Advertisement

Tag: Column

ಕೆಂಪೆಂದರೆ ಕೆಟ್ಟದ್ದೂ ಅಲ್ಲ… ಭಯವೂ ಅಲ್ಲ…: ಮಾಲತಿ ಶಶಿಧರ್‌ ಅಂಕಣ

ಆ ತರಗತಿಯಲ್ಲಿ ಬೋಧಿಸಬೇಕಾದ ಪಾಠವನ್ನು ಅಂದಿನ ಮಟ್ಟಕ್ಕೆ ಮುಂದೂಡಿ ಇಂಥ ಅದೆಷ್ಟು ಮಕ್ಕಳು ಹೀಗೆ ಹಿಂಸೆ ಅನುಭವಿಸುತ್ತಿದ್ದಾರೋ ಅನಿಸಿ ನಡೆದ ಎಲ್ಲವನ್ನೂ ಮತ್ತಷ್ಟು ನನ್ನ ಆ ದಿನಗಳ ಉದಾಹರಣೆ ಕೊಟ್ಟು, ಆ ದಿನಗಳಲ್ಲಿ ಆಗುವ ಬದಲಾವಣೆಗಳೇನು, ಹೇಗೆ ಸಿದ್ಧವಿರಬೇಕು, ಸಮಸ್ಯೆಗಳಾದಾಗ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದೆಲ್ಲ ತಿಳಿಸಿ, ಏನೇ ಸಮಸ್ಯೆ ಇದ್ದರೂ ನನ್ನ ಬಳಿ ಮುಕ್ತವಾಗಿ ಹೇಳಿಕೊಳ್ಳಿ ಎಂದಿದ್ದೆ. “ಹೊಳೆವ ನದಿ” ಅಂಕಣದಲ್ಲಿ ಮಾಲತಿ ಶಶಿಧರ್ ಬರಹ ನಿಮ್ಮ ಓದಿಗೆ

Read More

ನಿಯಂತ್ರಿಸುವ ಬುದ್ಧಿಯನ್ನು ನಿಯಂತ್ರಿಸೋಣವೇ?: ಮಾಲತಿ ಶಶಿಧರ್‌ ಅಂಕಣ

ಈಗ ಹೆಜ್ಜೆ ಹೆಜ್ಜೆಗೂ ನಿಯಂತ್ರಣ ಹೇರುತ್ತಿದ್ದ ಗಂಡನಿಲ್ಲ. ಹೆಂಡತಿಗೆ ಕಟ್ಟು ಪಾಡು ಹೇರುವವರಿಲ್ಲ, ಆಕೆ ಮಗಳ ಜೊತೆ ಶಾಶ್ವತವಾಗಿ ತನ್ನ ತವರು ಸೇರಿದ್ದಾರೆ. ಈಗ ಹೀಗೆ ಇರು ಹಾಗೆ ಇರು ಎಂದು ಹೇಳುವವರಿಲ್ಲ. ಆಕೆ ಹೇಗೆ ಬೇಕಾದರೂ ಇರಬಹುದು. ಗಂಡನಿಲ್ಲದ ನೋವಿದೆ ಆದರೀಗ ಉಸಿರುಗಟ್ಟುತ್ತಿಲ್ಲ. ಇಷ್ಟಕ್ಕೇಕೆ ಆತ ಅಷ್ಟೆಲ್ಲಾ ಹೆಂಡತಿಯನ್ನ ಹಿಡಿತದಲ್ಲಿಟ್ಟುಕೊಳ್ಳಬೇಕಿತ್ತು. ಆತನಿಗೆ ಒಂದು ದಿನ ಎಲ್ಲವನ್ನೂ ಎಲ್ಲರನ್ನೂ ಬಿಟ್ಟು ಇದ್ದಕ್ಕಿದ್ದ ಹಾಗೆ ಅನಾಥನಾಗಿ ಹೊರಟು ಬಿಡಬೇಕು ಎಂಬ ಅರಿವಿದ್ದರೆ ನಿಜಕ್ಕೂ ಆತ ಹಾಗೆಲ್ಲ ಮಾಡುತ್ತಿದ್ದರ?
ಮಾಲತಿ ಶಶಿಧರ್ ಬರೆಯುವ ಅಂಕಣ “ಹೊಳೆವ ನದಿ”

Read More

ಅನುಬಂಧವೊಂದು ಕೊರಳ ಉರುಳಾಗುವ ಹೊತ್ತು: ಮಾಲತಿ ಶಶಿಧರ್‌ ಅಂಕಣ

ಮಳೆ ನಿಂತ ಮಾರನೇ ದಿನದ ಸ್ವರ್ಗವೀಗ ಅಜ್ಜಿಯ ಕತೆಯಲ್ಲಿ ಬರುತ್ತಿದ್ದ ನರಕದಂತೆ ಭಾಸವಾಗುತ್ತಿದೆ. ಸೂರ್ಯ ಮುಳುಗಿದ ಮೇಲೆ ಹನಿ ಬೀಳುವ ಸದ್ದಿಗೆ ಪುಳಕಗೊಳ್ಳುತ್ತಿದ್ದ ಹೃದಯ ಅಕ್ಕ ಪಕ್ಕದವರಿಗೂ ಕೇಳಿಬಿಡುವಂತೆ ಒಡೆದುಕೊಳ್ಳಲು ಶುರು ಮಾಡಿದೆ. ನಿದ್ದೆಯೇ ಇಲ್ಲದ ಅವಳಿಗೀಗ ಅಲಾರಾಂ ಅವಶ್ಯಕತೆಯಿಲ್ಲ. ಹೊರಗೆ ಕಾಲಿಟ್ಟರೆ ಮುದ ಗೊಳಿಸುತ್ತಿದ್ದ ಚಳಿ ಈಗ ಬೆನ್ನ ಮೂಳೆಯನ್ನು ಕೊರೆಯುತ್ತದೆ.
ಮಾಲತಿ ಶಶಿಧರ್ ಬರೆಯುವ ಅಂಕಣ “ಹೊಳೆವ ನದಿ”ಯಲ್ಲಿ ಹೊಸ ಬರಹ

Read More

ಸಾವಿರ ಕಥೆಗಳ ಸಂಸಾರ: ಎಸ್‌. ನಾಗಶ್ರೀ ಅಜಯ್‌ ಅಂಕಣ

ಎಷ್ಟೋ ಕಥೆಗಳಲ್ಲಿ ನಾವೇ ಮುಖ್ಯವೋ, ಅಮುಖ್ಯವೋ ಒಂದು ಪಾತ್ರವಾಗಿ ಚಲಿಸುತ್ತಿರುತ್ತೇವೆ. ಅಸಲಿಗೆ ನಮ್ಮ ಸತ್ವಪರೀಕ್ಷೆಯಾಗುವುದು, ಇಂತಹ ದ್ವಂದ್ವಗಳಲ್ಲಿ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿ ನಮ್ಮ ಹೆಗಲೇರಿದಾಗ. ಹಾವು ಸಾಯಬಾರದು. ಕೋಲು ಮುರಿಯಬಾರದು ಎನ್ನುವ ನಾಜೂಕಯ್ಯರು ಹೇಗೋ ಬಚಾವಾಗುತ್ತಾರೆ. ಇದ್ದರೆ ಒಂದು ಕಡೆ. ಎರಡು ದೋಣಿಯ ಪಯಣ ನಮಗಲ್ಲ ಎನ್ನುವವರಿಗೆ ಸವಾಲು ಹೆಚ್ಚಿನದು. ಆದರೆ ಬಹಳಷ್ಟು ಸಲ ನಮ್ಮ ಪ್ರಯತ್ನಕ್ಕಿಂತ ಆ ಕ್ಷಣದ ಬಲವೇ ಹೆಚ್ಚಾಗಿ, ತುರ್ತು ಪರಿಸ್ಥಿತಿಯಲ್ಲಿ ಎರಡರಲ್ಲೊಂದು ತೀರ್ಮಾನವಾಗಿಬಿಟ್ಟಿರುತ್ತದೆ.
ಎಸ್‌. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಸಿಹಿ ಕೊಟ್ಟರೆ ಅಳುತ್ತಿದ್ದ ಮಂದಿ…

ಸುತ್ತ ಎತ್ತ ನೋಡಿದರೂ ರಾಕ್ಷಸಾಕಾರದ ಗುಡ್ಡಗಳು, ತುಂಬಿ ಹರಿಯುತ್ತಿದ್ದ ನದಿಗಳು. ಅಲ್ಲಿ ನಮ್ಮಂತೆ ಗುಂಪು ಗುಂಪು ಮನೆಗಳಾಗಲಿ ಹಳ್ಳಿಗಳಾಗಲಿ ಇಲ್ಲ. ಗುಡ್ಡಗಳಲ್ಲಿಯೇ ಹಳ್ಳಿಗಳು. ಅರ್ಧ ಕಿಲೋಮೀಟರ್ ಒಂದು, ಕಿಲೋಮೀಟರ್ ಅಂತರದಲ್ಲಿ ಒಂದೊಂದು ಮನೆಗಳು. ವಾಹನಗಳಿಗಿಂತ ಕುದುರೆಗಳೆ ಸಂಚಾರಕ್ಕೆ ಆಸರೆಗಳು. ನಮ್ಮ ತಂಡ ಮೊದಲೆ ತಯಾರಿಸಿ ಇಟ್ಟ ಅಡುಗೆ ಸಾಮಗ್ರಿಗಳ, ಬಟ್ಟೆ, ಹಾಸಿಗೆ ಹೊದಿಕೆಗಳ ಕಿಟ್ಟನ್ನು ಪ್ರತಿ ಮನೆಗೂ ತಲುಪಿಸಿ ಅವರಿಗೊಂದಿಷ್ಟು ಸಾಂತ್ವಾನ ಹೇಳಿ ಬರುತ್ತಿತ್ತು. ಶಾಲೆಗೆ, ದುಡಿಯಲು, ಕೊಂಡಕೊಳ್ಳಲು ಹೊರಗೆ ಹೋದವರು ಮರಳಿ ಹೆಣವಾಗಿ ಸಿಗುತ್ತಿದ್ದರು.
ಇಸ್ಮಾಯಿಲ್‌ ತಳಕಲ್‌ ಬರೆಯುವ ‘ತಳಕಲ್‌ ಡೈರಿ’ಯಲ್ಲಿ ಹೊಸ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ