಾಗಿತ್ತು. ಚಿತ್ರದಲ್ಲಿ ನಟಿಸಲು ಅಲ್ಲಿನವರನ್ನೇ ಅವಲಂಬಿಸಬೇಕಾದ ಪ್ರಸಂಗವಿತ್ತು.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಇರಾನ್‌ ನ ʻಕಾಂದಹಾರ್ʼ ಸಿನಿಮಾದ ವಿಶ್ಲೇಷಣೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ