Advertisement

Tag: Bangalore

ಟು ಡು ಲಿಸ್ಟ್‌ ಹಾಗೂ ರದ್ದಿ ಹಾಳೆಯ ಕತೆಗಳು….: ಎಚ್‌. ಗೋಪಾಲಕೃಷ್ಣ ಸರಣಿ

ನನ್ನ ಅನುಭವಗಳನ್ನು ಕೊಂಚ, ಕೊಂಚ ಏನೂ ತುಂಬಾ ಹೆಚ್ಚಾಗಿಯೇ ಉತ್ಪ್ರೇಕ್ಷಿಸಿ ಬುರುಡೆ ಅಂದರೆ ಸಖತ್ ಬುರುಡೆ ಬಿಡುತ್ತಿದ್ದೆ. ಈ ಬುರುಡೆಯಲ್ಲಿ ಬಹಳ ಮುಖ್ಯವಾಗಿ ಬ್ಯಾಂಕ್ ಡೈರೆಕ್ಟರ್ ಜತೆ ಇಂಟರ್ವ್ಯೂ ಮಾಡಿಸಿಕೊಂಡು ಸಾಲವನ್ನು ಮೂವತ್ತು ಸಾವಿರದಿಂದ ಮೂವತ್ತ ಮೂರು ಸಾವಿರ ಹೆಚ್ಚಿಸಿದ್ದು, ಬೇವಿನ ಮರದ ಹಳೇ ಬಾಗಿಲು ಕೊಂಡು ಟೋಪಿ ಬಿದ್ದದ್ದು, ಕುಬೇರಪ್ಪ ಹಳದಿ ಇಂಗಿನ ಬ್ಯಾಗ್‌ನಲ್ಲಿ ಕೇಜಿ ಅಷ್ಟು ಚಿನ್ನ ತುಂಬಿಕೊಂಡು ಯಶವಂತ ಪುರಕ್ಕೆ ನಡೆದುಕೊಂಡು ಹೋಗಿ ಚಿನ್ನ ಮಾರಿದ್ದೂ, ನನ್ನ ಹತ್ತಿರ ಊಹೂಂ ನನ್ನ ಹತ್ತಿರ ಅಲ್ಲ, ನನ್ನಾಕೆ ಹತ್ತಿರ ಮುಕ್ಕಾಲು ಗ್ರಾಮ್‌ನ ತಾಳಿ ಇರೋದು…. ಇವೆಲ್ಲಾ ಸೇರಿರುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಮಲ್ಲಯ್ಯನ ಮರಳು ತಕರಾರು: ಎಚ್.ಗೋಪಾಲಕೃಷ್ಣ ಸರಣಿ

ಒಂದು ಕಾಲದಲ್ಲಿ ತಮ್ಮ ಜೀವನ ನಿರ್ವಹಣೆಗೆ ಇಲ್ಲಿನ ಕ್ವಾರಿಗಳನ್ನು ನಂಬಿದ್ದ ಹಲವಾರು ಕುಟುಂಬಗಳು ಈಗ ಬೇರೆ ಬೇರೆ ವೃತ್ತಿ ಹಿಡಿದಿದ್ದಾರೆ. ಅದರ ಜತೆಗೆ ದೇವನಹಳ್ಳಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಆದ ನಂತರ ಅಲ್ಲಿಗೆ ಹಲವು ಸಂಪರ್ಕ ರಸ್ತೆಗಳ ನಿರ್ಮಾಣ ಶುರು ಆಯಿತು. ಬೆಟ್ಟಹಳ್ಳಿ ಮೂಲಕ ಒಂದು ರಸ್ತೆ ಅಗಲ ಮಾಡುವ ಯೋಜನೆ ಹಮ್ಮಿಕೊಳ್ಳಲಾಯಿತು. BEL ವೃತ್ತದಿಂದ ಈ ರಸ್ತೆ ಬೆಟ್ಟಹಳ್ಳಿ ಹಾದು ಯಲಹಂಕದ ಬಳಿ ದೇವನಹಳ್ಳಿ ರಸ್ತೆ ಸೇರುವಂತೆ ಯೋಜನೆ ರೂಪಿಸಿದ್ದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೈದನೆಯ ಕಂತು

Read More

ಎಲ್ಲವೂ…. ಮರಳು ಮರಳೂ…: ಎಚ್. ಗೋಪಾಲಕೃಷ್ಣ ಸರಣಿ

ಮನೆಗೆ ಬರಬೇಕಾದರೆ ಮತ್ತೊಂದು ಯೋಚನೆ ತಲೆ ಕೆಡಿಸಿತು. ಸೈಟ್ ಮಧ್ಯ ಮಾರ್ಕ್ ಮಾಡ್ತಾ ಇದಾನೆ. ಮಧ್ಯದಿಂದ ಯಾರಾದರೂ ಮಾರ್ಕ್ ಮಾಡ್ತಾರಾ? ನಾನು ದಾಖಲು ಮಾಡ್ತಿರೋ ಈ ಪ್ರಸಂಗ ನಾಲ್ಕೂ ಕಾಲು ದಶಕದ ಹಿಂದೆ. ಅಂದರೆ ಆಗಿನ್ನೂ ಮೊಬೈಲ್ ಫೋನು, ಲ್ಯಾಂಡ್ ಲೈನ್ ಫೋನು ಇವೆಲ್ಲಾ ಇರದಿದ್ದ ಕಾಲ. ಏನಾದರೂ ಸಮಸ್ಯೆ, ಅದಕ್ಕೆ ಪರಿಹಾರ ಬೇಕು ಅಂದರೆ ಒಂದು ಮುಖಾಮುಖಿ ಮಾತು, ಇಲ್ಲ ಅಂದರೆ ಪೋಸ್ಟ್ ಮೂಲಕ ಕಾರ್ಡು ಅಥವಾ ಇನ್ ಲ್ಯಾಂಡ್ ಲೆಟರ್, ಇಲ್ಲಾ ಕಾಗದದಲ್ಲಿ ಬರೆದು ಅದನ್ನ ಕವರ್‌ನಲ್ಲಿ ಇಟ್ಟು ಪೋಸ್ಟ್ ಡಬ್ಬಕ್ಕೆ ಹಾಕಿ ಉತ್ತರಕ್ಕೆ ಕಾಯೋದು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ನಾಲ್ಕನೆಯ ಕಂತು

Read More

ಬೇಡದ್ದಲ್ಲೇ ಸೈಟು ಖರೀದಿಸಿದ್ದು: ಎಚ್. ಗೋಪಾಲಕೃಷ್ಣ ಸರಣಿ

ತೆಪ್ಪಗೆ ಜೇಬಿಂದ ಎರಡು ಹತ್ತರ ನೋಟು ಬಿಡಿಸಿ ಕೊಟ್ಟೆ. ಇನ್ನೂ ಬೇಕು.. ಅಂದ. ಮೂರು ನೋಟು ಅವನ ಕೈ ಸೇರಿದ ಮೇಲೆ ಅದನ್ನು ಅವನ ಜೇಬಿಗೆ ತುರುಕಿಕೊಂಡ. ನಂತರ ನನ್ನ ಬೆರಳು ಬಾಂಡ್ ಪೇಪರಿನ ಮೇಲೆ ಬಲವಾಗಿ ಊರಿ ಅವನ ಭಾರ ಎಲ್ಲಾ ಬಿಟ್ಟು ಹೊರಳಿಸಿದ. ಅವನು ಎಷ್ಟು ಕೋಪ ರೋಷದಿಂದ ಬೆರಳನ್ನು ಹೊರಳಿಸಿದ್ದ ಅಂದರೆ ಒಂದು ಕಾಲ ಮೇಲೆ ನಿಂತು ಇಡೀ ಅವನ ತೂಕವನ್ನು ನನ್ನ ಬೆರಳಿಗೆ ಹೊರೆಸಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ನಾನಾ… ಸನ್ಯಾಸಿನಾ…!: ಎಚ್. ಗೋಪಾಲಕೃಷ್ಣ ಸರಣಿ

ಖಾದಿ ಬೋರ್ಡ್‌ಗೆ ಹೋಗೋದು, ಅಲ್ಲಿಂದ ಈ ಕೇಸರಿ ಅಥವಾ ಕಾವಿ ದಟ್ಟಿ ತರೋದು ಅದನ್ನು ಮೂರೂ ಹೊತ್ತು ಸುತ್ತಿಕೊಂಡು ಓಡಾಡೋದು. ಇದು ನಮ್ಮ ಅಮ್ಮನಿಗೆ ಇಷ್ಟ ಇಲ್ಲ. ಕಾರಣ ಇವನು ರಾಮಕೃಷ್ಣ ಆಶ್ರಮಕ್ಕೆ ಹೋಗಿದ್ದ, ಅಲ್ಲಿ ಪ್ರಭಾವ ಇವನೂ ಸನ್ಯಾಸಿ ಆಗಿಬಿಡ್ತಾನೆ ಎನ್ನುವ ಭಯ. ಇದನ್ನು ಅಮ್ಮ ನನ್ನ ಮದುವೆ ಆದ ಎಷ್ಟೋ ವರ್ಷದ ನಂತರ ತನ್ನ ಸೊಸೆಗೆ ಅಂದರೆ ನನ್ನ ಹೆಂಡತಿಗೆ ಹೇಳಬೇಕಾದರೆ ನನ್ನ ಕಿವಿಗೆ ಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ