Advertisement

Tag: Crime and Punishment

ಅಪರಾಧಕ್ಕೆ ತಕ್ಕ ಶಿಕ್ಷೆ ಅಂದರೇನರ್ಥ?

ಬಿಸಿಲು, ಉಪವಾಸ, ಸುತ್ತಲಿನ ಕೊಳಕು, ದೊಡ್ಡವರ ಸಣ್ಣತನ… ಮುಂತಾದವುಗಳಿಂದ ಅವನು ಬೇಸತ್ತಿದ್ದಾನೆ. ಇವನ ಒಳಿತು ಮತ್ತು ಭವಿಷ್ಯಕ್ಕಾಗಿ ತಂಗಿ ದುನ್ಯಾ ಸಿರಿವಂತನಾದ ಲೂಷನ್‍ನನ್ನು ಇಷ್ಟವಿಲ್ಲದಿದ್ದರೂ ವರಿಸಲು ಸಿದ್ಧವಾಗಿರುವ ವಿಷಯ ಈಗಷ್ಟೇ ಅವನಿಗೆ ತಾಯಿಯ ಪತ್ರದಿಂದ ತಿಳಿದಿದೆ. ಏನನ್ನಾದರೂ ಗಂಭೀರವಾಗಿ ಯೋಚಿಸುವಾಗ ಕೈಕಟ್ಟಿ ಅತ್ತಿಂದಿತ್ತ ಸರಸರನೆ ಓಡಾಡುವ ತಂಗಿಯ ಚಿತ್ರ ಅವನ ಕಣ್ಣ ಮುಂದಿದೆ.
ಕಾವ್ಯಾ ಓದಿದ ಹೊತ್ತಿಗೆ ಅಂಕಣದಲ್ಲಿ ಫ್ಯದೊರ್ ದಾಸ್ತಯೇವ್ಸ್ಕಿಯ ಪ್ರಸಿದ್ಧ ಕಾದಂಬರಿ “ಕ್ರೈಂ ಅಂಡ್‌ ಪನಿಷ್ಮೆಂಟ್‌” ಕುರಿತು ಬರೆದಿದ್ದಾರೆ ಕಾವ್ಯಾ ಕಡಮೆ

Read More

ಅಪರಾಧಕ್ಕೆ ತಕ್ಕ ಶಿಕ್ಷೆ ಮತ್ತು…. ಮುಂದಿನ ಹಾದಿ

ಅಪರಾಧಿಯು ತಪ್ಪೊಪ್ಪಿಕೊಂಡ ಐದು ತಿಂಗಳ ನಂತರ ತೀರ್ಪು ಹೊರಬಂದಿತು. ರಝುಮಿಖಿನ್ ಸಾಧ್ಯವಾದಾಗಲೆಲ್ಲ ಸೆರೆಮನೆಗೆ ಹೋಗಿ ಅವನ ಭೇಟಿ ಮಾಡುತ್ತಿದ್ದ. ಸೋನ್ಯಾಳೂ ಅಷ್ಟೇ. ದೂರವಾಗುವ ದಿನ ಬಂದಿತು. ಶಾಶ್ವತವಾಗಿ ದೂರವಾಗುತ್ತಿಲ್ಲ ನಾವು ಎಂದು ದುನ್ಯಾ ಆಣೆ ಮಾಡಿ ಹೇಳಿದಳು ಅಣ್ಣನಿಗೆ. ರಝುಮಿಖಿನ್ ಕೂಡ ಅದನ್ನೇ ಹೇಳಿದ. ಕನಿಷ್ಠಪಕ್ಷ ಮುಂದಿನ ಮೂರು ನಾಲ್ಕು ವರ್ಷಗಳಲ್ಲಿ ಏನು ಮಾಡಬೇಕೆಂಬ ಬಗ್ಗೆ ಅವನ ಸ್ನೇಹಪೂರ್ಣ ಮನಸಿನಲ್ಲಿ ಆಗಲೇ ಒಂದು ಯೋಜನೆ ದೃಢವಾಗಿ ರೂಪುತಳೆದಿತ್ತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಕೊನೆಯ ನುಡಿಗಳು.

Read More

ನಾನಿನ್ನು ಹೋಗಿ ಬರ್ತೀನಿ…. ಅಮ್ಮಾ…!

ಹೌದು. ಅವನಿಗೆ ಸಂತೋಷಾಗಿತ್ತು. ಮನೆಯಲ್ಲಿ ಯಾರೂ ಇಲ್ಲದೆ ಇರುವುದರಿಂದ, ಅಮ್ಮನ ಜೊತೆ ಅವನೊಬ್ಬನೇ ಇದ್ದದ್ದರಿಂದ ಬಹಳ ಸಂತೋಷವಾಗಿತ್ತು. ಇದ್ದಕಿದ್ದ ಹಾಗೆ, ಇಷ್ಟೆಲ್ಲ ಭಯಂಕರ ತಿಂಗಳುಗಳ ನಂತರ ಅವನ ಮನಸ್ಸು ಬಹಳ ಮೃದುವಾಗಿತ್ತು. ಅಮ್ಮನ ಕಾಲಿಗೆ ಬಿದ್ದ, ಅಮ್ಮನ ಪಾದಕ್ಕೆ ಮುತ್ತಿಟ್ಟ. ಇಬ್ಬರೂ ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ಈಗ ಅವಳಿಗೆ ಆಶ್ಚರ್ಯವಿರಲಿಲ್ಲ, ಯಾವ ಪ್ರಶ್ನೆಯನ್ನೂ ಕೇಳಲಿಲ್ಲ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಕೊನೆಯ ಬುಲೆಟ್ಟು ಹಾರುವ ಮುನ್ನ….

ದುನ್ಯಾ ಅವನ ಹತ್ತಿರವೇ ನಿಂತಿದ್ದಳು. ಸೇತುವೆಯ ಮೇಲೆ ಕಾಲಿಡುತ್ತಿದ್ದ ಹಾಗೇ ರಾಸ್ಕೋಲ್ನಿಕೋವ್ ಅವಳನ್ನ ನೋಡಿದ್ದ, ಗಮನಿಸದೆ ಮುಂದೆ ಹೋಗಿದ್ದ. ದುನ್ಯಾ ಹೀಗೆ ಯಾವತ್ತೂ ಅವನನ್ನ ರಸ್ತೆಯ ಮೇಲೆ ನೋಡಿರಲಿಲ್ಲ. ಈಗ ಹೀಗೆ ಅವನನ್ನು ನೋಡಿ ಭಯವಾಯಿತು. ನಿಂತಳು. ಹೇಮಾರ್ಕೆಟ್ಟಿನ ಕಡೆಯಿಂದ ಸ್ವಿದ್ರಿಗೈಲೋವ್ ಬರುತ್ತಿರುವುದನ್ನು ದುನ್ಯಾ ತಟ್ಟನೆ ಗಮನಿಸಿದ್ದಳು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಬೆನ್ನುಬಿದ್ದ ಭೂತ ಇವನು!

ಈ ಕೊನೆಯ ಅಂಶದ ಕಾರಣದಿಂದ ಮಾರ್ಫಾ ಮನಸ್ಸಿಗೆ ಬಹಳ ಸಮಾಧಾನ ಆದಹಾಗಿತ್ತು. ಅವಳು ಜಾಣೆ. ನಾನು ಬರಿಯ ಹೆಣ್ಣು ಹುಚ್ಚಿನವನು, ಲಂಗದ ಅಂಚು ಕಂಡರೆ ಆಸೆ ಪಡುವವನು, ಗಂಭೀರವಾದ ಪ್ರೀತಿ ನನ್ನ ಮಟ್ಟಿಗೆ ಸಾಧ್ಯವೇ ಇಲ್ಲ ಅಂದುಕೊಂಡಿದ್ದಳು. ಜಾಣೆ ಹೆಂಗಸು, ಹೊಟ್ಟೆಯ ಕಿಚ್ಚಿನ ಹೆಂಗಸು ಇಬ್ಬರೂ ಬೇರೆ ಬೇರೆ. ಅದೇ ದೊಡ್ಡ ತಾಪತ್ರಯ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ