Advertisement

Tag: Australia

ಶರತ್ಕಾಲದ ರಂಗುರಂಗಿನ ಪ್ರಚಾರ: ಡಾ. ವಿನತೆ ಶರ್ಮ ಅಂಕಣ

ಕಾನೂನಿನ ಪ್ರಕಾರ ಗೋಡೆ ಗ್ರಫಿಟಿ ಆರ್ಟ್, ಮಸಿ ಬಳೆಯುವುದು ಇಂಥವುದೆಲ್ಲಾ ಅಪರಾಧಗಳು. ಬಲವಾದ, ಅದರಲ್ಲೂ ಕೇಂದ್ರೀಯ ವಿರೋಧಪಕ್ಷದ ನಾಯಕರಾದ ಪೀಟರ್ ಡಟ್ಟನ್ ಅವರ ಭಿತ್ತಿಚಿತ್ರಕ್ಕೆ ಮಸಿ ಬಳೆದದ್ದನ್ನ ನೋಡಿ ನನಗೆ ಆಶ್ಚರ್ಯವಾಯ್ತು. ಅದ್ಯಾರೊ ಬಹಳ ಧೈರ್ಯವಂತರಿರಬೇಕು ಎಂದುಕೊಂಡೆ. ಇಲ್ಲವೇ, ಡಟ್ಟನ್ ಅವರ ಸ್ವಲ್ಪವೂ ಸತ್ವವಿಲ್ಲದ, ಅಸತ್ಯದ, ಅಸಂಗತ ಮಾತುಗಳು, ಹೇಳಿಕೆಗಳಿಂದ ಬೇಸತ್ತು ಅವರ ಭಿತ್ತಿಚಿತ್ರದ ಮುಖಕ್ಕೆ ಮಸಿಬಳೆಯುವ ಯೋಚನೆ ಬಂದಿರಬೇಕು. ಅವರ ಬಳಿ ಸತ್ವಯುತ, ಅಭಿವೃದ್ಧಿ-ಪರ, ಜನ-ಪರ ಆಶ್ವಾಸನೆಗಳು ಇಲ್ಲದಿರುವುದು ಮಸಿಬಳೆದ ಕಿಡಿಗೇಡಿಗಳಿಗೆ ಅದೆಷ್ಟು ನಿರಾಸೆ ತಂದಿರಬೇಕು ಎಂದೆನಿಸಿತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಚುನಾವಣಾ ಕಣಕ್ಕೆ ಪ್ರವೇಶ: ಡಾ. ವಿನತೆ ಶರ್ಮ ಅಂಕಣ

ಈ ಬಾರಿ ಈ ಡಟ್ಟನ್ ಮಹಾಶಯ ವಲಸಿಗರ ಮನ ಓಲೈಸುವ ಪ್ರಯತ್ನಕ್ಕೆ ಇಳಿದಿದ್ದಾರೆ. ಪ್ರತಿದಿನವೂ ಆಸ್ಟ್ರೇಲಿಯನ್ ನಗರಗಳ ಹೊರವಲಯಗಳಲ್ಲಿ ವಾಸಿಸುತ್ತಿರುವ ವಲಸಿಗ ಸಮುದಾಯಗಳಿಗೆ ಭೇಟಿಕೊಟ್ಟು, ಭರವಸೆಗಳನ್ನು ಕೊಡುತ್ತಿದ್ದಾರೆ. ತಾವು ವಲಸಿಗರ ‘ಆಸ್ಟ್ರೇಲಿಯನ್ ಕನಸು’ ಎಂಬುದಕ್ಕೆ ಬೆಂಬಲ ಕೊಟ್ಟು, ವಲಸಿಗರ ಜೀವನವನ್ನು ಹಸನು ಮಾಡುವ ಮಾತನ್ನು ಆಡುತ್ತಿದ್ದಾರೆ. ವಲಸಿಗರೂ ಅಷ್ಟೇ, ಬಹಳ ಆಸಕ್ತಿಯಿಂದ ಚುನಾವಣಾ ವಿಷಯಗಳಲ್ಲಿ ಭಾಗವಹಿಸುತ್ತಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಹೊಸವರ್ಷ, ಹೊಸಜೀವನದ ಮಜಲುಗಳು: ವಿನತೆ ಶರ್ಮ ಅಂಕಣ

ನಾನೇನೋ ಒಂದಷ್ಟು ಹನಿ ಬಿತ್ತು ಅಂದೆ ಸರಿ. ಆದರೆ ಸಣ್ಣ ಮಳೆ ಬಿದ್ದದ್ದು ಬ್ರಿಸ್ಬೇನ್, ಸಿಡ್ನಿ, ಮೆಲ್ಬೋರ್ನ್ ನಗರಗಳಲ್ಲಿ. ಇದನ್ನು ಅಪಹಾಸ್ಯ ಮಾಡುವಂತೆ ಉತ್ತರ ಕ್ವೀನ್ಸ್‌ಲ್ಯಾಂಡ್‌ನಲ್ಲಿರುವ (ಬ್ರಿಸ್ಬೇನ್ ನಗರದಿಂದ ೧,೪೦೦ ಕಿಮೀ ದೂರ) Townsville ನಗರ ಮತ್ತು ಅದರ ಆಸುಪಾಸಿನಲ್ಲಿ ಭಾರಿ ಮಳೆ ಬಿದ್ದು, ಪ್ರವಾಹ ಸ್ಥಿತಿ ಉದ್ಭವಿಸಿ ಈಗ ಅದನ್ನು ಕ್ವೀನ್ಸ್‌ಲ್ಯಾಂಡ್ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ನಿಭಾಯಿಸುತ್ತಿವೆ. ಸಾವಿರಾರು ಜನರು ಪ್ರವಾಹಪೀಡಿತ ಸಂತ್ರಸ್ತರು ಎಂದು ನೋಂದಾಯಿಸಿಕೊಂಡಿದ್ದಾರೆ. ಅನೇಕ ಕಡೆ ರಸ್ತೆಗಳು ಮುಚ್ಚಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಯೋಣ: ಡಾ. ವಿನತೆ ಶರ್ಮಾ ಅಂಕಣ

ಹೋದ ವಾರ ಕ್ವೀನ್ಸ್‌ಲ್ಯಾಂಡ್ ರಾಜ್ಯದಲ್ಲಿ ಚುನಾವಣೆ ನಡೆದು ಆಗ ಆಡಳಿತ ನಡೆಸುತ್ತಿದ್ದ ಲೇಬರ್ ಪಕ್ಷ ಸೋತು, ಬಹುಮತ ಪಡೆದ ಲಿಬೆರಲ್ ಪಕ್ಷ ಅಧಿಕಾರಕ್ಕೆ ಬಂತು. ಹೊಸದಾಗಿ ತಮ್ಮ ಸರಕಾರವನ್ನು ರಚಿಸುತ್ತಾ, ಸಂಪುಟ ಸಚಿವರನ್ನು ಆಯ್ಕೆ ಮಾಡಿದ್ದ ಹೊಸ ಮುಖ್ಯಮಂತ್ರಿ ಡೇವಿಡ್ ಕ್ರಿಸ್ಟಫಲಿ ನಿನ್ನೆ ನಡೆದ ಸಮಾರಂಭದಲ್ಲಿ ಹಾಜರಿದ್ದರು. ಜೊತೆಗೆ ಒಂದಿಬ್ಬರು ಮಂತ್ರಿಗಳು, ಕೇಂದ್ರ ವಿರೋಧಪಕ್ಷದ ನಾಯಕರು, ನಗರಪಾಲಿಕೆ ಮೇಯರ್, ಎಂಪಿಗಳು ಎಂಬಂತೆ ರಾಜಕಾರಣಿಗಳ ದೊಡ್ಡ ತಂಡವೇ ಬಂದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನವರಾತ್ರಿಗೆ ಒಂದಿಷ್ಟು ಆಸ್ಟ್ರೇಲಿಯಾ ಕಥೆಗಳು: ಡಾ. ವಿನತೆ ಶರ್ಮಾ ಅಂಕಣ

ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರಿದ್ದು ಅವರು ಹಿಂದೂ ಧರ್ಮವನ್ನು ಆಚರಿಸುವುದಾಗಿ ಜನಗಣತಿಯಲ್ಲಿ ಹೇಳಿದ್ದರೆ, ಅವರ ಹಕ್ಕುಮಾನ್ಯತೆಯನ್ನು ಪರಿಗಣಿಸಿ ದೇವಸ್ಥಾನಕ್ಕೆ ಒಪ್ಪಿಗೆ ಕೊಡಬಹುದು. ಇದಾದ ಮೇಲೆ ದೇವಾಲಯ ಕಟ್ಟಡದ ನಿರ್ಮಾಣಕ್ಕೆ ಹಣ ಹೊಂದಿಸಬೇಕು. ದೇವಸ್ಥಾನ ಸ್ಥಾಪನೆಯ ಕನಸು ಕಂಡವರು ಹಗಲುರಾತ್ರಿ ಶ್ರಮವಹಿಸಿ ನಿಧಿಸಂಗ್ರಹಣೆ ಮಾಡಬೇಕು. ಕೆಲವರಿಗಂತೂ ಇದೇ ಅವರ ನಿತ್ಯಜೀವನವಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ