Advertisement

Tag: Basavanagowda Hebbalagere

ಅಲಾರಾಂ ಹಾಗೂ ಓದುವ ವೇಳೆಯ ಕುರಿತು ಒಂದಷ್ಟು ಮಾತು… ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮಜ್ಜನ ಮನೆಯಲ್ಲಿ ಇದ್ದಾಗ, ನಮ್ಮಜ್ಜ ನನ್ನನ್ನು ಬೆಳಗ್ಗೆ ಏಳಿಸುವ ಅಲಾರಾಂನಂತೆ ಕೆಲಸ ಮಾಡುತ್ತಿದ್ದರು. ಆದರೆ ಯಾವಾಗ ಹಾಸ್ಟೆಲ್ ಸೇರಿದೆನೋ ಅಲ್ಲಿ ಹಾಸ್ಟೆಲ್ ವಾರ್ಡನ್ ಪೀಪಿಯನ್ನು ಊದಿ ಏಳಿಸುತ್ತಿದ್ದರು. ಆಗ ನಮ್ಮ ಮಲ್ಲಾಡಿಹಳ್ಳಿಯ ಹಾಸ್ಟೆಲ್ಲಿನಲ್ಲಿ ತುಂಬಾ ಶಿಸ್ತು ಇತ್ತು. ನಾವು ಕಡ್ಡಾಯವಾಗಿ ಬೆಳಗ್ಗೆ 5 ಕ್ಕೆ ಏಳಲೇಬೇಕಾಗಿತ್ತು. ಏಳದಿದ್ದರೆ ಕೋಲು ಹಿಡಿದುಕೊಂಡು ಬರುತ್ತಿದ್ದರು. ಒಂದೊಮ್ಮೆ ಮಲಗಿರುವುದನ್ನು ಕಂಡರೆ ಕುಂಡೆಯ ಮೇಲೆ ಬಾರಿಸುತ್ತಾ ಹೋಗುತ್ತಿದ್ದರು, ಬೆಳಗ್ಗೆ ಎದ್ದು ಕೆಲವರು ಓದುತ್ತಾ ಕುಳಿತರೆ ಕೆಲವರು ಬ್ರಷ್ ಮಾಡಲು ಹೋಗುತ್ತಿದ್ದರು. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಬರೀ ನಾಲ್ಕು ಗೋಡೆಯ ಮಧ್ಯೆ ಕಲಿಯುವುದೇ ಶಿಕ್ಷಣವಲ್ಲ…!!: ಬಸವನಗೌಡ ಹೆಬ್ಬಳಗೆರೆ ಸರಣಿ

ಒಮ್ಮೆ ಪಟ್ಟಣದ ಮಕ್ಕಳಿಗೆ ಭತ್ತ, ಕುಂಬಳಕಾಯಿ ಇಟ್ಟು ಭತ್ತ ಬೆಳೆಯುವ ಗಿಡ ತೋರಿಸಿ ಕುಂಬಳಕಾಯಿ ಬೆಳೆಯುವ ಗಿಡ ಹೇಗಿರಬಹುದು ಎಂದು ಕೇಳಿದರಂತೆ. ಆಗ ಅವರು ಚಿಕ್ಕ ಭತ್ತವನ್ನು ಬೆಳೆಯುವ ಗಿಡವೇ ಈ ರೀತಿ ಇರಬೇಕಾದರೆ ಇಷ್ಟು ದಪ್ಪನೆಯ ಕುಂಬಳಕಾಯಿಯ ಬೆಳೆಯುವ ಗಿಡದ ಕಾಂಡ ಇನ್ನೂ ದಪ್ಪದಾಗಿರಬೇಕು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಬೋಧಿಸುವಾಗ ಮಕ್ಕಳನ್ನು ನಿಭಾಯಿಸಿದ ರೀತಿ..: ಬಸವನಗೌಡ ಹೆಬ್ಬಳಗೆರೆ ಸರಣಿ

ಒಬ್ಬ ಹುಡುಗ ಮಾತ್ರ ‘ಡ್ಯಾನ್ಸಿಂಗ್’ ಪದ ಹೇಳಿದಾಗ ಜಾಸ್ತಿಯೇ ಕುಣಿಯುತ್ತಾ ಬಂದು ನನ್ನ ಹತ್ತಿರವೇ ಬಂದುಬಿಟ್ಟ. ನನಗೆ ತಕ್ಷಣಕ್ಕೆ ಸಿಟ್ಟು ಬಂದು ಒಂದು ಏಟನ್ನು ಕೊಟ್ಟುಬಿಟ್ಟೆ. ಅವನು ಜೋರಾಗಿ ಅಳಲು ಶುರು ಮಾಡಿದ. ಹಿಂದೆ ಪಾಠ ನೋಡಲು ಕುಳಿತ ಲೆಕ್ಚರ್ ನನಗೆ ಬಯ್ಯುತ್ತಾರೆಂದು ನಾನು ತಕ್ಷಣ ಅಳುತ್ತಿದ್ದ ಹುಡುಗನ ಬಳಿ ಹೋಗಿ ಮತ್ತೆ ಟಚ್ ಮಾಡಿದಂತೆ ಮಾಡಿ ‘ಬೀಟಿಂಗ್’ ಎಂದು ಹೇಳಿದೆ. ಹುಡುಗರೂ ‘ಬೀಟಿಂಗ್…… ಬೀಟಿಂಗ್’ ಎಂದರು. ಅವನು ಅಳುವುದನ್ನು ತೋರಿಸಿ ‘ಕ್ರೈಯಿಂಗ್.. ಕ್ರೈಯಿಂಗ್’ ಎಂದು ಹೇಳಿದೆನು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಸಹಪಾಠಿಗಳ ಸಾಧನೆ ಹಾಗೂ ಕೊಂಡಜ್ಜಿ ಕ್ಯಾಂಪ್: ಬಸವನಗೌಡ ಹೆಬ್ಬಳಗೆರೆ ಸರಣಿ

ಈ ಕ್ಯಾಂಪಿನಿಂದ ಬಂದು ವಾಪಸ್ಸು ಹೋದಾಗಲೇ ನನಗೆ ತಿಳಿದದ್ದು ಈ ಸಮಯದಲ್ಲಿ ಹಲವಾರು ಪಾಠಗಳನ್ನು ನಮ್ಮ ಮೇಷ್ಟ್ರು ಮುಗಿಸಿದ್ದಾರೆ ಎಂಬುದು. 8 ರಲ್ಲಿ ಮೂರನೇ ರ್ಯಾಂಕು, 9 ರಲ್ಲಿ ಎರಡನೇ ರ್ಯಾಂಕು ಬಂದಿದ್ದವನು 10 ನೇ ತರಗತಿಯಲ್ಲಿ ಮೊದಲ ರ್ಯಾಂಕನ್ನು ಗಳಿಸುತ್ತಾನೆ ಎಂಬ ಹಲವರ ನಿರೀಕ್ಷೆ ಸುಳ್ಳಾಗಲು ಇದೂ ಒಂದು ಕಾರಣವಾಗಿತ್ತು. ಎಷ್ಟೇ ಪ್ರಯತ್ನ ಪಟ್ಟರೂ ಪಾಠದ ವಿಷಯದಲ್ಲಿ ನನಗೆ ರೀಟೇಕ್ ಆಗಲು ಸಾಧ್ಯವಾಗಲೇ ಇಲ್ಲ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಖರ್ಚಿಲ್ಲದ ಆಟಿಕೆಗಳು, ಸರ್ಕಸ್ ಕಂಪೆನಿ… ಆ ನೆನಪುಗಳು..: ಬಸವನಗೌಡ ಹೆಬ್ಬಳಗೆರೆ ಸರಣಿ

ಏಳನೇ ತರಗತಿಗೆ ಹೋಗುವ ವೇಳೆಗೆ ನಾನು ಓದುವುದರಲ್ಲಿ ತರಗತಿಗೇ ಮೊದಲಿಗನಾಗಿದ್ದೆ. ಅದರಲ್ಲೂ 7 ನೇ ತರಗತಿಯಲ್ಲಿ ಬುಡೇನ್ ಸಾಬ್ ಮೇಷ್ಟ್ರು ಗಣಿತ ತೆಗೆದುಕೊಂಡ ಮೇಲೆ ನನಗೆ ಗಣಿತ ತುಂಬಾ ಇಷ್ಟದ ವಿಷಯವಾಯಿತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ