Advertisement

Tag: childhood memories

ಹುಡುಗಾಟಗ್ಳು: ಸುಮಾ ಸತೀಶ್ ಸರಣಿ

ಔಟೂಂದ್ರೆ ಅಂಗೇ ಕಣ್‌ ಬುಟ್ಟು ನೋಡಿ, ದಿಟ್ವಾಗ್ಲೂ ಔಟೇನಾ‌ ಎಂಗೆ ಅಂಬ್ತ ತಿಳ್ಕಂಡೇ ಕಾಲು ‌ಪಕ್ಕುಕ್ಕೆ‌ ಮಡಗ್ಬೇಕು. ಎದುರ್ನವೇನಾರಾ ಸುಮ್ ಸುಮ್ಕೆ ಯೋಳಿ ಕಿಸೀತಾವಾ ಅಂಬ್ತ ಮೊದ್ಲು ಅವ್ರ ಮಕ ನೋಡೀವು. ಆಮ್ಯಾಕೆ ಕಾಲು ಗೆರೆ‌ ಮ್ಯಾಗೆ ಮಡಗೈತಾ ಅಂಬ್ತ ಕಂಡ್ಕಂಡು ಆಚೀಕ್ ಬರಾದು. ಅದೆಂತದು ಅಮ್ಮಾಟೇ‌ ಅಂದ್ರೆ ಅದು ಆಮ್‌ ಐ ರೈಟ್ ಅಂಬ್ತ ಇಂಗ್ಲಿಷ್ ‌ನಾಗೆ ಕ್ಯೋಳೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಅವರ ಬಾಲ್ಯದ ಆಟಗಳನ್ನು ಕುರಿತು ಬರೆದಿದ್ದಾರೆ

Read More

ಅಮ್ಮ ಮತ್ತು ಕಟ್ಟಿಗೆಯ ಒಲೆ: ಮಾರುತಿ ಗೋಪಿಕುಂಟೆ ಸರಣಿ

ಅಮ್ಮನ ಕೆಲಸಗಳಲ್ಲಿ ಜಾಸ್ತಿ ಸಹಾಯ ಮಾಡುತ್ತಿದ್ದದ್ದೆ ನಾನು. ಆ ಒಲೆಯ ಹತ್ತಿರ ಕುಳಿತು ಒಂದೊಂದೆ ಕಟ್ಟಿಗೆಯನ್ನು ಇಡುವುದರಲ್ಲಿ ಏನೊ ಒಂದು ಖುಷಿ ಇರುತ್ತಿತ್ತು. ಬೆಳಗಿನ ಚುಮು ಚುಮು ಚಳಿಗೆ ಒಲೆ ಮುಂದೆ ಕುಳಿತು ಬಿಸಿಕಾಯಿಸುತ್ತಿದ್ದಾಗ ಕಟ್ಟಿಗೆ ಉರಿಯಿಂದ ಬೆರಳು ಸುಟ್ಟುಕೊಂಡಿದ್ದು ಇದೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಟೀವಿ’ಯಿದ್ದವರು ‘ಠೀವಿ’ಯಿಂದ ಬೀಗುತ್ತಿದ್ದ ಕಾಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ದಿನ ಸಂಜೆ ಒಂದು‌ ಧಾರವಾಹಿ, ಶುಕ್ರವಾರ ‘ಚಿತ್ರಮಂಜರಿ’ ಹೆಸರಿನಲ್ಲಿ‌ ಕನ್ನಡ ಚಲನಚಿತ್ರ ಗೀತೆಗಳು ಬರುತ್ತಿದ್ದವು. ಇವನ್ನ ನೋಡಲು ನಾವು ತುಂಬಾ ಕಾತುರರಾಗಿ ಸಂಜೆ ಏಳು ಗಂಟೆಗೆಲ್ಲಾ ಟಿವಿ ಮುಂದೆ ಹಾಜರಾಗುತ್ತಿದ್ದೆವು. ನಮ್ಮಜ್ಜನ ಮನೆಯಲ್ಲಿ ಟಿವಿ ಇರಲಿಲ್ಲ. ನಾವು ಬೇರೆಯವರ ಮನೆಗೆ ಟಿವಿ‌ ನೋಡಲು ಹೋಗಬೇಕಾಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಬಾಯಿಗೆ ಸಿಗದ ಗೆಣಸು ಮತ್ತು ಮೇಷ್ಟ್ರು ಎಸೆದ ನೋಟ್ಬುಕ್

ಎಲ್ಲರಿಗಿಂತ ಚೆನ್ನಾಗಿಯೇ ಬರೆದಿದ್ದ ನನಗೆ, ಹಾಗೆ ಮೇಷ್ಟ್ರು ಹೊಡೆದದ್ದರಿಂದ ದಿಗ್ಬ್ರಾಂತನಾಗಿ ನೋಡುತ್ತಿದ್ದೆ. ನಾನು ಸಾವರಿಸಿಕೊಳ್ಳಲು ಬಹಳ ಸಮಯ ಬೇಕಾಯಿತು. ಕಣ್ಣಿನಿಂದ ನೀರು ಸುರಿಯುತ್ತಿತ್ತು. ನೋಟ್ ಬುಕ್ ನನ್ನಿಂದ ಇಪ್ಪತ್ತೈದು ಮೀಟರ್‌ನಷ್ಟು ದೂರ ಬಿದ್ದಿತ್ತು. ಹಾಳೆಗಳು ಗಾಳಿಗೆ ಹಾರುತ್ತಿದ್ದವು. ಅವರ ತರಗತಿ ಮುಗಿದ ಮೇಲೆ ಈ ಹಿಂದೆ ನಮಗೂ ಹೀಗೆ ಮಾಡಿದ್ದರು ಎಂದು ನನ್ನ ಗೆಳೆಯರು ನನ್ನನ್ನು ಸಮಾಧಾನ ಮಾಡಿದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕುದ್ರಿ ಕುದ್ರಿನ…ಕತ್ತಿ ಕತ್ತಿನ….!

ಬೀಜಗಣಿತವನ್ನು ಕಲಿಸುತ್ತಿದ್ದಾಗ ಮೇಷ್ಟ್ರು 4x ಗೆ 3y ಸೇರಿಸಿದರೆ ಎಷ್ಟಾಗುತ್ತದೆ ಎನ್ನುವುದನ್ನು ಅವರೆಷ್ಟು ಬಾರಿ ಅರ್ಥ ಮಾಡಿಸಲು ಪ್ರಯತ್ನಿಸಿದ್ದರು. ಆದರೆ ನಿಷ್ಕ್ರಿಯಗೊಂಡಂತಿದ್ದ ನಮ್ಮ ಮೆದುಳೊಳಗೆ ಇಳಿಯದೆ ನಮ್ಮೆಲ್ಲರ ಉತ್ತರ ‘ಏಳು’ ಎಂದೇ ಇರುತ್ತಿತ್ತು.  ಅವರಿಗೆ ಕೊನೆ ಕೊನೆಗೆ ಕೋಪ ಬಂದರೂ ಅದನ್ನು ತೋರಿಸಿಕೊಳ್ಳದೇ ಭಿನ್ನವಾದ ಉದಾಹರಣೆಯನ್ನು ನೀಡುತ್ತಾ “ಹೆಲೊ ಜೆಂಟಲ್‌ಮೆನ್ಸ್, ನಾಲ್ಕು ಕುದ್ರಿಗಳೊಳಗ ಮೂರು ಕತ್ತಿಗಳನ್ನ ಕುಡಿಸಿದ್ರ ಎಷ್ಟ್ ಆಗ್ತೆತಿ” ಅಂದಾಗಲೂ ನಾವು ಏಳು ಅಂತಲೇ ಒದರಿಬಿಡುತ್ತಿದ್ದೆವು. ನಮ್ಮ ದಡ್ಡತನಕ್ಕೆ ಅವರು ಹಣಿ ಹಣಿ ಜಜ್ಜಿಕೊಂಡು ಮರುಕಪಟ್ಟು “ನಾಲ್ಕು ಕುದ್ರಿಗೆ ಮೂರು ಕತ್ತಿ ಸೇರಿದ್ರ ಏಳು ಆಗಲ್ಲ ಕಣ್ರಲೇ, ಕುದ್ರಿ ಕುದ್ರಿನ… ಕತ್ತಿ ಕತ್ತಿನ…. ಅವು ಯಾವತ್ತು ಒಂದ ಅಲ್ಲ ಎನ್ನುತ್ತಿದ್ದರು. ʻತಳಕಲ್‌ ಡೈರಿʼಯಲ್ಲಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ ಇಸ್ಮಾಯಿಲ್‌ ತಳಕಲ್‌

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ