Advertisement

Tag: Autobiography

ಬೆದೆಗೆ ಬಂದವಳ ಮೆದುವಾಗಿ ತಳ್ಳಿಬಿಟ್ಟಿದ್ದೆ

ಅವಳು ಬಿಗಿಯಾಗಿ ನನ್ನ ಕೈ ಹಿಡಿದೇ ಇದ್ದಳು. ವಿದಾಯದ ಗಳಿಗೆಯಲ್ಲಿ ಅಮರ ಪ್ರೇಮದ ಮೋಹವೇ…’ನಾಳೆ ಸಿಗುವೆ’ ಎಂದಿದ್ದೆ. ‘ನಿಜವಾಗ್ಲೂ… ನನ್ನ ತಲೆ ಮೇಲೆ ಕೈ ಇಟ್ಟು ಆಣೆ ಮಾಡಿ ಇನ್ನೊಂದ್ಸಲ ಹೇಳಿ’ ಎಂದು ಪ್ರತಿ ಉತ್ತರಕ್ಕೆ ಕಾದಳು. ಕೈ ಹಿಡಿದು ತಲೆ ಮೇಲೆ ಇಟ್ಟುಕೊಂಡಳು. ‘ನಾಳೆ ಅನ್ನೋದು ಕೂಡ ಒಂದು ಸುಳ್ಳು, ಅಂದಾಜು; ಕೇವಲ ನಿರೀಕ್ಷೆ…ಊಹೆ’ ಎಂದೆ.  ‘ಅಷ್ಟೆಲ್ಲ ಬೇಡ. ಸಿಕ್ತೀನಿ; ಸಿಗಲ್ಲಾ ಅನ್ನೊದ್ರಲ್ಲಿ ಯಾವ್ದಾದ್ರು ಒಂದನ್ನ ಹೇಳಿ ಏನೂ ಬೇಜಾರು ಮಾಡ್ಕೋದಿಲ್ಲ’ ಎಂದಳು. ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯಲ್ಲಿ ಮೊಗಳ್ಳಿ ಗಣೇಶ್ ಬರಹ

Read More

ನರಕದಲ್ಲಿ ಕ್ಷಣ ಬೆರಳದ್ದಿ ಬಂದಿದ್ದೆ

ನನ್ನ ಇತಿ ಮಿತಿಯಲ್ಲಿ ಅವುಗಳಲ್ಲಿ ಬೇಕಾದವನ್ನು ಆಯ್ದುಕೊಂಡೆ. ಬರೆವ ಬಣ್ಣಗಳು ಆಗಲೇ ಹೈಸ್ಕೂಲು, ಪಿಯು ಕಾಲೇಜಿನಲ್ಲೆ ಅಂಟಿಕೊಂಡಿದ್ದವು ಎಂದು ಹೇಳಿದ್ದೆ. ಲೈಬ್ರರಿಯ ತರಾವರಿ ಗ್ರಂಥಗಳ ಬೆಟ್ಟ ಕಂಡ ಕೂಡಲೆ ಬರೆಯುವುದನ್ನೆ ಮರೆತುಬಿಟ್ಟಿದ್ದೆ. ಹಾದಿ ಬೀದಿಯಲ್ಲಿ ಅಲೆವಾಗ ಎಷ್ಟೊಂದು ಚೆಲುವೆಯರ ಕಂಡೆ; ನಗರದ ಮೂಲೆ ಮೂಲೆಯ ನರಕವ ಕಂಡೆ…
ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿ

Read More

ಒಳ್ಳೆಯತನವೇ ಆಸ್ತಿಯಾಗಿದ್ದ ಕಾಲವದು

ಜನರು ಸ್ವಾಭಿಮಾನಿಗಳಾಗಿದ್ದರೆ ಹೊರತು ದುರಭಿಮಾನಿಗಳಾಗಿದ್ದಿಲ್ಲ. ಬೇರೆಯವರ ಘನತೆಯನ್ನು ಹಣ, ಅಂತಸ್ತು ಮತ್ತು ಹುದ್ದೆಗಳಿಂದ ಅಳೆಯುತ್ತಿರಲಿಲ್ಲ. ಮಾನವರಿಗೆ ಒಳ್ಳೆಯತನವೇ ಆಸ್ತಿಯಾಗಿತ್ತು. ಈ ಆಸ್ತಿ ಕಳೆದುಕೊಂಡರೆ ಸತ್ತುಹೋದಂತೆಯೆ ಎಂಬ ಭಾವ ಅವರಿಗಿತ್ತು. ಎಲ್ಲ ಸಮಾಜದವರನ್ನು ಗೌರವಿಸುತ್ತ ಸಾಧ್ಯವಾದ ಕಡೆಗಳಲ್ಲೆಲ್ಲ ಅವರ ಆಚರಣೆಗಳಲ್ಲಿ ಭಾಗವಹಿಸುತ್ತ ಎಲ್ಲರೊಳಗೊಂದಾಗಿ ಬದುಕುತ್ತಿದ್ದರು. ರಂಜಾನ್ ದರ್ಗಾ ಬರೆಯುವ  ಆತ್ಮಕತೆ  ‘ನೆನಪಾದಾಗಲೆಲ್ಲ’ ಸರಣಿಯ 26ನೆಯ ಕಂತು 

Read More

ನನ್ನ ನಿರುಮ್ಮಳ ಇರುಳು ನನ್ನದು…

ಅಲ್ಲೊಂದು ಸಹಜ ಜಲ ಬಾವಿ ಇತ್ತು ಅನಾದಿಯಿಂದಲೂ. ಅದರ ಪವಿತ್ರ ಜಲದಿಂದಲೇ ಆ ಕಾಲದ ವೈದಿಕರು ಧರ್ಮ ಕಾರ್ಯ ಎಸಗುತ್ತಿದ್ದುದು… ಅದಕೆಂದೇ ಆ ಗೊಂಡಾರಣ್ಯ ಪ್ರಸಿದ್ಧವಾಗಿತ್ತು ಆ ಕಾಲಕ್ಕೆ. ಈಗದು ಒಂದು ಹೊಂಡವಾಗಿತ್ತು. ಬೇಸಿಗೆಯಲ್ಲಿ ದಾಹಕ್ಕಿಳಿದ ಪ್ರಾಣಿಗಳು ಆ ಸನಾತನ ಜಾರಿನ ಹೂಳಿನಲ್ಲಿ ಸಿಲುಕಿ ಎದ್ದು ಬರಲಾರದೆ ಅಲ್ಲೇ ಸಮಾಧಿ ಆಗಿದ್ದವು. ಬಾಯಾರಿ ಅಲ್ಲಿ ಸಿಲುಕಿದವರ ಪಾಡನ್ನು ಅರ್ಥಮಾಡಿಕೊಳ್ಳಿ! ಧರ್ಮ ಸೂಕ್ಷ್ಮವನ್ನು ನಾಳೆ ಅರ್ಥ ಮಾಡಿಕೊಳ್ಳಿ ಮಕ್ಕಳೇ; ಈಗಲೇ ಹೇಳಬಾರದು!

Read More

ಹಿಂಸೆಯನ್ನು ಹತೋಟಿಯಲ್ಲಿಡಲು ಮಾನವೀಯತೆಯೇ ಬೇಕು

ಹುಲಿಗೆ ಆಕ್ರಮಣದ ನಖಗಳಿವೆ. ಆದರೆ ಹುಲ್ಲೆಗೆ ಸಂರಕ್ಷಣೆಯ ಕೊಂಬು ಮತ್ತು ವೇಗಶಕ್ತಿ ಇವೆ. ಇದೆಲ್ಲ ಇರುವಂಥದ್ದೆ. ಏಕೆಂದರೆ ಪ್ರಕೃತಿಯಲ್ಲಿನ ಹುಲಿ ಹುಲ್ಲೆಗಳು ಜೀವಜಾಲದಲ್ಲಿನ ಆಹಾರ ಸರಪಳಿಯ ನಿಯಮದಂತೆಯೆ ಬದುಕುತ್ತಿವೆ. ಆದರೆ ಆಂತರ್ಯದಲ್ಲಿ ಹುಲಿ, ಹುಲ್ಲೆಗಳಂತಿರುವ ಮಾನವರೂ ಇದ್ದಾರೆ. ಅವರಿಗೆ ಈ ಪ್ರಕೃತಿಯ ನಿಯಮ ಅನ್ವಯಿಸುವುದಿಲ್ಲ. ಆದ್ದರಿಂದ ಅವರು ಬದಲಾಗುಂಥ ವ್ಯವಸ್ಥೆ ರೂಪುಗೊಳ್ಳಬೇಕಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ