Advertisement

Tag: book

‘ಗೌರ್ಮೆಂಟ್ ಬ್ರಾಹ್ಮಣ’ನೆಂಬ ಪುಸ್ತಕವೂ ಮತ್ತು ನಾನು ರೂಪುಗೊಂಡ ಬಗೆಯೂ’: ಪ್ರಶಾಂತ್‌ ಬೆಳತೂರು ಬರಹ

ಚೇಳಿನಿಂದಲೇ ಹುಟ್ಟಿದ ಚೇಳಿನಿಂದಲೇ ಸತ್ತ ಎನ್ನುವ ತನ್ನಜ್ಜಿಯ ಮಾತುಗಳೊಂದಿಗೆ ತನ್ನ ತಂದೆಯನ್ನು ನೆನಪಿಸಿಕೊಳ್ಳುವ, ಪಂದ್ರಾ ಆಗಸ್ಟ್‌ನ ಸ್ವಾತಂತ್ರ್ಯ ನಿಜಕ್ಕೂ ಎಂತಹ ಸ್ವಾತಂತ್ರ್ಯ? ಯಾವ ಬಗೆಯ ಸ್ವಾತಂತ್ರ್ಯ? ಒಂದೇ ಒಂದು ಕೊಡದ ನೀರನ್ನು ಬಾವಿಯಲ್ಲಿ ಮೊಗೆಯಲಾರದೆ ಹೋದ ಕೆಳಗೇರಿಯ ಜನ ಅಂದು ಮೊಗೆಮೊಗೆದು ಸೇದಿದರು, ಮತ್ತೆ ಬಾವಿಗೆ ಸುರವಿದರು, ಮರುದಿನ ಆ ಬಾವಿಗಳಲ್ಲಿ ಇನ್ನಾರು ನೀರು ಮೊಗೆಯಬಾರದಂತೆ ಊರ ಜನರೇ ಶಾಶ್ವತವಾಗಿ ಮುಚ್ಚಿದ್ದರು ಎನ್ನುವಾಗ ಕರುಳು ಹಿಂಡಿದಂತಾಗುತ್ತದೆ.
ಪ್ರೊ. ಅರವಿಂದ ಮಾಲಗತ್ತಿ ಆತ್ಮಕತೆ “ಗೌರ್ಮೆಂಟ್ ಬ್ರಾಹ್ಮಣ”, ಹೇಗೆ ತಮ್ಮ ಬದುಕು ಬದಲಾಯಿಸಿತು ಎನ್ನುವುದರ ಕುರಿತು ಪ್ರಶಾಂತ್‌ ಬೆಳತೂರು ಬರಹ ಇಲ್ಲಿದೆ

Read More

ಬಾವಿಯೊಳಗೆ `ಪುಣ್ಯಕೋಟಿ’: ನಟರಾಜ್‌ ಅರಳಸುರಳಿ ಕೃತಿಯ ಬರಹ

ತಂಡೋಪತಂಡವಾಗಿ ಜನ ನಮ್ಮ ಮನೆಕಡೆ ಬರುತ್ತಿರುವುದು ಕಾಣಿಸಿತು. ಹಲವಾರು ಬ್ಯಾಟರಿ ಬೆಳಕುಗಳೂ ಒಂದೆರಡು ಪೆಟ್ರೋಮ್ಯಾಕ್ಸ್‌ಗಳೂ ಆ ಗುಂಪಿನಲ್ಲಿದ್ದವು. ಎಲ್ಲರೂ ಮನೆಯಂಗಳಕ್ಕೆ ಬಂದವರೇ ನೇರವಾಗಿ ಬಾವಿಯಕಡೆ ನಡೆದರು. ನೋಡನೋಡುತ್ತಿದ್ದಂತೆ ಮೂರ್ನಾಲ್ಕು ಜನ ಬಾವಿ ಇಳಿದರು. ಕೆಲವರು ಮೇಲಿನಿಂದ ನೇಣು ಇಳಿಬಿಟ್ಟರು. ದನಗಳ ಹೊಟ್ಟೆ ಕೆಳಗೆ ನೇಣು ತೂರಿಸಿ ಬಾವಿಯ ಇನ್ನೊಂದು ಭಾಗದಲ್ಲಿದ್ದವರಿಗೆ ತಲುಪಿಸಿದರು. ನೋಡ ನೋಡುತ್ತಿದ್ದಂತೆಯೇ ಒಂದೊಂದೇ ದನಗಳನ್ನು ಬಾವಿಯಿಂದ ಮೇಲೆತ್ತಿದರು.
ನಟರಾಜ್‌ ಅರಳಸುರಳಿ ಬರೆದ ತಮ್ಮ ತಂದೆಯವರ ಕುರಿತ ಬರಹಗಳ ಸಂಕಲನ “ಆಕಾಶಬುಟ್ಟಿ” ಕೃತಿಯ ಒಂದು ಬರಹ ನಿಮ್ಮ ಓದಿಗೆ.

Read More

ಮನುಷ್ಯ ಬದುಕಿನೊಂದಿಗೆ ಮುಖಾಮುಖಿಯಾಗುವ ಪದ್ಯಗಳು: ಕಲ್ಲೇಶ್ ಕುಂಬಾರ್ ಬರಹ

ಕವಿಯಾಗಿ ಮಾಲತಿಯವರಿಗೆ ಕತ್ತಲು ಮತ್ತು ಬೆಳಕಿನ ಕುರಿತಾಗಿ ವಿಶಿಷ್ಟವಾದ ಆಕರ್ಷಣೆಯಿದೆ ಎನ್ನಬಹುದು. ಈ ಮಾತಿಗೆ ಸಾಕ್ಷಿಯಾಗಿ ಈ ಕವನಸಂಕಲನದಲ್ಲಿ ‘ಅಜ್ಜಿ ಮತ್ತು..’ ಎಂಬ ಪದ್ಯವೊಂದಿದೆ. ಇಲ್ಲಿ, ಕತ್ತಲು–ಬೆಳಕಿನ ಆಟವನ್ನು ಕೇಂದ್ರವಾಗಿರಿಸಿಕೊಂಡು ಮನುಷ್ಯ ಬದುಕಿನ ಕ್ರಿಯೆಗಳನ್ನು ಅವರು ಶೋಧಿ‌ಸಲು ಪ್ರಯತ್ನಿಸಿದ್ದಾರೆ.‌ ಈ ಪದ್ಯದ ಶೀರ್ಷಿಕೆಯಲ್ಲಿರುವ ‘ಅಜ್ಜಿ’ ಬೇರಾರೂ ಆಗಿರದೇ ನಮ್ಮೊಳಗಿನ ಅರಿವಿನ ಕೇಡು ಕಳೆಯಲೆಂದು ನಮ್ಮ ಎದೆಯಂಗಳದಲ್ಲಿ ಮುಡಿಸಿಟ್ಟ ಅರಿವಿನ ದೀವಿಗೆಯೇ ಆಗಿದ್ದಾಳೆ!
ಮಾಲತಿ ಗೋರೆಬೈಲ್ ಬರೆದ “ಗುಬ್ಬಿ ಲಾಟೀನು” ಕವನ ಸಂಕಲನದ ಕುರಿತು ಕಲ್ಲೇಶ್‌ ಕುಂಬಾರ್‌ ಬರಹ

Read More

ಕುಸುಮಾ ಆಯರಹಳ್ಳಿ ಬರೆದ ಈ ಭಾನುವಾರದ ಕತೆ

ಮಹೇಶ ಅಷ್ಟು ಸಲ ವಿಧಾನಸೌಧಕ್ಕೆ ಹೋಗಿಬಂದು ಕೆಲಸ ಆಗಲಿಲ್ಲ ಅಂತ ಬೇಸರ ಮಾಡಿಕೊಂಡು, ಅಲ್ಲಿನ ವ್ಯವಸ್ಥೆ ಬಗ್ಗೆ ಹೇಳುವಾಗೆಲ್ಲ ನನಗೆ ಕೋಪ ಬರ್ತಿತ್ತು ಮೇಷ್ಟ್ರೇ. ಪ್ರಜೆಗಳನ್ನ ಬಾಗ್ಲಲ್ಲಿ ನಿಲ್ಸಿ ಜಾತಿ ಯಾವುದಯ್ಯಾ ಒಳಗೋಗಕೆ? ಅಂತ ಕೇಳಕಾ ಆ ಪುಣ್ಯಾತ್ಮರು ದೇಶಾ ಕಟ್ಟಿದ್ದು? ಅಂತ ಕೋಪ ಉಕ್ಕುಕ್ಕಿ ಬರದು. ರಾತ್ರಿ ನಿದ್ದೆ ಬರ್ತಿರಲಿಲ್ಲ. ಆಚೆ ಭಾಷಣದಲ್ಲಿ ಹೇಳೋದು ಒಂದು. ಒಳಗ್ ಮಾಡದೊಂದು. ಇದಕ್ಕೇ ಏನಯ್ಯಾ ನಿಮಗೆ ಸಂವಿಧಾನ ಬರ್ಕೊಟ್ಟಿದ್ದು? ನೊಂದವರೇ ನೋಯಿಸಿದರೆ ಅದಕ್ಕಿಂತಾ ಕೇಡುಂಟಾ ಲೋಕದಲ್ಲಿ?
ಕುಸುಮಾ ಆಯರಹಳ್ಳಿ ಬರೆದ “ಕಪಿಲೆ ಕಂಡ ಕತೆಗಳು” ಕಥಾಸಂಕಲನ ಇಂದು ಬಿಡುಗಡೆಯಾಗಲಿದ್ದು ಈ ಕೃತಿಯ “ದೈತ್ಯ” ಕತೆ ನಿಮ್ಮ ಓದಿಗೆ

Read More

ಮಾತು ಹೆಪ್ಪುಗಟ್ಟಿ ಕಾವ್ಯವಾದ ಬಗೆ: ಡಾ.ಎ.ರಘುರಾಂ ಬರಹ

ಮಂಜುನಾಥ್ ಪಾಳ್ಯ ಅವರ ಎಲ್ಲ ಕವಿತೆಗಳನ್ನು ಓದಿದಾಗ ಅಲ್ಲಿನ ಭಾಷೆ, ವಸ್ತು, ನಿರ್ವಹಣೆಯ ಬಗ್ಗೆ ನೋಡಬೇಕು. ವಸ್ತು ಸಾಮಾಜಿಕವೇ ಆದರೂ ಕೂಡ ನಿರ್ವಹಣೆಯ ಸಂದರ್ಭದಲ್ಲಿ ಅದು ಭಿನ್ನ ಪಾತಳಿಗಳನ್ನು ಕಾಣುತ್ತದೆ. ಕವಿ ಪ್ರತಿಭಟಿಸುವಲ್ಲಿ ಕಾವ್ಯ ಬಂಡಾಯದ ಚಾಟಿ ಬೀಸುತ್ತದೆ. ಮೌನವಾಗಿ ಪ್ರೇಮಕ್ಕೆ ಮರುಳಾದಾಗ ಅಲ್ಲಿನ ಭಾಷೆ ತೀರ ಕೋಮಲವಾಗಿಬಿಡುತ್ತದೆ. ಭ್ರಷ್ಠತೆ, ಅತ್ಯಾಚಾರ, ಶೋಷಣೆ ವಿಚಾರಗಳು ಬಂದರೆ ಭಾಷೆ ಸ್ವಲ್ಪ ಒರಟಾಗಿಬಿಡುತ್ತದೆ. ಕಾವ್ಯ ಹೀಗೆ ಭಿನ್ನ ಪಾತಳಿಗೆ ಒಳಗಾಗುವುದು ಕವಿಯ ಸಂವೇದನಾಶೀಲ ಗುಣವನ್ನು ತೋರುತ್ತದೆ.
ಡಾ. ಮಂಜುನಾಥ ಪಾಳ್ಯ ಬರೆದ ‘ಹೆಪ್ಪುಗಟ್ಟಿದ ಮಾತುಗಳು’ ಕವನ ಸಂಕಲನದ ಕುರಿತು ಡಾ. ಎ. ರಘುರಾಂ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ