Advertisement

Tag: Dr. B Janardana Bhat

ಹೊಸಕಾವ್ಯದ ಗುರು ಗೋಪಾಲಕೃಷ್ಣ ಅಡಿಗ

1955 ರ ನಂತರ ಸುಮಾರು ಕಾಲು ಶತಮಾನ ಕಾಲ ಅಡಿಗರು ಕನ್ನಡ ಕಾವ್ಯ ಲೋಕದಲ್ಲಿ ಗುರುಸಮಾನರಾಗಿ ಸ್ವೀಕರಿಸಲ್ಪಟ್ಟರು. ಹೊಸ ಪೀಳಿಗೆಯ ಸಾಹಿತಿಗಳು ಅವರ ಪ್ರಭಾವಕ್ಕೆ ಒಳಗಾದರು. ಅಡಿಗರ ಕಾವ್ಯವನ್ನು ಗಮನಿಸುವಾಗ ಅವರು ನವೋದಯ, ಪ್ರಗತಿಶೀಲ ಮತ್ತು ನವ್ಯ – ಈ ಮೂರೂ ಮಾರ್ಗಗಳಿಗೆ ಸೇರುವ ಕವಿತೆಗಳನ್ನು ಬರೆದು ಬೆಳೆದವರು ಎನ್ನುವುದು ತಿಳಿಯುತ್ತದೆ. ತಮ್ಮ ಹಿಂದಿನ ಕಾವ್ಯಮಾರ್ಗಗಳನ್ನು ಅರೆದು ಕುಡಿದವರಾದ ಕಾರಣ ಅಡಿಗರು ಅವುಗಳ ಮಿತಿಯನ್ನು ಹೇಳಿದಾಗ ಅದಕ್ಕೊಂದು ಅಧಿಕೃತತೆ ಪ್ರಾಪ್ತವಾಯಿತು ಮತ್ತು ಕವಿಗಳು ಅವರನ್ನು ಅನುಸರಿಸಿದರು. ಕರಾವಳಿಯ ಕವಿರಾಜಮಾರ್ಗ ಸರಣಿಯಲ್ಲಿ ಡಾ.ಬಿ. ಜನಾರ್ದನ ಭಟ್ ಹೊಸಕಾವ್ಯದ ಗುರು ಮೊಗೇರಿ ಗೋಪಾಲಕೃಷ್ಣ ಅಡಿಗರ ಕುರಿತು ಬರೆದಿದ್ದಾರೆ.

Read More

ನವೋದಯ ದೀಪಕ್ಕೆ ಎಣ್ಣೆ ಹೊಯ್ದ ಕವಿ

ಸೇಡಿಯಾಪು ಕೃಷ್ಣಭಟ್ಟರಿಗೆ ಮಂಗಳೂರಿನಲ್ಲಿ ಪಂಡಿತ ಮುಳಿಯ ತಿಮ್ಮಪ್ಪಯ್ಯನವರ ಮಾರ್ಗದರ್ಶನ ಮತ್ತು ತರುಣ ಕವಿ ಕಡೆಂಗೊಂಡ್ಲು ಶಂಕರಭಟ್ಟರ ಗೆಳೆತನದ ಲಾಭವಾಯಿತು. ಅವರಿಬ್ಬರಿಂದ ಪ್ರೇರಣೆ ಪಡೆದು, ಮದ್ದಿನಂಗಡಿಯಲ್ಲಿ ಕುಳಿತೇ ಕನ್ನಡ – ಸಂಸ್ಕೃತ ಭಾಷೆಗಳನ್ನು ಖಾಸಗಿಯಾಗಿ ಅಧ್ಯಯನ ನಡೆಸಿ, ಮದರಾಸು ಸರ್ಕಾರ ನಡೆಸುತ್ತಿದ್ದ ‘ವಿದ್ವಾನ್’ ಪರೀಕ್ಷೆಯಲ್ಲಿ ಪಾಸಾದರು. ಆ ಪದವಿಯ ಬಲದಿಂದ 1929 ರಲ್ಲಿ ಸೈಂಟ್ ಅಲೋಷಿಯಸ್ ಹೈಸ್ಕೂಲಿನಲ್ಲಿ ಕನ್ನಡ ಪಂಡಿತರಾಗಿ ಸೇರಿಕೊಂಡು ಸುಮಾರು ಇಪ್ಪತ್ತು ವರ್ಷಗಳ ಕಾಲ ಕೆಲಸ ಮಾಡಿದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ