Advertisement

Tag: Australia

ಮಿಶ್ರಭಾವಗಳ ಮೂರ್ತರೂಪ ‘ಆಸ್ಟ್ರೇಲಿಯಾ ಡೇʼ : ವಿನತೆ ಶರ್ಮ ಅಂಕಣ

ಮೂಲನಿವಾಸಿ ಜನಸಮುದಾಯಗಳ ಬೆಂಬಿಡದ ಪ್ರಯತ್ನಗಳಿಂದ ಅವರ ಸಂಸ್ಕೃತಿಗಳು, ಭಾಷೆಗಳ ಬಗ್ಗೆ ಗೌರವ ಹೆಚ್ಚುತ್ತಿದೆ. ಇದರ ಜೊತೆಗೆ ಆಸ್ಟ್ರೇಲಿಯಾದಲ್ಲಿ ಬೆಳೆಯುತ್ತಿರುವ ಬಹುಸಂಸ್ಕೃತಿಗಳ ಪ್ರಭಾವ, ವಲಸಿಗರ ಸಂಖ್ಯೆ ಜನರ ಮನೋಭಾವನೆಯನ್ನು ಬದಲಿಸುತ್ತಿದೆಯೇನೋ. ಇವರುಗಳ ಬಹುಸಂಸ್ಕೃತಿ ಆಚಾರ-ವಿಚಾರಗಳ, ಆಹಾರಪದ್ಧತಿಗಳ ವೈವಿಧ್ಯತೆಗಳಿಂದ, ಸಾಮ್ಯತೆಗಳಿಂದ ಪರಸ್ಪರರನ್ನು ಒಪ್ಪಿಕೊಳ್ಳುವ ಸಾಧ್ಯತೆಗಳು ವಿಸ್ತರಿಸುತ್ತಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕಾಲಕ್ಕೆ ಶರಣು ಎನ್ನೋಣ: ವಿನತೆ ಶರ್ಮ ಅಂಕಣ

ವಾರಾಂತ್ಯಗಳಲ್ಲಿ ದೇಶದ ರಾಜಧಾನಿ ನಗರಗಳಲ್ಲಿ ನಡೆಸುವ ಸಾರ್ವಜನಿಕ ಪ್ರದರ್ಶನಗಳು, ಬಹುಸಂಸ್ಕೃತಿಗಳವರ ಕಾರ್ಯಕ್ರಮಗಳು ಹೆಚ್ಚಾಗಿವೆ. ೨೦೨೩ ರ ಕೊನೆಯಲ್ಲಿ ನಾವು ಮೂರು, ನಾಲ್ಕು ಬಾರಿ ಇಸ್ರೇಲ್, ಪ್ಯಾಲೆಸ್ಟೈನ್-ಗಾಝಾ, ಯೂಕ್ರೇನ್ ಮೂಲಗಳ ಜನರು ನಡೆಸುತ್ತಿದ್ದ ಪ್ರದರ್ಶನಗಳ ಪರಿಣಾಮಕ್ಕೆ ಸಿಲುಕಿದ್ದೆವು. ಅದೇನೂ ದೊಡ್ಡ ವಿಷಯವಲ್ಲ ಬಿಡಿ. ಪ್ರದರ್ಶನದಲ್ಲಿ ಭಾಗವಹಿಸಿದ್ದ ಪ್ರತಿರೋಧಿಗಳು ಘೋಷಣೆಗಳನ್ನು ಕೂಗುತ್ತಾ ರಸ್ತೆಗಿಳಿದಾಗ ಪೊಲೀಸರು ರಸ್ತೆ ಬಂದ್ ಮಾಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬೇಸಿಗೆ ರಜೆಯೆಂದರೆ …: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದ ಬೇಸಿಗೆಯ ಕಡುಬಿಸಿಯನ್ನು ತಪ್ಪಿಸಿಕೊಳ್ಳಲು ಕೆಲವರು ತಂಪು ಪ್ರದೇಶಗಳನ್ನು ಆಯ್ದುಕೊಳ್ಳುತ್ತಾರೆ. ಆದರೆ ಮುಂಚಿತವಾಗಿಯೇ ಬೇಸಿಗೆಯ ರಜಾದಿನಗಳನ್ನು ಗಮನದಲ್ಲಿಟ್ಟುಕೊಂಡೇ ಅನೇಕ ಆಸ್ಟ್ರೇಲಿಯನ್ ಸಂಸ್ಥೆಗಳು, ಸರಕಾರದ ಪ್ರವಾಸೀ ಇಲಾಖೆಗಳು ದೇಶದ ಉದ್ದಗಲಕ್ಕೂ ಹಾಸಿ ಹರಡಿರುವ ನೂರಾರು ಪ್ರವಾಸಸ್ಥಳಗಳ ಬಗ್ಗೆ ಆಕರ್ಷಕ ಜಾಹಿರಾತುಗಳನ್ನು ಕೊಡುತ್ತಾ, ಹಲವಾರು ತರಹದ ರಿಯಾಯ್ತಿಗಳು, ಸೌಲಭ್ಯಗಳ ಆಮಿಷವೊಡ್ಡುತ್ತಾರೆ. ಇವು ಮಧ್ಯಮ ವರಮಾನದ ಕುಟುಂಬಗಳನ್ನು ಕೈಬೀಸಿ ಕರೆಯುತ್ತವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನಮ್ಮ ಆಹಾರ ನಮ್ಮ ಸಮುದಾಯದ ಹಸಿರುಕಣ್ಣು!: ವಿನತೆ ಶರ್ಮ ಅಂಕಣ

ಎಲ್ಲರ ಜಗಳದಲ್ಲಿ ಬಡವಾಗಿರುವುದು ನಾವೇ ನಾವು, ಸಾಮಾನ್ಯರು. ಏಕೆಂದರೆ ನಾವು ಪ್ರಕೃತಿಯ ಭಾಗವಲ್ಲವೇ! ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ತಿನ್ನುವ ಆಹಾರ ಬೆಳೆಯುವ ಮಣ್ಣಿಗೆ ಅನಾರೋಗ್ಯವುಂಟಾದರೆ ನಮ್ಮ ಆರೋಗ್ಯವೂ ಕೆಡುತ್ತದೆ ಎಂದು ಕಳೆದ ‘ಆಸ್ಟ್ರೇಲಿಯಾ ಪತ್ರ’ದಲ್ಲಿ ಬರೆದಿದ್ದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕೇಂದ್ರೀಯ ಬಜೆಟ್‌ನ ಉಪಕಥೆಗಳು: ಡಾ. ವಿನತೆ ಶರ್ಮ ಅಂಕಣ

ಇತ್ತೀಚೆಗೆ ವಿದ್ಯಾರ್ಥಿನಿಯೊಬ್ಬಳು ಹೇಳಿದಂತೆ ಯೂನಿವರ್ಸಿಟಿಯ ಸಹಪಾಠಿಯೊಬ್ಬರು ತಮ್ಮ ಕಾರಿನಲ್ಲಿ ಬದುಕುತ್ತಿದ್ದರಂತೆ. ರಾತ್ರಿ ಸಮಯ ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿಕೊಂಡಿರುವುದು, ಒಳಗೆ ಮುದುರಿಕೊಂಡು ಮಲಗುವುದು. ಬೆಳಿಗ್ಗೆ ಎದ್ದು ಯೂನಿವರ್ಸಿಟಿಗೆ ಬಂದು ಅಲ್ಲಿದ್ದ ಟಾಯ್ಲೆಟ್, ಶವರ್ ಸೌಲಭ್ಯಗಳನ್ನು ಬಳಸಿಕೊಂಡು, ಕೆಫೆಯಲ್ಲಿ ವಿದ್ಯಾರ್ಥಿಗಳಿಗೆ ಸಿಕ್ಕುವ ರಿಯಾಯ್ತಿ ದರದಲ್ಲಿ ಕಾಫಿ, ಸ್ಯಾಂಡ್ವಿಚ್ ಮತ್ತು ಉಚಿತ ಹಣ್ಣು ಪಡೆಯುವುದು. ದಿನಪೂರ್ತಿ ಯೂನಿವರ್ಸಿಟಿ ಕಟ್ಟಡದೊಳಗೇ ಇದ್ದುಕೊಂಡು ಒಂದಷ್ಟು ವ್ಯಾಸಂಗ, ನಿದ್ದೆ ಮಾಡುವುದು. ರಾತ್ರಿ ಪುನಃ ಕಾರಿಗೆ ವಾಪಸ್.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ