Advertisement

Tag: Darshan Jayanna

ಭಾರತಕ್ಕೆ ಬಂದ ಕಾಫಿ: ದರ್ಶನ್‌ ಜಯಣ್ಣ ಸರಣಿ

ಮೊದಮೊದಲು ಇದನ್ನು ಶೈತಾನನ ಪೇಯವೆಂದು ನಿರ್ಬಂಧಿಸಿದ್ದ ಒಟ್ಟೋಮನ್ ಸುಲ್ತಾನ ನಂತರದ ದಿನಗಳಲ್ಲಿ ಇದು ಮದ್ಯ ಅಥವಾ ಮದಿರೆಯಂತಲ್ಲ ಎಂದು ಮನಗಂಡು ಸ್ವತಃ ತಾನೇ ಅದನ್ನು ಕುಡಿದು ಪರೀಕ್ಷಿಸಿ ಆ ನಿರ್ಬಂಧವನ್ನು ಸಡಿಲಿಸುತ್ತಾನೆ. ಹಾಗೆಂದ ಮಾತ್ರಕ್ಕೆ ಎಲ್ಲರಿಗೂ ಎಲ್ಲಕಾಲಕ್ಕೂ ಇದು ಸಿಗುವಂತಿರಲಿಲ್ಲ. ಸೂಫಿಗಳು, ಸೈನಿಕರು, ಸಮಾಜದ ಗಣ್ಯರು, ಆಸ್ಥಾನ ವಿದ್ವಾಂಸರು, ಅಧಿಕಾರಿಗಳಿಗೆ ಮತ್ತು ಸಮರಕ್ಕೆ ಹೊರಟವರಿಗೆ ಮಾತ್ರ ಇದು ಸೀಮಿತವಾಗಿತ್ತು ಎಂದರೆ ಇವತ್ತಿಗೆ ನಂಬಲು ಕಷ್ಟವಾಗಬಹುದೇನೋ! ಇದರ ಕಾರಣವೇ ಇಂದು ನಾವು “ಟರ್ಕಿಶ್ ಕಾಫಿಯ” ಬಗ್ಗೆ ಆಗಾಗ ಕೇಳುತ್ತಿರುತ್ತೇವೆ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಹದಿಮೂರನೆಯ ಕಂತು

Read More

ಪುಸ್ತಕ ಕೊಳ್ಳಲು ಹೋದವನಿಗೆ ಲೈಬ್ರರಿ ಕೊಟ್ಟವರು: ದರ್ಶನ್‌ ಜಯಣ್ಣ ಸರಣಿ

ಮಾತು ಕಥೆಯೆಲ್ಲ ಮುಗಿದಮೇಲೆ ಕಾರಿನ ಡಿಕ್ಕಿ ಮತ್ತೊಮ್ಮೆ ತೆಗೆಯಲು ಹೇಳಿದರು. ನಾನೂ ಹಾಗೆಯೇ ಮಾಡಲಾಗಿ ಸಾರಾ ಮತ್ತು ಆಲ್ವಿನ್ ದಂಪತಿಗಳು ತಮ್ಮ ಕಾರಿನಿಂದ ಹಲವು ಬ್ಯಾಗುಗಳಲ್ಲಿದ್ದ ನೂರಾರು ಪುಸ್ತಕಗಳನ್ನು ನಾನು ಕೇಳದೆಯೇ ಉಚಿತವಾಗಿ ನನ್ನ ಕಾರಿಗೆ ಸೇರಿಸಿದರು. ನಾನು ಇವೆಲ್ಲವನ್ನೂ ಯಾವಾಗ ಓದುವುದು ಎಂದು ಯೋಚಿಸುತ್ತಿದ್ದೆ! ಬೇಡವೆಂದರೂ ಅವರು ಕೇಳಲಿಲ್ಲ. ಹೀಗೆ ಪುಸ್ತಕ ಕೊಳ್ಳಲು ಹೊರಟವನಿಗೆ ಲೈಬ್ರರಿಯೇ ದೊರಕಿದ್ದು ಅತ್ಯಂತ ಚೇತೋಹಾರಿ ಸಂಗತಿ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಖಾದ್ರಿಗಳು ಮತ್ತು ಅವರ ಬದುಕು!: ದರ್ಶನ್‌ ಜಯಣ್ಣ ಸರಣಿ

“ನಮ್ಮ ಮನೆಯಲ್ಲಿ ನಾನೇ ಚಿಕ್ಕವನು ಮತ್ತು ಓದಿದ್ದು ನಾನೊಬ್ಬನೇ, ನನ್ನೆಲ್ಲಾ ಒಡಹುಟ್ಟಿದವರು ತೀರಿಹೋಗಿದ್ದಾರೆ. ಹರೆಯದರಲ್ಲೇ ಇಲ್ಲಿಗೆ ಬಂದದ್ದರಿಂದ ಯಾರೊಟ್ಟಿಗೂ ಅಂತಹಾ ಗೆಳೆತನವೂ ಉಳಿದಿಲ್ಲ. ನಮಗೆ ಮಕ್ಕಳಿಲ್ಲವಾದುದರಿಂದ ನನ್ನ ಹೆಂಡತಿಗೂ ಇಲ್ಲಿನ ಜೀವನ, ಅನಾಮಿಕತೆ, ಬೇಡದ ವಿಷಯಗಳಲ್ಲಿ ತಲೆಹಾಕುವ ಜನಗಳ ಕಿರಿ ಕಿರಿ ಯಾವುದೂ ಇಲ್ಲ ಮತ್ತು ಬೇಡವಾಗಿದೆ. ಅವಳಿಗೂ ಅಲ್ಲಿ ಹೇಳಿಕೊಳ್ಳುವ ಬಂಧು- ಬಂಧ ಎರಡೂ ಇಲ್ಲ. ಇಲ್ಲೂ ಇಲ್ಲ ಅನ್ನಿ, ಆದರೆ ನಾವಿಲ್ಲಿಗೆ ಒಗ್ಗಿ ಹೋಗಿದ್ದೇವೆ! ನಾನು ಬದುಕಿರುವವರೆಗೂ ನನ್ನ ವೀಸಾದಲ್ಲಿ ಅವಳಿಲ್ಲಿ ಇರಬಹುದು. ಆಮೇಲಿನದ್ದು ‘ಅಲ್ಲಾಹುವಿನ’ ಇಚ್ಛೆ. ಸತ್ತರೇ ಅವನದ್ದೇ ಮಣ್ಣಿನಲ್ಲಿ ಹೂಳುತಾರೆ. ಮತ್ತೇನು ಬೇಕು?”
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಸೌದಿ ಡೇಟ್ಸ್ – 2: ದರ್ಶನ್‌ ಜಯಣ್ಣ ಸರಣಿ

ಸೌದಿ ಆಧುನಿಕತೆಯನ್ನ ಎಲ್ಲರಂತೆ ಅಪ್ಪಿಕೊಂಡರೂ ಅದನ್ನ ಒಪ್ಪಿಕೊಂಡಿರಲಿಲ್ಲ. ಸಂಪ್ರದಾಯ ಮತ್ತು ಆಧುನಿಕತೆ, ಇಸ್ಲಾಂ ಮತ್ತು ಇತರೆ ಧಾರ್ಮಿಕ ಪದ್ಧತಿಗಳು, ಹಣ ಗಳಿಕೆ ಮತ್ತು ಜಾಗತಿಕ ಪ್ರಭಾವ, ಶಿಕ್ಷಣ ಮತ್ತು ಧರ್ಮ, ಸಂಪನ್ಮೂಲಗಳು ಮತ್ತು ನುರಿತ ಕೆಲಸಗಾರರು, ಕಮಾಂಡ್ ಅಂಡ್ ಕಂಟ್ರೋಲ್ ಇವೇ ಮುಂತಾದ ವಿಷಯಗಳನ್ನ ಎರಡು ದೋಣಿಯ ಪಯಣ ಅಂತಲೇ ಬಹುಶ ಭಾವಿಸಿತ್ತು ಅನ್ನಿಸುತ್ತದೆ. ಇತರೇ ಅರಬ್ ರಾಷ್ಟ್ರಗಳು ಇಲ್ಲಿಗೆ ಬಂದು ನೆಲಸಿ ನೌಕರಿ ಮಾಡುವವರನ್ನು ಮುಕ್ತವಾಗಿ ನಮ್ಮ ದೇಶವನ್ನ ಕಟ್ಟಿದವರಲ್ಲಿ ಇವರ ಪಾಲೂ ಹೆಚ್ಚಿದೆ ಎಂದು ಹೇಳಿದರೆ ಸೌದಿ ಅಂತಾ ಯಾವ ಹೇಳಿಕೆಯನ್ನೂ ಕೊಡುವುದಿಲ್ಲ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ದರ್ಶನ್‌ ಜಯಣ್ಣ ಹೊಸ ಸರಣಿ “ಸೌದಿ ಡೇಟ್ಸ್” ಇಂದಿನಿಂದ….

ನಾನಿಲ್ಲಿ ಇಲ್ಲಿಯತನಕ ಆರು ವರ್ಷ ನಾಲ್ಕು ತಿಂಗಳುಗಳನ್ನ ಕಳೆದಿದ್ದೇನೆ. ನನ್ನ ಕುಟುಂಬದ ಜೊತೆ, ಗೆಳೆಯರ ಜೊತೆ ಈ ದೇಶ ಸುತ್ತಾಡಿದ್ದೇನೆ. ಇಲ್ಲಿನ ಬೃಹತ್ ಕಾರ್ಖಾನೆಗಳನ್ನು ಸ್ವತಃ ನೋಡಿದ್ದೇನೆ. ಇಲ್ಲಿನ ರಣ ಬಿಸಿಲಿನ ಜೊತೆಗೆ ತಂಪಾದ ಹವೆಯನ್ನೂ ಅನುಭವಿಸಿದ್ದೇನೆ. ಮರಳ ಮಳೆ, ನಿಜದ ಮಳೆ ಎರಡಕ್ಕೂ ಸಾಕ್ಷಿಯಾಗಿದ್ದೇನೆ. ಅರಬ್ಬರ ಜೊತೆ ಕೆಲಸ ಮಾಡಿ, ಓಡಾಡಿ ಚರ್ಚಿಸಿದ್ದೇನೆ. ಅವರ ಕನಸು, ವಿಚಾರ, ಜೀವನ ಕ್ರಮ, ಸ್ನೇಹವನ್ನು ಅನುಭವಿಸಿದ್ದೇನೆ.
ಸೌದಿ ಅರೇಬಿಯಾದ ವಾಸಿಯಾದ ದರ್ಶನ್‌ ಜಯಣ್ಣ ಅಲ್ಲಿನ ವಾಸದ ಹಾಗೂ ಆ ದೇಶದ ಕುರಿತು ತಮ್ಮ ಅನುಭವಗಳನ್ನು “ಸೌದಿ ಡೇಟ್ಸ್”‌ ಹೆಸರಿನಲ್ಲಿ ಶನಿವಾರಗಳಂದು, ಹದಿನೈದು ದಿನಗಳಿಗೊಮ್ಮೆ ಬರೆಯಲಿದ್ದಾರೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ