ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು” ಇಂದಿನಿಂದ
ಮನುಷ್ಯನಿಗೆ ಮನುಷ್ಯನೇ ಹುಟ್ಟುವ ತದ್ರೂಪಿತನ ಪುರಾತನ ಕಾಲದಿಂದಲೂ ಕುತೂಹಲ ಮೂಡಿಸಿದೆ. ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ಗ್ರೀಕ್ ಗಣಿತಜ್ಞ-ತತ್ವಶಾಸ್ತ್ರಿ ಪೈಥಾಗೊರಸ್ ಅನುವಂಶೀಯತೆಯ ಸೂತ್ರ ವೀರ್ಯದಲ್ಲಿದೆ ಎನ್ನುತ್ತಾನೆ. ಅವನ ಪ್ರಕಾರ, ವೀರ್ಯ ಪುರುಷನಿಂದ ಹೊರಬರುವ ಮುನ್ನ ದೇಹದ ಎಲ್ಲಾ ಭಾಗಗಳಲ್ಲಿ ಹರಿದು ಆ ಭಾಗಗಳೆಲ್ಲದುರ ಮಾಹಿತಿಯನ್ನೂ ಕಲೆಹಾಕಿ ತದ್ರೂಪಿ ಇರುವ ಬೀಜವಾಗುತ್ತದೆ. ಈ ಬೀಜ ಗರ್ಭವನ್ನು ಸೇರಿದಾಗ, ಆ ತದ್ರೂಪಿಗೆ ಬೇಕಿರುವ ಪೋಷಕಾಂಶ ನೀಡಿ ಅದನ್ನು ದೊಡ್ಡದು ಮಾಡುವುದಷ್ಟೇ ಹೆಣ್ಣಿನ ಕೆಲಸ.
ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”
