Advertisement

Tag: Deepa Phadke

“ನಿಯುಕ್ತಿ ಪುರಾಣ”…: ದೀಪಾ ಫಡ್ಕೆ ಬರಹ

`ನಿಯುಕ್ತಿ ಪುರಾಣ’ದ ಕೃತಿಕಾರ ಮೈಸೂರು ಒಡೆಯರ ಚರಿತ್ರೆಯ ಕೆಲವು ಅಂಗಗಳನ್ನು ಅಥವಾ ಮುಖ್ಯ ಅಂಶಗಳನ್ನು ಇಟ್ಟುಕೊಂಡು ಅದಕ್ಕೆ ಕಲ್ಪನೆಯಿಂದ ರಕ್ತಮಾಂಸವನ್ನು ತುಂಬಿದ್ದಾರೆ. ಹದಿನೈದು, ಹದಿನಾರು ಮತ್ತು ಹದಿನೇಳನೇ ಶತಮಾನದ ಮಹಿಷೂರಿನ ನಾಲ್ವಡಿ ಚಾಮರಾಜ ಒಡೆಯರು, ಐಮಡಿ ಚಾಮರಾಜ ಒಡೆಯರು ಮತ್ತು ರಾಜ ಒಡೆಯರ ಬದುಕನ್ನು ಬೋಳೊಡೆಯ, ಬೆಟ್ಟದೊಡೆಯ ಮತ್ತು ಮುನ್ನೊಡೆಯ ಎನ್ನುವ ಆಡು ಹೆಸರುಗಳನ್ನು ನೀಡಿ ಅವರ ಮೂಲಕ ಪುರಾಣವನ್ನು ಪೌರಾಣಿಕ, ಕಾಲ್ಪನಿಕ, ಜಾನಪದ ಮತ್ತು ಐತಿಹಾಸಿಕ ನೆಲೆಗಳಲ್ಲಿ ಪೋಣಿಸಿ ಕಥನವಾಗಿಸಿದ್ದಾರೆ.
ನಾಗರಾಜ ವಸ್ತಾರೆ ಕಾದಂಬರಿ “ನಿಯುಕ್ತಿ ಪುರಾಣ”ದ ಕುರಿತು ದೀಪಾ ಫಡ್ಕೆ ಬರಹ

Read More

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ ಕಲ್ಲು ಮರಳಾಗಿ ರೂಪಾಂತರ ಹೊಂದುವ ಜಗತ್ತಿನ ವಿಸ್ಮಯದ ನಡೆಯಲ್ಲಿ ಮರಳೂ, ಕಲ್ಲೂ ದೈವವಾಗುವುದರಲ್ಲಿ ಏನು ವಿಶೇಷವಿದೆ! ಪುತಿನ ಅವರಿಲ್ಲಿ ಮೂರ್ತಿಯನ್ನೂ ದೇವರಾಗಿ ನೋಡುತ್ತಿಲ್ಲ, ದೇವರಾಗಲು ಹೊರಟಿರುವ ಕಲ್ಲು ಅವರಿಗೆ ಅಚ್ಚರಿಯಾಗಿ ಕಾಣುತ್ತದೆ.
ಜ. ನಾ. ತೇಜಶ್ರೀ ಬರೆದ `ಅರಿವು-ಇರವುಗಳ ಸನ್ನೆಗೈ ಪುತಿನ ಮಲೆದೇಗುಲ’ ಕೃತಿಯ ಕುರಿತು ದೀಪಾ ಫಡ್ಕೆ ಬರಹ

Read More

ಸ್ಯಾಂಕಿ ಟ್ಯಾಂಕ್ ಎಂಬ ಬೆಂಗಳೂರಿಗರ ಕಾಶಿ!: ದೀಪಾ ಫಡ್ಕೆ ಬರಹ

ಸ್ಯಾಂಕಿಯ ಇನ್ನೊಂದು ಮೂಲೆಗೆ ತಲುಪುವ ಹೊತ್ತಿಗೆ ನೀರಿನಲ್ಲಿರುವ ತುಂಡು ಮರದ ಮೇಲೆ ಈ ನೀರುಕಾಗೆಗಳದು ಸನ್ ಬೇದಿಂಗ್ ನಡೆಯುತ್ತಿರುತ್ತದೆ. ಎರಡೂ ರೆಕ್ಕೆಗಳನ್ನು ಇಷ್ಟಗಲಕ್ಕೆ ಬಿಡಿಸಿಕೊಂಡು ತಿರುಗುವ ಟೇಬಲ್ ಫ್ಯಾನಿನಂತೇ ಸೂರ್ಯನ ಮುಂದೆ ಮೈಯೊಣಗಿಸಿಕೊಂಡು ನಿಂತಿರುತ್ತದೆ. ಇಲ್ಲಿರುವ ಮರಗಳ ಮೇಲಿನ ಸಂಸಾರದ ಕತೆಯೂ ವಿಶಿಷ್ಟವೇ. ಗೂಬೆಗಳ, ಮಿಂಚುಳ್ಳಿಗಳ ಸಂಸಾರ ಬೆಳೆಯುವುದನ್ನು ಕಂಡಿದ್ದೇವೆ. ಒಂದೇ ಒಂದು ಸಾರಿ ಅಚ್ಚ ಹಳದಿ ಬಣ್ಣದ ಗೋಲ್ಡನ್ ಓರಿಯಲ್ ನೋಡಿದ ಧನ್ಯತೆ ನಮ್ಮದು.
ಬೆಂಗಳೂರಿನ ಸುಪ್ರಸಿದ್ಧ ಸ್ಯಾಂಕಿ ಕೆರೆಯ ಕುರಿತು ದೀಪಾ ಫಡ್ಕೆ ಬರಹ ನಿಮ್ಮ ಓದಿಗೆ

Read More

ದೀಪಾ ಫಡ್ಕೆ ಬರೆದ ಈ ಭಾನುವಾರದ ಕಥೆ: ಸಂವಾದಿ

“ಸಂಜನಾಳ ಬೆಳಗುಗಳು ನಂತರ ಮನೋಹರನ ಮೆಸೇಜುಗಳಿಲ್ಲದೇ ಆರಂಭವಾಗುತ್ತಿರಲಿಲ್ಲ. ಬೆಳ್ಬೆಳಿಗ್ಗೆ ಗುಲಾಬಿಗಳ ಗುಛ್ಛ ಬಂದರೆ ನಂತರ ಮೆಸೇಜುಗಳ ಸುರಿಮಳೆ. ಇಡೀ ಪುರಾಣ ಯಾವುದೇ ಮುಚ್ಚು ಮರೆಯಿಲ್ಲದೇ ಹೇಳಿಕೊಳ್ಳುತ್ತಿದ್ದ. ಐಐಎಸ್ಸಿಯ ಮೈಕ್ರೋಬಯಾಲಜಿ ವಿಭಾಗದಲ್ಲಿದ್ದ. ಎಂಥ ಸೆಮಿನಾರೇ ಇರಲಿ, ಲೆಕ್ಚರ್ ಡೆಮಾನ್ಸ್ಟ್ರೇಷನ್ ಇರಲಿ. ಮೆಸೇಜು ತಪ್ಪುತ್ತಿರಲಿಲ್ಲ. ಸಂಜನಾಳೇ ಶೂಟಿಂಗ್ ಎಂದೊ ಎಡಿಟಿಂಗ್ ಎಂದೊ ಒಮ್ಮೊಮ್ಮೆ ಬೇಕೂಂತಲೇ ಉತ್ತರಿಸಲು ನಿಧಾನಿಸಿದರೂ ಬೇಸರವಿಲ್ಲದೆ ಇರುತ್ತಿದ್ದ. `”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ