Advertisement

Tag: Autobiography

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

ನಾಲ್ಕಾಣೆಯಿಂದ ಒಂದು ಪ್ರಾಣ ಉಳಿಯಿತು!

ಆಕೆ ಅಗಸಿಯ ಕಡೆಗೆ ಹೋಗುತ್ತಿರುವುದರಿಂದ ಏನಾಗಿದೆ ಎಂದು ಕೇಳಿಯೆಬಿಟ್ಟೆ. ಅಡುಗೆಯಲ್ಲಿ ಉಪ್ಪಿಲ್ಲವೆಂದು ಗಂಡ ಹೊಡೆದಿರುವುದಾಗಿ ತಿಳಿಸಿದಳು. ‘ಆತ ಹಣ ಕೊಡದಿದ್ದರೆ ಉಪ್ಪು ಎಲ್ಲಿಂದ ತರಲಿ’ ಎಂದು ಕೇಳಿದಳು. ಈ ರೀತಿ ಬದುಕುವುದಕ್ಕಿಂತ ಸಾಯುವುದೇ ಮೇಲು ಎಂದು ಬಾವಿಗೆ ಹಾರುವುದಾಗಿ ಹೊರಟೇಬಿಟ್ಟಳು. ಮತ್ತೆ ತಡೆದೆ. ಬಿಗಿ ಮುಷ್ಟಿಯಲ್ಲಿದ್ದ ನಾಲ್ಕಾಣೆಯನ್ನು ತೋರಿಸುತ್ತ ‘ಇದನ್ನು ಕೊಟ್ಟರೆ ವಾಪಸ್ ಹೋಗುವೆಯಾ’ ಎಂದು ಕೇಳಿದೆ. ಆಕೆ ಕೃತಜ್ಞತೆಯಿಂದ ತೆಗೆದುಕೊಂಡು ಮನೆಯ ದಾರಿ ಹಿಡಿದಳು. ಆ ನಾಲ್ಕಾಣೆಯನ್ನು ಖರ್ಚು ಮಾಡಿದೆನೆಂದು ಭಾವಿಸಿ ತಾಯಿ ಬಡಿದದ್ದು ನೋವೆನಿಸಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 58ನೇ ಕಂತು ನಿಮ್ಮ ಓದಿಗೆ.

Read More

ಮೆಳ್ಳಿಗೇರಿ ಸರ್‌ ಸಲುವಾಗಿ ಶಾಲೆಯನ್ನೇ ಬದಲಾಯಿಸಿದ್ದೆ!

ವಿದ್ಯಾರ್ಥಿಗಳನ್ನು ನಾಲ್ಕು ಗುಂಪಾಗಿ ವಿಂಗಡಿಸಿ ಪ್ರತಿ ಗುಂಪಿಗೆ ಒಬ್ಬೊಬ್ಬ ಗಣಿತ ಪರಿಣತ ವಿದ್ಯಾರ್ಥಿಯನ್ನು ನಾಯಕನನ್ನಾಗಿ ಮಾಡಿದ್ದರು. ನನಗೆ ಒಂದು ಗುಂಪಿನ ಜಬಾಬ್ದಾರಿ ಕೊಟ್ಟಿದ್ದರು. ದೊಡ್ಡದಾಗಿರುವ ಮನೆಯ ಸಹಪಾಠಿಗಳ ಕೋಣೆಯೊಂದರಲ್ಲಿ ರಾತ್ರಿ ಕುಳಿತು ಗಣಿತ ಬಿಡಿಸುತ್ತಿದ್ದೆವು. ಅಲ್ಲೇ ಮಲಗಿ ಬೆಳಿಗ್ಗೆ ಮನೆಗೆ ಹೋಗುತ್ತಿದ್ದೆವು. ಹೀಗೆ ಸಹಪಾಠಿಗಳ ಮನೆಗೆ ಹೋಗಿ ಪಾಠ ಹೇಳುವುದನ್ನು ಮೊದಲಿನಿಂದಲೂ ಮಾಡುತ್ತಿದ್ದೆ. ಶ್ರೀಮಂತ ಹುಡುಗರ ತಾಯಂದಿರು ಬಡ ಹುಡುಗನ ತಾಯಿಯ ಮನೆಗೆ ಬಂದು “ಇವತ್ತು ನಿಮ್ಮ ಮಗನನ್ನು ನಮ್ಮ ಮನೆಗೆ ಕಳಿಸಿರಿ” ಎಂದು ಕೇಳುವುದು ನನಗೆ ಖುಷಿ ಕೊಡುತ್ತಿತ್ತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಲೆನಿನ್‌ಗ್ರಾಡ್‌ನಲ್ಲಿ ತಿರುಗಾಡಿದ ನೆನಪುಗಳು…

ಗಲೀನಾ ಹೇಳಿದ ಮೊದಲ ಪ್ರಸಂಗವೆಂದರೆ ತಾಯಿಯೊಬ್ಬಳು ತನ್ನ ಕೂಸನ್ನು ನೀರಲ್ಲಿ ಮುಳುಗಿಸಿದ ಹೃದಯವಿದ್ರಾವಕ ಘಟನೆ. ಹಿಟ್ಲರನ ಸೈನ್ಯ ಸೋವಿಯತ್ ದೇಶದ ಹಳ್ಳಿಯೊಂದನ್ನು ಸುತ್ತುವರಿದಿತ್ತು. ರಾತ್ರಿಯ ಗಾಢಾಂಧಕಾರ ಕಳೆದ ಕೂಡಲೆ ಆ ದಟ್ಟ ಅರಣ್ಯದ ಮಧ್ಯದಲ್ಲಿನ ಹಳ್ಳಿಯ ಮೇಲೆ ಬೆಳಗಿನ ಜಾವ ದಾಳಿ ಮಾಡುವ ಯೋಜನೆಯನ್ನು ಹಿಟ್ಲರನ ಸೈನ್ಯ ರೂಪಿಸಿತ್ತು. ಈ ಸುದ್ದಿ ಗೊತ್ತಾಗಿದ್ದರಿಂದ ಆ ಹಳ್ಳಿಗರು ರಾತ್ರಿಯೆ ಹಳ್ಳಿಯನ್ನು ಬಿಟ್ಟು ಬೇರೆಕಡೆ ಹೋಗಬೇಕಿತ್ತು. ರಂಜಾನ್‌ ದರ್ಗಾ ಬರೆಯುವ ಆತ್ಮಕತೆಯ ಸರಣಿ

Read More

ನಿಜಾರ್ಥದಲ್ಲಿ ಯಾರಿಗೂ ಗೆಲುವಿಲ್ಲ ಯುದ್ಧದಲ್ಲಿ…

ಮಾಸ್ಕೋ ಸಮೀಪದ ಬೊರೊದಿನೊ ಎಂಬ ಗ್ರಾಮದಲ್ಲಿ ನೆಪೊಲಿಯನ್ ಬೊನಾಪಾರ್ಟೆ ಸೈನ್ಯದ ವಿರುದ್ಧ ನಡೆದ ಯುದ್ಧದಿಂದ ಆ ಗ್ರಾಮ ಹೇಗೆ ನಾಶವಾಯಿತು ಎಂಬುದನ್ನು ರಷ್ಯನ್ ಪನೋರಮಾದಲ್ಲಿ ಅದ್ಭುತವಾಗಿ ಕಣ್ಣಿಗೆ ಕಟ್ಟುವಂತೆ ಸೃಷ್ಟಿಸಲಾಗಿದೆ. ದಾಳಿಗೊಳಗಾಗಿ ಸಾಯುತ್ತಿರುವ ಸೈನಿಕರು, ಬಿದ್ದು ಒದ್ದಾಡುತ್ತಿರುವ ಯುದ್ಧ ಕುದುರೆಗಳು, ಸುಡುತ್ತಿರುವ ಮನೆಗಳು, ಸುಟ್ಟು ಹೊಗೆಯಾಡುತ್ತಿರುವ ಪ್ರದೇಶಗಳು, ಹಾಹಾಕಾರದ ವಾತಾವರಣ ಹೀಗೆ ಎಲ್ಲವೂ ನಮ್ಮ ಮುಂದೆ ನಡೆಯುತ್ತಿರುವ ಹಾಗೆ ಅನಿಸುತ್ತದೆ. ನೆಪೊಲಿಯನ್ ಬೋನಾಪಾರ್ಟೆ ವಿನಾಶಕಾರಿ ಯುದ್ಧನೃತ್ಯ ಮಾಡುತ್ತಿರುವ ಹಾಗೆ ಅನಿಸುತ್ತದೆ. ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ