Advertisement

Tag: Column

ಯಾವುದು ಪ್ರೀತಿ?! ಯಾಕಾದರೂ ಈ ಪ್ರೀತಿ…: ಆಶಾ ಜಗದೀಶ್ ಅಂಕಣ

ಕಲ್ಲೆಸೆಯುವ ಕೈಗಳಿಗೆ ಆತ್ಮಸಾಕ್ಷಿ ಏಕೆ ಕಾಡುವುದಿಲ್ಲ?! ಕೊಂದು ಬದುಕುವುದು ಮನುಷ್ಯತ್ವವೇ ಅಲ್ಲ ಎಂದ ಮೇಲೆ ನೋಯಿಸಿ ನಗುವ ಮನಃಸ್ಥಿತಿ ಹುಟ್ಟಿದ್ದು ಎಲ್ಲಿಂದ… ಎಲ್ಲ ಪಾಠಗಳನ್ನೂ ನಮ್ಮ ಬದುಕಿನಿಂದಲೇ ಕಲಿಯುವ ಅಗತ್ಯವಿಲ್ಲ. ನಮ್ಮವರ ಬದುಕಿನಿಂದಲೂ ಕಲಿಯಬಹುದು…ಇಲ್ಲಿ ಮಲ್ಲಿಗೆ ಬಳ್ಳಿಯಂತೆ ತಬ್ಬಿ ಹಬ್ಬಿ ಬೆಳೆಯುವ ಹೊತ್ತಿನಲ್ಲೇ ಗುಲಾಬಿಯಂತೆ ಮುಳ್ಳುಗಳ ನಡುವೆಯೇ ಜಾಗ್ರತೆಯಾಗಿ ಅರಳುವುದನ್ನೂ ಕಲಿಯಬೇಕು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

Read More

ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಆರಂಭ

ಪ್ರಯಾಣದ ಕನಸಿನಿಂದ ಥಟ್ಟನೆ ವಾಸ್ತವಕ್ಕಿಳಿದ ನೀಲಿ ನೀರಿನಾಳದಲ್ಲಿ ಹೊಳೆಯುತ್ತಿರುವ ನಾಣ್ಯಗಳನ್ನು ನೋಡುತ್ತಾ ನಡುಹೊಳೆಯಲ್ಲಿ ನಿಂತುಬಿಟ್ಟಳು. ಅವಳಿಗೀಗ ಇರುವುದು ಎರಡೇ ಅವಕಾಶಗಳು. ಒಂದೋ ದುಡ್ಡನ್ನು ಹೊಳೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗುವುದು, ಇಲ್ಲವೆಂದರೆ ಅಂಗಿ ಒದ್ದೆಯಾಗುವ ಪರಿವೆಯಿಲ್ಲದೇ ಹೊಳೆಯೊಳಗೆ ಒಮ್ಮೆ ಮುಳುಗಿ ದುಡ್ಡನ್ನು ಹೆಕ್ಕಿಕೊಳ್ಳುವುದು. ಒದ್ದೆಯಾದ ಅಂಗಿಯನ್ನು ಬದಲಿಸಿ ಬರಲು ಮನೆಗೆ ಹೋಗುವಷ್ಟು ಸಮಯವಿಲ್ಲ.
ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ದಕ್ಕಿದ್ದಕ್ಕೆ ಕೃತಜ್ಞತೆ ಇರಲಿ : ಎಸ್ ನಾಗಶ್ರೀ ಅಜಯ್ ಅಂಕಣ

ತಮಗೆ ಬೇಕಾದ ಕೋರ್ಸಿಗೆ ಪ್ರವೇಶ ದೊರೆಯಲಿಲ್ಲ, ಅಂದುಕೊಂಡಷ್ಟು ಅಂಕ ಬರಲಿಲ್ಲ, ಪ್ರೀತಿಸಿದ ಹುಡುಗಿ ಕರೆ ಸ್ವೀಕರಿಸಲಿಲ್ಲ, ಮದುವೆಗೆ ಮನೆಯಲ್ಲಿ ಒಪ್ಪಿಗೆಯಿಲ್ಲ, ವರ್ಷದೊಳಗೆ ಮಕ್ಕಳಾಗಲಿಲ್ಲ ಎಂಬ ‘ಇಲ್ಲ’ಗಳಿಗೆ ಜೀವತೆರುವ, ಬದುಕಿದ್ದರೂ ಉತ್ಸಾಹ, ಆಶಾವಾದವನ್ನೇ ಕಳೆದುಕೊಳ್ಳುವವರಿದ್ದಾರೆ. ಮುಂದೇನು? ಮುಂದೇನು?
ಎಸ್ ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣದ ಬರಹ ನಿಮ್ಮ ಓದಿಗೆ

Read More

ಅಂಗಿ, ಮತ್ತದರ ಪ್ರಸಂಗಗಳು…: ಮಾರುತಿ ಗೋಪಿಕುಂಟೆ ಸರಣಿ

ಊರಿನ ಹುಡುಗರೆಲ್ಲ ನೋಡಿ ಹೇಗೆ ಹರಳೆಣ್ಣೆ ಹಚ್ಕೊಂಡು ಓಡಾಡ್ತ ಇದ್ದಾರೆ. ನಿಮಗೆ ಹಬ್ಬ ಬ್ಯಾಡ್ವ ಎಂದು ಅಜ್ಜಿ ಗದರಿದ್ದಳು. ನಾವೇನು ಹೊಸಬಟ್ಟೆ ಹಾಕ್ಕೋಳಲ್ಲ. ನಾವ್ಯಾಕೆ ಹರಳೆಣ್ಣೆ ಹಚ್ಕೊಬೇಕು ಎಂದು ಸುಮ್ಮನಾದೆವು. ಅಪ್ಪ ಬಂದು ಗದರಿದ. ನಾವು ವಿಧಿಯಿಲ್ಲದೆ ಅದಕ್ಕೆ ಸಿದ್ಧರಾದೆವು. ಎಣ್ಣೆಸ್ನಾನ ಆದಮೇಲೆ ಇದ್ದಕ್ಕಿದ್ದಂತೆ ಹೊಸ ಬಟ್ಟೆ ಕಾಣಿಸಿದವು. ಅವು ರೆಡಿಮೇಡ್ ಬಟ್ಟೆಗಳಾಗಿದ್ದವು. ಬುಟ್ಟಿ ತೋಳಿನ ರಬ್ಬರ್‌ನ ಎಳೆಯ ಅಲ್ಲಲ್ಲಿ ಮಿಂಚು ಕಾಣಿಸುವ ಇಂಗ್ಲೀಷ್ ಅಕ್ಷರದ ಉಲ್ಟಾ ಸೀದಾ ಅಡ್ಡ ಹೀಗೆ ನಾನಾ ರೀತಿ ಕಾಣುವ ಪ್ರಿಂಟೆಡ್ ಅಕ್ಷರಗಳ ಆ ‘ಅಂಗಿ’ ಆಧುನಿಕತೆಯ ‘ಟೀ ಶರ್ಟ್’ ಆಗಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹದಿನಾರನೆಯ ಕಂತು

Read More

ಕೆಂಪೆಂದರೆ ಕೆಟ್ಟದ್ದೂ ಅಲ್ಲ… ಭಯವೂ ಅಲ್ಲ…: ಮಾಲತಿ ಶಶಿಧರ್‌ ಅಂಕಣ

ಆ ತರಗತಿಯಲ್ಲಿ ಬೋಧಿಸಬೇಕಾದ ಪಾಠವನ್ನು ಅಂದಿನ ಮಟ್ಟಕ್ಕೆ ಮುಂದೂಡಿ ಇಂಥ ಅದೆಷ್ಟು ಮಕ್ಕಳು ಹೀಗೆ ಹಿಂಸೆ ಅನುಭವಿಸುತ್ತಿದ್ದಾರೋ ಅನಿಸಿ ನಡೆದ ಎಲ್ಲವನ್ನೂ ಮತ್ತಷ್ಟು ನನ್ನ ಆ ದಿನಗಳ ಉದಾಹರಣೆ ಕೊಟ್ಟು, ಆ ದಿನಗಳಲ್ಲಿ ಆಗುವ ಬದಲಾವಣೆಗಳೇನು, ಹೇಗೆ ಸಿದ್ಧವಿರಬೇಕು, ಸಮಸ್ಯೆಗಳಾದಾಗ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದೆಲ್ಲ ತಿಳಿಸಿ, ಏನೇ ಸಮಸ್ಯೆ ಇದ್ದರೂ ನನ್ನ ಬಳಿ ಮುಕ್ತವಾಗಿ ಹೇಳಿಕೊಳ್ಳಿ ಎಂದಿದ್ದೆ. “ಹೊಳೆವ ನದಿ” ಅಂಕಣದಲ್ಲಿ ಮಾಲತಿ ಶಶಿಧರ್ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ