Advertisement

Tag: Column

ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ

ಇತ್ತೀಚೆಗೆ ಇತ್ತ ನಾಟಕವೂ ಅಲ್ಲದ, ಅತ್ತ ಸರಳ ಓದುವಿಕೆಯೂ ಅಲ್ಲದ ಮಧ್ಯಮಾರ್ಗದಲ್ಲಿ ನಿಂತ ಆಡಿಯೋ ಪುಸ್ತಕಗಳ ಭರಾಟೆಯೂ ಹೆಚ್ಚಿದೆ. ಕೆಲಸ ಮಾಡುತ್ತಲೇ ಕೇಳಿಸಿಕೊಳ್ಳಬಹುದು. ವಿಚಾರ ತಿಳಿಯಬಹುದು ಎಂಬ ಸಕಾರಾತ್ಮಕ ಅಂಶಗಳ ಬೆಂಬಲವಿದ್ದರೂ, ಏಕಾಂತದಲ್ಲಿ ಈ ಜಗದ ಪರಿವೆ ಇಲ್ಲದೆ, ಮನೋಲೋಕದಲ್ಲಿ ಪಾತ್ರವೇ ನಾವಾಗಿ ವಿಹರಿಸುವ ‘ಓದಿ’ನ ಆನಂದವನ್ನು ಎಂದಿಗೂ ಅವು ನೀಡಲಾರವು. ನಮ್ಮ ಕಲ್ಪನೆಯಲ್ಲಿ ಪಾತ್ರಗಳಿಗೆ ರೂಪ, ಬಣ್ಣ, ನಿಲುವು ಸಿಕ್ಕಂತೆಯೇ ಅವುಗಳಿಗೆ ಧ್ವನಿಯೂ ಲಭಿಸಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಕೊಳ್ಳುವ ಭರದಲ್ಲಿ ವಿವೇಕವೇ ಕಳೆದುಹೋದರೆ!

ಮುವ್ವತ್ತರ ಸುಮಾರಿಗೆ ಕೆಲವು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಿದೆ. ಕಂಡಿದ್ದನ್ನೆಲ್ಲಾ ಕೊಳ್ಳುವ ಶಕ್ತಿ ನೀಡುವ ಖುಷಿ, ಸವಿಯಾದ ನೆನಪಿನ ಘಮ ಹೊತ್ತ ಅರಿವೆಗಳು ನೀಡುವ ಹಿತಾನುಭವಕ್ಕೆ ಸಾಟಿಯಾಗಬಲ್ಲದೆ? ಕೊಳ್ಳುತ್ತೇನೆಂಬುದು ನಮ್ಮ ಅಹಂಕಾರವನ್ನು ತಣಿಸಬಹುದು. ಆದರೆ ಅಕ್ಕರೆಯ ಸಕ್ಕರೆಯಾಗಬಹುದೆ? ಅರವತ್ತರ ಸುಮಾರಿಗೆ ಈ ಮಟ್ಟಗಿನ ಸರಳತೆ ರೂಢಿಸಿಕೊಳ್ಳೋಣ ಅನ್ನುವಂತಿಲ್ಲ. ಇದು ಖಂಡಿತ ವೈರಾಗ್ಯದ ದಾರಿಯಲ್ಲ. ವಿವೇಚನೆಯ ಹಾದಿ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಬೆಂಕಿಯ ಮಳೆ

ಉಮಾ ಅವರಿದ್ದ ಓಣಿಯ ಬಳಿ ಹೋಗಿ ಒಬ್ಬ ಹೆಂಗಸನ್ನು ‘ಇಲ್ಲಿ ಉಮಾ ಅನ್ನೋರ ಮನೆ ಎಲ್ಲಿ ಬರತ್ತೆ?’ ಅಂತ ಕೇಳಿದೆ. ಅದಕ್ಕವರು ‘ಓಹ್, ಶಾಹೀನಾ ಬೇಗಂ ಮನೆನಾ? ಬನ್ನಿ ಬನ್ನಿ. ನಮ್ಮ ಮನೆ ಪಕ್ಕದ ಮನೆನೇ ಶಾಹೀನಕ್ಕನದು. ನನ್ನ ಹೆಸರು ನಾಗವೇಣಿ. ಅಕಿ ನನ್ನ ಗೆಣತಿ ಅದಾಳೆ.’ ಎನ್ನುತ್ತಾ ನನ್ನನ್ನ ಹಿಂಬಾಲಿಸಿ ಎಂಬುವಂತೆ ಮುಂದೆ ಮುಂದೆ ನಡೆದಳು. ಸ್ವಲ್ಪ ಹೊತ್ತು ನಡೆದ ಮೇಲೆ ಒಂದು ಪುಟ್ಟ ಜನತಾ ಮನೆಯಂತಿದ್ದ ಮನೆಯ ಮುಂದೆ ನಿಂತು ‘ಶಾಹೀನಕ್ಕ, ನಿನ್ನ ನೋಡೋಕೆ ಯಾರೋ ಬಂದಾರೆ…’ ಎಂದು ಕೂಗಿದಳು. ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

Read More

ನನ್ನ ನಾನಿಯೂ… ಸಕ್ಕರೆ ಪುಟಾಣಿಯೂ….

ಮಸೀದಿಯಲ್ಲಿ ಶುಕ್ರವಾರಕ್ಕೊಮ್ಮೆ ಸಿಗುತ್ತಿದ್ದ ಪುಟಾಣಿ ಸಕ್ಕರೆಯ ರುಚಿ ನನ್ನ ಬೆಂಬಿಡದೆ ಕಾಡತೊಡಗಿ ದಿನವೂ ತಿನ್ನಬೇಕೆನಿಸುತ್ತಿತ್ತು. ಆದರೆ ನನಗೆ ತಿನ್ನಬೇಕೆನಿಸಿದಾಗ ಎಲ್ಲಿಂದ ಪಡೆಯುವುದು? ಶುಕ್ರವಾರ ಬರುವವರೆಗೂ ಕಾದು ಅವರು ಕೊಡುವ ಒಂದು ತುತ್ತಿನಷ್ಟು ಪುಟಾಣಿ ಸಕ್ಕರೆ ನನ್ನ ಹೊಟ್ಟೆಗೆ ಸಾಕಾಗುತ್ತಿರಲಿಲ್ಲ. ತಿಂದರೆ ಹೊಟ್ಟೆ ತುಂಬುವಷ್ಟು ಅದನ್ನೇ ತಿನ್ನಬೇಕೆನ್ನುವ ಆಸೆ. ಅಪ್ಪನ ಹತ್ತಿರನೋ ಅವ್ವನ ಬಳಿಯೋ ರೊಕ್ಕ ಕೇಳಿದರೆ ಆಗ ಎಂಟಾಣೆಯೋ ಒಂದು ರೂಪಾಯಿಯೋ ಸಿಗುತ್ತಿತ್ತಷ್ಟೆ.
ಇಸ್ಮಾಯಿಲ್ ತಳಕಲ್‌ ಬರೆಯುವ “ತಳಕಲ್‌ ಡೈರಿ”ಯಲ್ಲಿ ಹೊಸ ಬರಹ

Read More

ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ