Advertisement

Tag: Australia

‘ಊಲುರು ಮಾತು’ ಎಂಬ ಹೊಸ ಭಾಷ್ಯ

ದೇಶೀಯ ಮಟ್ಟದಲ್ಲಿ ಆಡಳಿತ ನಡೆಸುವ ಪಾರ್ಲಿಮೆಂಟಿಗೆ ಅಬೊರಿಜಿನಲ್ ಜನರ ಸಮಿತಿಯನ್ನು ನೇಮಿಸಿ ಅವರ ದನಿಗೆ ಪುನಃಶ್ಚೇತನ ಕೊಡುವ ಭರವಸೆಯನ್ನು ಆಸ್ಟ್ರೇಲಿಯಾದ ಹೊಸ ಸರ್ಕಾರ ನೀಡಿದೆ.  ಅಷ್ಟೇ ಅಲ್ಲ, ದೇಶದ ಸಂವಿಧಾನದಲ್ಲಿ ಅವರ ದನಿಯನ್ನು ಸೇರ್ಪಡಿಸುವ ಮಾತನ್ನು ಕೊಟ್ಟಾಗಿದೆ. ಹೊಸ ಪ್ರಧಾನಮಂತ್ರಿಗಳ ಮಾತಿನಿಂದ ಅಬೊರಿಜಿನಲ್ ಜನಸಮುದಾಯಗಳ ನಾಯಕರಲ್ಲಿ, ಹಿರಿಯರಲ್ಲಿ ಸಂಚಲನೆ ಮೂಡಿದೆ. ಆಸ್ಟ್ರೇಲಿಯಾ ಪತ್ರದಲ್ಲಿ ಡಾ. ವಿನತೆ ಶರ್ಮಾ ಅವರು ಆಸ್ಟ್ರೇಲಿಯಾದ ವರ್ತಮಾನಗಳನ್ನು ಬರೆದಿದ್ದಾರೆ. 

Read More

ನಗರ-ಬೆಟ್ಟಗಳ ಕಿರು ಕತೆಗಳು

ಬೆಟ್ಟ ಹತ್ತೋದು ಎಂದರೆ ರಾಷ್ಟ್ರೀಯ ರಕ್ಷಿತ ವನಗಳಲ್ಲಿ ಅರಣ್ಯ ಇಲಾಖೆಯ ರೇಂಜರುಗಳು ಸೊಗಸಾದ ದಾರಿ ಮಾಡಿರುತ್ತಾರೆ. ಅದೇ ದಾರಿಯಲ್ಲೆ ನಾವು ನಡೆದು, ಬೆಟ್ಟದ ಮೇಲಿರುವ ವ್ಯೂ ಪಾಯಿಂಟ್ ತಲುಪಿ ಸುತ್ತಮುತ್ತಲಿನ ಪ್ರದೇಶಗಳನ್ನು ಪಕ್ಷಿನೋಟದಲ್ಲಿ ನೋಡುವುದು. ದಾರಿ ಬಿಟ್ಟು ಅಕ್ಕಪಕ್ಕ ಇರುವ ಕಾಡಿನಲ್ಲಿ ತಿರುಗಾಡುವಂತಿಲ್ಲ. ರಕ್ಷಿತ ವನ ಅಥವಾ ಕಾಡು ಎನ್ನುವ ಎಚ್ಚರಿಕೆಯನ್ನು ಪಾಲಿಸಿಯೇ ಮುಂದುವರೆಯಬೇಕು. ಇದರಿಂದ ಪರಿಸರಕ್ಕೆ ಒಳ್ಳೆಯದು. ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ನಾವೆಲ್ಲರೂ ಜೊತೆಯಾಗಿದ್ದೀವಿ ಎನ್ನುವ ಈ ಹೊತ್ತು

ಕಳೆದ ಭಾನುವಾರ ಬೆಳಗ್ಗೆ ವಾರದ ದಿನಸಿ ಕೊಳ್ಳಲು ಮನೆಯಿಂದ ಹೊರಟ ನಮ್ಮ ಸಂಸಾರ ಅರ್ಧಂಬರ್ಧ ಖಾಲಿಯಾಗಿದ್ದ ಸೂಪರ್ ಮಾರ್ಕೆಟ್ಟಿನಿಂದ ಹಿಂದಿರುಗುವಷ್ಟರಲ್ಲಿ ಅಂದರೆ ಸುಮಾರು ಒಂದೂವರೆ ಗಂಟೆಯಲ್ಲಿ ನಾವು ಹೊರಟಿದ್ದ ರಸ್ತೆಗಳಲ್ಲಿ ಪ್ರವಾಹದ ನೀರು ತುಂಬಿಕೊಂಡು ಮನೆ ಸೇರಿಕೊಳ್ಳಲು ನಾವು ಆ ಇಳಿ ಮಧ್ಯಾಹ್ನ ಕಷ್ಟಪಡಬೇಕಾಯಿತು. ಕೊನೆಗೆ ಗೂಡು ಸೇರಿದಾಗ ಜೀವದ ಮೇಲೆ ಗೌರವವುಂಟಾಗಿತ್ತು.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಅಬೊರಿಜಿನಲ್ ಗಳ ಭರವಸೆ, ಟೆನಿಸ್ ಮಿನುಗು ತಾರೆ ಆಶ್ ಬಾರ್ಟಿ

ಆಶ್ ಬಾರ್ಟಿ ಮೆಲ್ಬೋರ್ನ್ ನಗರದಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಪಂದ್ಯವನ್ನು ಗೆದ್ದಾಗ ಅಪ್ಪಅಮ್ಮಂದಿರು, ಆಪ್ತ ಗೆಳತಿಯರು ಅಲ್ಲದೆ ಇವೊನ್ ಗೂಲಗೊಂಗ್ ಕಾಲಿ ಕೂಡ ಹಾಜರಿದ್ದರು. ಜೊತೆಗೆ ಹೆಸರಾಂತ ಆಸ್ಟ್ರೇಲಿಯನ್ ಅಬೊರಿಜಿನಲ್ ಅಥ್ಲೀಟ್ ಕ್ಯಾಥಿ ಫ್ರೀಮನ್ ಪ್ರೇಕ್ಷಕ ವೃಂದದಲ್ಲಿ ಕೂತು ಪಂದ್ಯವನ್ನು ವೀಕ್ಷಿಸಿದ್ದರು. ತಾನು ಆಟವಾಡಿದ ಸ್ಥಳದಲ್ಲೇ ಇವರೆಲ್ಲರನ್ನು ಕಂಡು ಅವರೆಲ್ಲನ್ನು ಅಪ್ಪಿಕೊಂಡದ್ದೇ ಒಂದು ಮಹಾನ್ ಸಂತೋಷದ ಕ್ಷಣವೆಂದು ಆಶ್ ಹೇಳಿದಳು. ಅಬೊರಿಜಿನಲ್ ಮನೆಮನೆಗಳಲ್ಲಿ ಎದ್ದ ಹರ್ಷೋದ್ಗಾರ ಇನ್ನೂ ಕೇಳುತ್ತಿದೆ. ಡಾ. ವಿನತೆ ಶರ್ಮಾ ಬರೆದ ಆಸ್ಟ್ರೇಲಿಯ ಪತ್ರ

Read More

ಮತ್ತೊಂದು ಜನಪದವನ್ನು ಗೌರವಿಸುವ ವಿನಯಶೀಲತೆಗೆ ಕಾಯುತ್ತಾ..

ಒಂದು ಕರಕುಶಲ ಮಳಿಗೆಯಲ್ಲಿ ಇರಿಸಿದ್ದ ಗಣೇಶನ ವಿಗ್ರಹಕ್ಕೆ ‘ಬುದ್ಧ’ ಎಂದು ಲೇಬಲ್ ಇತ್ತು. ನಾನು ಮಾಲೀಕಳ ಬಳಿ ಹೋಗಿ ‘ನೋಡಿ, ಅದು ಗಣೇಶನ ಪ್ರತಿಮೆ, ದಯವಿಟ್ಟು ಆ ‘ಬುದ್ಧ’ ಲೇಬಲ್ ತೆಗೆದುಹಾಕಿ’ ಎಂದರೆ ಆಕೆ ಉಡಾಫೆಯಿಂದ ‘ನನ್ನ ಸ್ಟಾಫ್ ಒಬ್ಬಳು ಆ ಲೇಬಲ್ ಹಚ್ಚಿದ್ದು. ನಾಳೆ ಬಂದಾಗ ಅವಳಿಗೆ ಹೇಳುತ್ತೀನಿ’ ಎನ್ನುವುದೇ! ಅಂದರೆ ಬೇರೆ ಸಂಸ್ಕೃತಿ, ಧರ್ಮ, ನಂಬಿಕೆಗಳಿಗೆ ಅಲ್ಲಿ ಕಿಂಚಿತ್ತೂ ಬೆಲೆಯಿರಲಿಲ್ಲ. ಹತ್ತು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಧಾರಾಳವಾಗಿ ಕಾಣಿಸುತ್ತಿದ್ದ ಅಬೊರಿಜಿನಲ್ ಜನ ಈಗ ಯಾಕಿಲ್ಲ ಎನ್ನುವ ನನ್ನ ಪ್ರಶ್ನೆಗೆ ಸ್ವಲ್ಪಮಟ್ಟಿಗೆ ಉತ್ತರ ದೊರಕಿತ್ತು.
ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ