Advertisement

Tag: Column

ನನ್ನ ನಾನಿಯೂ… ಸಕ್ಕರೆ ಪುಟಾಣಿಯೂ….

ಮಸೀದಿಯಲ್ಲಿ ಶುಕ್ರವಾರಕ್ಕೊಮ್ಮೆ ಸಿಗುತ್ತಿದ್ದ ಪುಟಾಣಿ ಸಕ್ಕರೆಯ ರುಚಿ ನನ್ನ ಬೆಂಬಿಡದೆ ಕಾಡತೊಡಗಿ ದಿನವೂ ತಿನ್ನಬೇಕೆನಿಸುತ್ತಿತ್ತು. ಆದರೆ ನನಗೆ ತಿನ್ನಬೇಕೆನಿಸಿದಾಗ ಎಲ್ಲಿಂದ ಪಡೆಯುವುದು? ಶುಕ್ರವಾರ ಬರುವವರೆಗೂ ಕಾದು ಅವರು ಕೊಡುವ ಒಂದು ತುತ್ತಿನಷ್ಟು ಪುಟಾಣಿ ಸಕ್ಕರೆ ನನ್ನ ಹೊಟ್ಟೆಗೆ ಸಾಕಾಗುತ್ತಿರಲಿಲ್ಲ. ತಿಂದರೆ ಹೊಟ್ಟೆ ತುಂಬುವಷ್ಟು ಅದನ್ನೇ ತಿನ್ನಬೇಕೆನ್ನುವ ಆಸೆ. ಅಪ್ಪನ ಹತ್ತಿರನೋ ಅವ್ವನ ಬಳಿಯೋ ರೊಕ್ಕ ಕೇಳಿದರೆ ಆಗ ಎಂಟಾಣೆಯೋ ಒಂದು ರೂಪಾಯಿಯೋ ಸಿಗುತ್ತಿತ್ತಷ್ಟೆ.
ಇಸ್ಮಾಯಿಲ್ ತಳಕಲ್‌ ಬರೆಯುವ “ತಳಕಲ್‌ ಡೈರಿ”ಯಲ್ಲಿ ಹೊಸ ಬರಹ

Read More

ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ

Read More

ಉಳಿದು ಬದುಕುವುದನ್ನೇ ಆಯ್ಕೆ ಮಾಡಿಕೊಂಡವನ ಕಥೆ

ಒಮ್ಮೊಮ್ಮೆ ಯೋಚಿಸಿದರೆ ನಮ್ಮ ಅಳತೆಗಳನ್ನು ಯೋಜನೆಗಳನ್ನು ಮೀರಿ ಜೀವನದಲ್ಲಿ ಏನೋ ಘಟಿಸುತ್ತಿರುತ್ತದೆ. ಒಮ್ಮೊಮ್ಮೆ ಅದಕ್ಕೊಂದು ಅರ್ಥವೇ ಇರುವುದಿಲ್ಲ. ತರಗೆಲೆಯಂತೆ ತೂರಿ ಎತ್ತೆತ್ತಲೋ ಹಾರಿ ಮತ್ತೆಲ್ಲೋ ಮತ್ಯಾವುದೋ ಮಣ್ಣಿನಲ್ಲಿ ಸೇರಿ ಕೊಳೆತು ಹೋಗಿಬಿಡುವ ಹಾಗೆ ಅನಿಸುತ್ತದೆ. ಬದುಕೇ ಹಾಗೆ! ಹುಡುಕುವಾಗ ನಾವು ಹುಡುಕುತ್ತಿರುವುದು ಸಿಗುವುದಿಲ್ಲ. ಹುಡುಕುವುದನ್ನು ನಿಲ್ಲಿಸಿದಾಗ ಧುತ್ತೆಂದು ತಂದು ಎಸೆಯುತ್ತದೆ. ಈ ಬದುಕಿಗೆ ಅರ್ಥ ಎನ್ನುವುದು ಇದೆಯೇ? ಈ ಬದುಕು ಅರ್ಥಗಳ ಹಂಗನ್ನು ಮೀರಿಕೊಳ್ಳಲು ಪ್ರಯತ್ನಿಸುತ್ತಿರುವ ಕವಿತೆಯೇ?

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ