Advertisement

Tag: Autobiography

ಅವನಿಗೆ ಒಂದು ಹಿಡಿ ಮಣ್ಣನ್ನೂ ಕೊಡಲಿಲ್ಲ.

ಆ ಮನೆಯ ಅಂಗಳದಲ್ಲಿ ಎಷ್ಟೊಂದು ದೊರೆಯಂತೆ ಮೆರೆದಿದ್ದವನು… ಎಷ್ಟು ಬಡಿದಾಡಿ ರಕ್ತ ಹರಿಸಿದ್ದವನು. ಈಗ ಅದೇ ಅಂಗಳವ ಹಾದು ಹೋಗುವ ಹಾದಿ ಹೋಕರತ್ತ ಕ್ಷೀಣ ದನಿ ಹೊರಡಿಸಿ ಕೈ ಒಡ್ಡಿ ತಿನ್ನಲು ಏನಾದರೂ ಕೊಡಿ ಎಂದು ಬೇಡುತ್ತಿದ್ದ. ಕೊಡುವವರು ಕೊಡುತ್ತಿದ್ದರು. ಅವನ ಮೂರನೇ ಹೆಂಡತಿ ಮೈಸೂರು ಸೇರಿದ್ದವಳು ತನ್ನ ಮಗಳ ಸಮೇತ ನಾಪತ್ತೆ ಆದವಳು ಮತ್ತೆ ಎಲ್ಲೂ ಕಂಡಿರಲಿಲ್ಲ. ಶಾಂತಿ ಮಾತ್ರ ಬಚಾವಾಗಿ ಗಂಡನ ಮನೆಯಲ್ಲಿ ಅನುಕೂಲವಾಗಿ ಇದ್ದಳು.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 39ನೇ ಕಂತು

Read More

ತಾಷ್ಕೆಂಟ್‌ಗೆ ವಿದಾಯ

ಯುದ್ಧದ ಹಿಂಸೆ ಮತ್ತು ಅಸಹಾಯಕತೆಯನ್ನು ಸಹಿಸುತ್ತ, ಸಾವು ನೋವು ಅನುಭವಿಸುತ್ತ ಮುನ್ನಡೆಯುವ ಛಲ ಲೋಕದ ಜನಸಮುದಾಯಗಳಿಗೆ ಅದು ಹೇಗೆ ಬರುವುದೊ! ಬಹುಶಃ ಅನುಭವಿಸಿದಾಗಲೇ ಗೊತ್ತಾಗುವುದು. ಇದೇ ಉಜ್ಬೆಕಿಸ್ತಾನ ಮೂಲದ ಮೊಘಲ ಸಂತತಿಯ ಔರಂಗಜೇಬ್, ನನ್ನ ಜನ್ಮಸ್ಥಳ ವಿಜಯಪುರದ ಮೇಲೆ ದಂಡೆತ್ತಿ ಬಂದು ಆದಿಲಶಾಹಿ ಸಾಮ್ರಾಜ್ಯವನ್ನು ಹಾಳುಗೆಡವಿದ. ಅನೇಕ ಸೂಫಿಸಂತರ ಕೊಲೆ ಮಾಡಿದ. ಯುದ್ಧದಲ್ಲಿ ಯಾರು ಮುಸ್ಲಿಮರು? ಯಾರು ಹಿಂದುಗಳು? ಯಾರು ಕ್ರೈಸ್ತರು? ಯುದ್ಧದಲ್ಲಿ ಧರ್ಮವಿಲ್ಲ, ನೀತಿಯಿಲ್ಲ, ನ್ಯಾಯವಿಲ್ಲ. ಅದು ಕೇವಲ ಯುದ್ಧ. ಗೆದ್ದವರನ್ನೂ ಆರ್ಥಿಕವಾಗಿ ಮತ್ತು ನೈತಿಕವಾಗಿ ಸೋಲಿಸುವ ಯುದ್ಧ.
ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ 47ನೇ ಕಂತು ಇಲ್ಲಿದೆ.

Read More

ಚಿತೆಯ ಜೊತೆ ಚಿತೆಯಾಗಿದ್ದೆ

ಆ ಹೆಂಗಸು ನನ್ನತ್ತ ಎರಡು ಮೂರು ಬಾರಿ ನೋಡಿತು. ಅವಳ ಕಣ್ಣಲ್ಲಿದ್ದ ನೀರೆಲ್ಲ ತೀರಿ ಹೋಗಿದ್ದವೇನೊ! ಸ್ಮಶಾನದ ಮೂಲೆಯಲ್ಲಿ ಶವದತ್ತ ನೋಡುತ್ತಲೇ ಕೂತು ಕೂಸಿಗೆ ಎದೆ ಕಚ್ಚಿಸಿದ್ದಳು. ಆ ಕೂಸಿನ ಹೆಜ್ಜೆಗಳಿನ್ನೂ ಮೂಡಿಯೇ ಇಲ್ಲಾ… ಅವನು ನಡೆ ನಡತೆ ನುಡಿಗಳ ಮುಗಿಸಿದ್ದ. ಆ ಹೆಂಗಸಿನ ಹೆಜ್ಜೆಗಳು ಬಾಕಿ ಇದ್ದವು. ಸ್ಮಶಾನ ಬಿಟ್ಟು ಬೇಗ ಮನೆಗೆ ತೆರಳಲು ಮುಂದಾಗಿದ್ದರು. ಸ್ಮಶಾಸನದಲ್ಲಿ ಸಂಸಾರವೇ! ಆಕೆಯೂ ಆ ಜನರ ಜೊತೆ ಎದ್ದು ಹೊರಟಳು ಏನೂ ಆಗಿಯೇ ಇಲ್ಲ ಎಂಬಂತೆ.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 38ನೇ ಕಂತು

Read More

ಉಜ್ಬೆಕಿಸ್ತಾನದ ನೆನಪಿನಲ್ಲಿ ಇತಿಹಾಸದ ನೋಟಗಳು

ನಮ್ಮ ಗೈಡ್, ಇತಿಹಾಸ ತಜ್ಞೆ ಗುಲ್ಚೆಹರಾ ನಮ್ಮನ್ನು ಈ ಮದ್ರಸಾ ಮುಂದೆ ಇರುವ ಬೃಹತ್ತಾದ ಏಕಶಿಲಾ ಕುಂಡವನ್ನು ತೋರಿಸಿದಳು. ಅದು ಒಂದು ಟ್ಯಾಂಕರ್ ನೀರು ತುಂಬುವಷ್ಟು ಆಳ ಮತ್ತು ಅಗಲ ಹೊಂದಿದೆ. ೧೯೧೭ರಲ್ಲಿ ರಷ್ಯಾದಲ್ಲಿ ನಡೆದ ಅಕ್ಟೋಬರ್ ಮಹಾಕ್ರಾಂತಿ ನಡೆದ ಘಟನೆಯಲ್ಲಿ ಕಮ್ಯುನಿಸ್ಟ್ ಸರ್ಕಾರ ಬಂದದ್ದು ಗೊತ್ತಾದ ಕೂಡಲೆ ಸಮರಕಂದದ ಯುವತಿಯರು ತಮ್ಮ ಬುರ್ಖಾಗಳನ್ನು ತಂದು ಈ ಕುಂಡದಲ್ಲಿ ಹಾಕಿ ಸುಟ್ಟರು ಎಂದು ಗುಲ್ ಚೆಹರಾ ತಿಳಿಸಿದಳು. ಹಾಗೆ ಬುರ್ಖಾಗಳನ್ನು ಸುಟ್ಟವರಲ್ಲಿ ಆಗ ಯುವತಿಯಾಗಿದ್ದ ತನ್ನ ಅಜ್ಜಿಯೂ ಇದ್ದಳೆಂದು ಹೇಳಿದಳು. ನಮಗೆಲ್ಲ ಆಶ್ವರ್ಯವೆನಿಸಿತು.  ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗೆಲೆಲ್ಲʼ ಸರಣಿಯ ೪೬ನೇ ಕಂತು ಇಂದಿನ ಓದಿಗಾಗಿ

Read More

ನಡೆ ಎಲ್ಲೆಂದರಲ್ಲಿಗೆ ನಡೆ

ಹಳ್ಳಿಗೆ ಹೋಗಿ ಹೀಗಾಯಿತು ಎಂದು ಹೇಳಿದರೆ ನನ್ನ ಕನಸು ನನ್ನ ದುಃಖ ಅವರಿಗೆ ಅರ್ಥವಾಗುತ್ತಿರಲಿಲ್ಲ. ಯಾರಿಗೂ ಹೇಳಿಕೊಳ್ಳಲು ಆಗುತ್ತಿರಲಿಲ್ಲ. ಹೇಳಿಕೊಂಡರೆ ನಗುತ್ತಿದ್ದರು. ಜುಜುಬಿ ಫೋಕ್‌ಲೋರ್ ಓದ್ಬುಟ್ಟು ಇಷ್ಟೆಲ್ಲಾ ಬಿಲ್ಡಪ್ ಕೊಡ್ತಿಯಲ್ಲಾ. ನಿನ್ನ ರೇಂಜ್ ಏನಿದೆಯೊ ಅದ್ನೇ ಮೆಯಿಂಟೇನ್ ಮಾಡು ಎಂದಿದ್ದರು ಗೆಳೆಯರು. ನಿಜವಿತ್ತು. ನಾನೇನು ಮಹಾ ತಿಳಿದವನಾಗಿರಲಿಲ್ಲ. ಅವೆಲ್ಲ ಈ ವ್ಯವಸ್ಥೆಯ ಬಲೆಯಿಂದ ತಪ್ಪಿಸಿಕೊಂಡು ಕಣ್ಮರೆಯಾಗಿ ಎಲ್ಲೊ ಹೋಗಿ ಅನಾಥನೇ ಆಗಿ ಬದುಕಲು ಹೂಡುತ್ತಿದ್ದ ವಿಕಟ ವಿನೋದ ದುರಂತ ನಾಟಕ. ಕೆ.ಆರ್.ಮಾರ್ಕೆಟಲ್ಲಿ ಹೋಗಿ ಮೂಟೆ ಹೊತ್ತು ಸಂಸಾರ ನಡೆಸಲು ಇಲ್ಲಿ ತನಕ ಹೋರಾಡಿ ಬರಬೇಕಿತ್ತೇ…
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 36ನೇ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ