Advertisement

Tag: anjali ramanna

ಉತ್ಸಾಹ ಚಿಲುಮೆಯ ತೋಳಿಗೆ ಬಳ್ಳಿಯಾಗಿದ್ದ ನಾನು!

ಧರ್ಮಶಾಲಾದಿಂದ 112 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಆಕರ್ಷಿಸುತ್ತದೆ ಖಜ್ಜಿಯಾರ್ ಗಿರಿಧಾಮ. ದೌಲಾದರ ಪರ್ವತಶ್ರೇಣಿಯ ನಡುವೆ 12ನೆಯ ಶತಮಾನದಲ್ಲಿ ಚಂಬಾ ರಾಜಮನೆತನದವರು ಕಟ್ಟಿಸಿರುವ, ಸಂಪೂರ್ಣ ಮರದಿಂದ ಮಾಡಿರುವ ಅರಮನೆ. ಅದರ ಬಾಗಿಲುವಾಡಗಳಿಗೆ ಕಟ್ಟಿಕೊಂಡಿರುವ ಚಿನ್ನದ ತಗಡು, ಅರಮನೆಯ ಒಳಗೇ ಇರುವ ಖಾಜ್ಜಿ ನಾಗಮಂದಿರ. ಶಿವ ಮತ್ತು ಹಿಡಿಂಬೆಯ ಮೂರ್ತಿಗಳೂ ಇರುವುದು ಇಲ್ಲಿನ ಆಕರ್ಷಣೆ. ನವರಾತ್ರಿಯಲ್ಲಿ ಮಾತ್ರ ಇಲ್ಲಿ ಪೂಜೆ ನಡೆಯುತ್ತದೆ. ಬಾಕಿಯಂತೆ ದೈವಭಕ್ತ ಪ್ರವಾಸಿಗರು ತಾವೇ ಕುಂಕುಮವಿಟ್ಟು ಪೂಜೆ ಮಾಡಿ ಬರಬಹುದು.
ʻಕಂಡಷ್ಟೂ ಪ್ರಪಂಚʼ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಸವಾರಿ ಹೊರಡುವ ಮುನ್ನ ಕೇಳಿರಿ ಸಲಹೆಗಳನ್ನ

ಸ್ಥಳೀಯರ ಜೊತೆಗಿನ ಮಾತು ಪ್ರವಾಸದ ಹೊರಹನ್ನು ಮತ್ತಷ್ಟು ಹೆಚ್ಚಿಸಿ, ಮಾಹಿತಿಯೊದಗಿಸಿ ಅರ್ಥಪೂರ್ಣವೆನಿಸುತ್ತದೆ. ಹಾಗೆ ಮಾತನಾಡುವಾಗ ವೈಯಕ್ತಿಕ ಮಾಹಿತಿ ಕೊಡುವುದರಿಂದ ದೂರ ಉಳಿಯುವುದು ಮತ್ತು ಧಾರ್ಮಿಕ ಹಾಗು ಆಹಾರದಂತಹ ಸೂಕ್ಷ್ಮ ವಿಚಾರಗಳ ಬಗ್ಗೆ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳದಿರುವುದು ಸ್ವಾಗತಾರ್ಹ. ಅರೆಬರೆ ರಾಜಕೀಯ ಜ್ಞಾನದಿಂದ ನಮ್ಮ ದೇಶದ ಬಗ್ಗೆ ಚೀಳು ಅಭಿಪ್ರಾಯ ಬರದಂತೆ ಮಾತನಾಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಬೇರೆಯವರ ಮಕ್ಕಳನ್ನು ಹಿರಿಯರ ಅನುಮತಿಯಿಲ್ಲದೆ ಮುದ್ದು ಮಾಡುವ ಬಗ್ಗೆ ಎಚ್ಚರಿಕೆ ಇರಬೇಕು. ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ  ಪ್ರವಾಸಕ್ಕೆ ಬೇಕಾದ ಸಲಹೆಗಳನ್ನು ನೀಡಿದ್ದಾರೆ. 

Read More

ನೈನಿತಾಲ್ ಟ್ರಿಪ್ ನಲ್ಲಿ ಭೇಟಿಯಾದ ಭಗಿನಿ ಮತ್ತು ಕವಿ

1929ರಲ್ಲಿ ಗಾಂಧೀಜಿ ಕೌಸಾನಿಗೆ ಬಂದು, ಒಂದು ಅತಿಥಿ ಗೃಹದಲ್ಲಿ 3 ತಿಂಗಳು ತಂಗಿದ್ದರು. ಅಲ್ಲಿ ಅವರು “ ಅನಾಸಕ್ತಿ ಯೋಗ” ದ ಬಗ್ಗೆ ಬರೆದ್ದದ್ದರಿಂದ ಆ ಗೆಸ್ಟ್ ಹೌಸ್ ಈಗ ಅನಾಸಕ್ತಿ ಆಶ್ರಮ ಎಂದು ಕರೆಸಿಕೊಳ್ಳುತ್ತಿದೆ. ಗಾಂಧಿ ಆಗ ಕೌಸಾನಿಯನ್ನು ‘ಸ್ವಿಟ್ಸರ್ ಲ್ಯಾಂಡ್’ ಎಂದು ಕರೆದಿದ್ದರಂತೆ. ಈಗ ಅನಾಸಕ್ತಿ ಆಶ್ರಮದಲ್ಲಿ ಮ್ಯೂಸಿಯಮ್, ಪುಸ್ತಗಳ ಸಂಗ್ರಹಾಲಯ ಮಾಡಲಾಗಿದೆ. ಸರ್ಕಾರದ ದೇಖ್‍ರೇಕಿಯಲ್ಲಿ ಇನ್ನೂ ಮೌನ ಮತ್ತು ಕಳಚಿಕೊಳ್ಳುವುದರ ಬಗ್ಗೆ ಆಸಕ್ತಿ ಹುಟ್ಟಿಸುತ್ತಾ ಸದ್ದು ಮಾಡದೆ ನಿಂತಿದೆ ಅನಾಸಕ್ತಿ ಆಶ್ರಮ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ  ಅಂಜಲಿ ರಾಮಣ್ಣ ಬರಹ ಇಂದಿನ ಓದಿಗಾಗಿ.

Read More

‘ಒಬ್ಬ ಸಾಮಾನ್ಯನೂ ರಾಮನೇ ಆಗಬಹುದು’

ಚಿಕ್ಕಮಗಳೂರಿನಲ್ಲಿ  ಬಾಬಾಬುಡನ್ ಗಿರಿಗೆ ತೆರಳಿ ದತ್ತಪೀಠದ ದರ್ಶನ ಪಡೆಯುವುದೊಂದು ಪ್ರೀತಿಯ ವಿಚಾರ. ಆದರೆ ಜನಜಂಗುಳಿಯ ನಡುವೆ ಕಿರಿದಾದ ಹಾದಿಯಲ್ಲಿ ಒಂದೊಂದೇ ಹೆಜ್ಜೆಯಿಟ್ಟು ಹೋದ ಬಳಿಕ ಮನಸ್ಸು ಮುದುಡಿದಂತಾಯಿತು. ನಿರಾಳವಾದ ವಾತಾವರಣದಲ್ಲಿ ಈ ಪರಿಸರವನ್ನು ಕಣ್ತುಂಬಿಕೊಂಡ ಬಾಲ್ಯದ ಕ್ಷಣಗಳು ನೆನಪಾದವು.  ಅಲ್ಲಿಂದ ಕೋದಂಡ ರಾಮ ಸೀತಾದೇವಿ ಮತ್ತು ಲಕ್ಷ್ಮಣನೊಡನೆ ತ್ರಿಭಂಗಿಯಲ್ಲಿ ನಿಂತಿರುವ ದೇವಸ್ಥಾನಕ್ಕೆ ತೆರಳಿದಾಗ ಅಲ್ಲೊಂದು ಸುಂದರವಾದ ವಿವರಣೆ ಸಿಕ್ಕಿತು. ಚಿಕ್ಕಮಗಳೂರು ಪ್ರವಾಸದ ನೆನಪುಗಳ ಬುತ್ತಿಯನ್ನು ಉಣಬಡಿಸಿದ್ದಾರೆ ಅಂಜಲಿ ರಾಮಣ್ಣ.

Read More

ಮಾರ್ಟಿನ್ ಲೂಥರ್ ಕಿಂಗ್ ನೆನಪಿನಲ್ಲಿ ಹಾಕಿದ ಹೆಜ್ಜೆಗಳು

ನಾನು ವಿದೇಶದಲ್ಲಿರುವ ಪರದೇಶಿ ಎನ್ನಿಸಲಿಲ್ಲ. ಅಮೆರಿಕ  ದೇಶವನ್ನು ನೋಡುವ ದೃಷ್ಟಿಕೋನವೇ ಬದಲಾಯ್ತು. ಆ ದಿನ ನನ್ನುಸಿರಿಗೆ ಉಸಿರು ಕೊಟ್ಟ ಮಾರ್ಟಿನ್. ನನಗೀಗ ಜೀವನ ಬೇಕು ಅನಿಸಲು ಶುರುವಾಯ್ತು. ಒಳಗಿನ ಕಣ್ಣು ಇಂಚಿಂಚೇ ತೆರೆಯ ಹತ್ತಿತು. ಮುಂದಿನ ಎಲ್ಲಾ ದಿನಗಳ ಪ್ರಯಾಣದಲ್ಲಿ ಅಲ್ಲಿನ ಎಲ್ಲೆಡೆಯಲ್ಲೂ ಕೆಳಮಟ್ಟದ ಕೆಲಸ ಎಂದು ಗುರುತಿಸಲ್ಪಟ್ಟಿರುವ ಎಲ್ಲಾ ಕೆಲಸಗಳನ್ನು ಕಪ್ಪು ಜನರೇ ಮಾಡುತ್ತಿದ್ದದ್ದು ಎದ್ದು ಕಾಣುತ್ತಿತ್ತು. ಬಿಳಿಯರ ಜೊತೆಗೆ ತಮ್ಮನ್ನು ಗುರುತಿಸಿಕೊಳ್ಳಬೇಕೆನ್ನುವ ಹಪಾಹಪಿ ಅವರಲ್ಲಿ ಇನ್ನೂ ಜೀವಂತವಿರುವುದನ್ನು ಕಂಡೆ.
‘ಕಂಡಷ್ಟು ಪ್ರಪಂಚ’ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ