ತೆರೆಮರೆಯ ಅಂತರಂಗದ ಕಥೆ…

ಅಪ್ಪ ಮೌನವಾಗಿ ಒಂದು ಓರೆಗೆ ಕೂತಿದ್ದರು. ಅರವಿಂದ ಅದೆಲ್ಲಿ ಅಲೆಯೋಕ್ಕೆ ಹೋಗಿದ್ದನೋ ಏನೋ… ಅವನೊಬ್ಬ ಶುದ್ಧ ಪೋಕರಿ ತಮ್ಮ. ಏನಾಯಿತೆಂದು ವಿಚಾರಿಸಿದರೆ, ಅಮ್ಮ, ‘ಚಿಕ್ಕಮ್ಮನಿಗೆ ಸ್ವಲ್ಪ ಹೊಟ್ಟೆನೋವು ಕಾಣಿಸಿಕೊಂಡಿತ್ತು ಅಷ್ಟೆ. ಈಗ ಹುಷಾರಾಗಿದ್ದಾಳೆ’ ಎಂದರು. ಹುಂ… ಮಕ್ಕಳಿಗೆ ಇದೆಲ್ಲಾ ಗೊತ್ತಾಗಬಾರದು ಅಂತ ದೊಡ್ಡವರು ಹೀಗೆ ಸುಳ್ಳು ಹೇಳೋದು ಸಹಜವಲ್ಲವೇ..? ಚಿಕ್ಕಮ್ಮನನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ಕರೆದುಕೊಂಡು ಬಂದ ಕೆಲದಿನಗಳಲ್ಲಿ, ಮನೆಯಲ್ಲಿ ನಡೀತಾ ಇದ್ದ ಮಾತುಕತೆಗಳಿಂದಲೇ ತಿಳಿಯಿತು ಚಿಕ್ಕಮ್ಮ ಆತ್ಮಹತ್ಯೆಗೆ ಯತ್ನಿಸಿದ್ದರು ಅಂತ! ಯಾರೋ ಬಸ್ ಕಂಡೆಕ್ಟರ್ ಅಂತೆ.. ಗಾಢವಾಗಿ ಪ್ರೀತಿಸಿದ್ರಂತೆ..
ಆಶಾ ರಘು ಹೊಸ ಕಾದಂಬರಿ “ಚಿತ್ತರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More