Advertisement

Tag: Arun Joladakudligi

ಗಂಟಿಚೋರರೇ ನೆನಪಿಟ್ಟುಕೊಂಡ ಕಥನಗಳಲ್ಲಿದೆ ಚರಿತ್ರೆ

ಸೇಟ್‌ಜೀ ಒಬ್ಬರು ಬೆಂಗಳೂರಿನಿಂದ ಮುಂಬೈಗೆ ಹೆಚ್ಚುವರಿ ಗೋಲ್ಡ್ ಬಿಸ್ಕೆಟ್ ಸಾಗಿಸುವ ಮಾಹಿತಿ ಸಂಗ್ರಹಿಸಿ ಪ್ಲಾನ್ ಮಾಡಿದಂತೆ ಅವರೆಲ್ಲ ಸೇರಿ ‘ರಾಬರಿ’ ಮಾಡಿದರು. ಎಲ್ಲವೂ ಪ್ಲಾನ್ ಪ್ರಕಾರವೇ ನಡೆಯಿತು, ಆದರೆ ತಪ್ಪಿಸಿಕೊಳ್ಳುವಾಗ ಈ ಟೀಮಿನ ಇಬ್ಬರು ಸಿಕ್ಕಿಹಾಕಿಕೊಂಡರು.  ಮರುದಿನ ದೊಡ್ಡ ಸುದ್ದಿಯಾಯಿತು. ಸಿಕ್ಕಿಹಾಕಿಕೊಂಡ ಸದಸ್ಯರು ಕಳ್ಳತನದ ಕುರಿತು ಬಾಯಿಬಿಡಲಿಲ್ಲ. ಆಗ ಪೊಲೀಸರೊಂದು ಉಪಾಯ ಮಾಡಿ, ಬಂಧಿತರನ್ನು ಬಿಡುಗಡೆ ಮಾಡಲು ನಿರ್ಧರಿಸಿದರು. ಮುಂದೇನಾಯಿತು ?
‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಡಾ.ಅರುಣ್ ಜೋಳದ ಕೂಡ್ಲಿಗಿ ಬರಹ. 

Read More

ಭಾರತ್ ಬ್ಲೇಡಿನ ಲಕ್ಷೆ ಮತ್ತು ಮನೆಕನ್ನದ ಕತೆಗಳು

ಮಹಿಳೆಯರು ಗಂಟಿಚೋರ್ ಸಮುದಾಯದ ಎಲ್ಲಾ ಸಂಗತಿಗಳಲ್ಲಿಯೂ ಪಾಲುದಾರರಾಗಿದ್ದರು. ತುಡುಗುತನದಲ್ಲಿಯೂ ಮಹಿಳೆಯರ ಪಾಲ್ಗೊಳ್ಳುವಿಕೆ ಕುತೂಹಲಕಾರಿಯಾಗಿದೆ. ಗುಂಪಾಗಿ ತುಡುಗು ಮಾಡುವುದಕ್ಕಿಂತ ಒಂಟಿಯಾಗಿ ತುಡುಗು ಮಾಡುವ ಪ್ರಮಾಣ ಹೆಚ್ಚಾಗಿತ್ತು. ಹಾಗಾಗಿ ಗಂಟಿಚೋರರ ತುಡುಗುತನದ ಪ್ರವೃತ್ತಿಯಲ್ಲಿ ಮಹಿಳೆಯರ ಪಾಲುದಾರಿಕೆ ವಿಶೇಷವಾಗಿದೆ. ಇವರಲ್ಲಿಯೂ ಪ್ರಾದೇಶಿಕವಾಗಿ ತುಂಬಾ ಪ್ರಸಿದ್ಧಿಯನ್ನು ಪಡೆದ ಮಹಿಳೆಯರೂ ಇದ್ದಾರೆ. ‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಅರುಣ್ ಜೋಳದ ಕೂಡ್ಲಿಗಿ ಬರೆದ ಬರಹ ಇಲ್ಲಿದೆ. 

Read More

ಗಂಟಿಚೋರರ ತುಡುಗಿನ ಲೋಕ

ಇದೊಂದು ಭಿನ್ನವಾದ ಕಳವು. ಮೊದಲೇ ಇಂತಹ ಊರಲ್ಲಿ ನಾಟಕ, ಬಯಲಾಟ ಅಥವಾ ಪಾರಿಜಾತ ನಡೆಯುವ ಸುದ್ದಿ ತಿಳಿದು, ಆ ನಾಟಕದ ರಾತ್ರಿ ಕಳ್ಳತನ ಮಾಡುವುದಕ್ಕೆ ಆಯಾ ಊರುಗಳಲ್ಲಿ ಮೊದಲೇ ಸುತ್ತಿ ಶ್ರೀಮಂತರ ಮನೆಗಳನ್ನು ಗುರುತು ಮಾಡಿ ತುಡುಗು ಮಾಡುತ್ತಿದ್ದರು. ಮುಖ್ಯವಾಗಿ ಹಿಂದೆ ಉತ್ತರ ಕರ್ನಾಟಕದಲ್ಲಿ ನಿರಂತರವಾಗಿ ನಾಟಕಗಳು ನಡೆಯುತ್ತಿದ್ದುದರಿಂದ ಇದರ ಲಾಭವನ್ನು ಗಂಟಿಚೋರರು ತುಡುಗು ಮಾಡಲು ಬಳಸುತ್ತಿದ್ದರು. ಅರುಣ್ ಜೋಳದ ಕೂಡ್ಲಿಗಿ ಬರೆಯುವ ಗಂಟಿಚೋರರ ಕಥನದ ಐದನೆಯ ಕಂತು ಇಲ್ಲಿದೆ.

Read More

`ಗಂಟಿಚೋರರು’ ಮೂಲತಃ ಸೈನಿಕರಾಗಿದ್ದರೆ?

ಠಕ್ಕರ ಹಿನ್ನೆಲೆಯಲ್ಲಿ ಗಂಟಿಚೋರರನ್ನು ನೋಡಿದರೆ ಮತ್ತೊಂದು ಆಯಾಮ ತೆರೆದುಕೊಳ್ಳುತ್ತದೆ. ಠಕ್ಕರು ದೊಡ್ಡಮಟ್ಟದ ಲೂಟಿ, ಕೊಲೆ ಸುಲಿಗೆ ಮುಂತಾದವುಗಳ ಮೂಲಕ ಜನರನ್ನು ಭಯಭೀತರನ್ನಾಗಿಸುತ್ತಿದ್ದರು. ಅವರು ಹೆಚ್ಚಾಗಿ ವ್ಯಾಪಾರಿಗಳನ್ನು ಲೂಟಿ ಮಾಡುತ್ತಿದ್ದರು. ಹಾಗಾಗಿ ಇವರು ಒಂದು ರೀತಿಯಲ್ಲಿ ಅಲೆಮಾರಿ ಕಳ್ಳರಾಗಿದ್ದರು. ಆದರೆ ಗಂಟಿಚೋರರ ಹೆಸರಲ್ಲೇ ‘ಗಂಟುಕಳ್ಳರು’ ಎಂದಿರುವುದು ಇವರ ಕಳ್ಳತನದ ಸ್ವರೂಪವನ್ನು ಕಾಣಿಸುತ್ತದೆ. ಹೀಗಾಗಿಯೇ ಇವರನ್ನು ಸಂತೆಕಳ್ಳರು ಎಂದೂ ಕರೆಯುತ್ತಿದ್ದರು. 
ಅರುಣ್ ಜೋಳದ ಕೂಡ್ಲಿಗಿ ಬರೆಯುವ ಗಂಟಿಚೋರರ ಕಥನದ ಮೂರನೇಯ ಕಂತು ಇಲ್ಲಿದೆ.

Read More

ಅರುಣ್ ಜೋಳದಕೂಡ್ಲಿಗಿ ಬರೆಯುವ ಹೊಸ ಸರಣಿ ‘ಗಂಟಿಚೋರರ ಕಥನಗಳು’

ಭಾರತದ ಕೃಷಿ ಮತ್ತು ವ್ಯವಸಾಯದ ಜತೆ ಬೆಸೆದುಕೊಂಡಿದ್ದ ಕುಶಲಕರ್ಮಿಗಳನ್ನೂ, ಅರಣ್ಯವಾಸಿ, ಅಲೆಮಾರಿ ಮತ್ತು ಆದಿವಾಸಿ ಸಮುದಾಯಗಳನ್ನು ನಿಯಂತ್ರಿಸಲು ಬ್ರಿಟಿಷ್ ಆಡಳಿತ ರೂಪಿಸಿದ ಕಾಯ್ದೆ ‘ಕ್ರಿಮಿನಲ್ ಟ್ರೈಬ್ಸ್ ಆಕ್ಟ್’. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕವೂ ಇದು ಮುಂದುವರೆಯಿತು. ಇದರಿಂದಾಗಿ ಅಲೆಮಾರಿ ಸಮುದಾಯಕ್ಕೆ ಸೇರಿದ ಗಂಟಿಚೋರರು ಹಾಗೂ ಅಂತಹುದೇ ಇತರ ಸಮುದಾಯದ ಜನರು ಪಡಿಪಾಟಲು ಅನುಭವಿಸಬೇಕಾಯಿತು.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ