Advertisement

Tag: Dr. rajendrakumar Mudnal

 ಬಾಂಧವ್ಯದ ಕುಲುಮೆಯಲ್ಲಿ ಅರಳುವ ಸ್ವಾತಂತ್ರ್ಯದ ಓಟ…: ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

ಶಿಬಿರದಲ್ಲಿನ ಜನರ ಆತಂಕ ಭಾರತ ಸರ್ಕಾರದ ಗಾಳಿಗೋಪುರದಂತ ಆಶ್ವಾಸನೆಗಳ ಜೊತೆಗೆ ‘ಬೋಲೋ ಭಾರತ್ ಮಾತಾ ಕಿ ಜೈ’ ಎಂಬ ಕೂಗು, ರಣಭೀಕರದಂತೆ ಕೇಳಿಸುತ್ತಿತ್ತು. ಪಾಕಿಸ್ತಾನದಲ್ಲಿ ಗಳಿಸಿದ ಆಸ್ತಿಯನ್ನು ಅಲ್ಲೇ ಬಿಟ್ಟು ಬಂದವರ ನೋವು ಹೇಳತೀರದು. ಮತ್ತೆ ಭಾರತದಲ್ಲಿ ಹೊಸ ಜೀವನ ಕಟ್ಟಿಕೊಳ್ಳಬೇಕೆಂಬ ಹೆಜ್ಜೆಯ ಭಾರ ಅಧಿಕವಾಗಿತ್ತು. ಆಸ್ತಿ ಪಾಸ್ತಿಗಿಂತ ಹಿರಿಯರು ಬಾಳಿ ಬದುಕಿದ ಮನೆಯನ್ನು ಬಿಟ್ಟು ಬಂದ ಹಿಂದೂ ಮುಸ್ಲಿಮರ ಸಂಕಟದ ಸ್ಥಿತಿ.
“ಸ್ವಾತಂತ್ರ್ಯದ ಓಟ…” ನಾಟಕದ ಕುರಿತು ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

Read More

ಸರ್ಕಲ್ ಆಫ್ ಲೈಫ್- ಬಾಲ್ಯ, ಹದಿಹರೆಯ, ವೃದ್ಧಾಪ್ಯಗಳ ಆಲಿಂಗನ: ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

ಮಾತೇ ಮಾಣಿಕ್ಯ ಎನ್ನುವವರಿಗೆ ಮಾತು ಮಾಣಿಕ್ಯವಲ್ಲ ಮೌನ ಮಾಣಿಕ್ಯ ಎಂಬ ಸೂತ್ರಕ್ಕೆ ತಕ್ಕಂತೆ ಮಕ್ಕಳು ಅಣಿಯಾಗಿದ್ದರು. ಬೊಂಬೆ ಆಟದಲ್ಲಿ ಪ್ರಾವಿಣ್ಯತೆ ಪಡೆದ ಕ್ರಿಯಾಶೀಲರು ಗೊಂಬೆಯನ್ನು ಬಹಳ ಅಮೋಘವಾಗಿ ಓಡುವುದನ್ನು, ನಡೆಯುವುದನ್ನು, ಹಾರಾಡುವುದನ್ನು, ನಿಧಾನಗತಿಯ ಚಲನೆಯನ್ನು, ಬೈಕ್ ಸವಾರಿ ಮಾಡುವುದನ್ನು, ಕನಸು ಕಾಣುವ ವೈಶಿಷ್ಟ್ಯತೆಯನ್ನು ಅದ್ಭುತವಾಗಿ ರಚಿಸಿಕೊಂಡಿದ್ದರು. ಹದಿಹರೆಯದಲ್ಲಿರುವಾಗ ಮನುಷ್ಯನ ಆಸೆ ಆಕಾಂಕ್ಷೆಗಳು ಕೇವಲ ಮಾತುಗಳಲ್ಲಿಲ್ಲ ಭಾವನೆಗಳಲ್ಲಿವೆ.
ಕಲ್ಬುರ್ಗಿ ನಾಟಕೋತ್ಸವದಲ್ಲಿ ಪ್ರದರ್ಶನಗೊಂಡ ‘ಸರ್ಕಲ್ ಆಫ್ ಲೈಫ್’ ಪಪೇಟ್ ಶೋ ಕುರಿತು ಡಾ. ರಾಜೇಂದ್ರಕುಮಾರ್‌ ಮುದ್ನಾಳ್‌ ಬರಹ

Read More

ವಿಫುಲ ರೂಪ ಧಾರಿಣಿ ಹುಡುಕಾಡುತಿದೆ ಮನುಷ್ಯ ಪ್ರೀತಿಗಾಗಿ….: ಡಾ. ರಾಜೇಂದ್ರಕುಮಾರ್  ಕೆ. ಮುದ್ನಾಳ್ ಬರಹ

ಇಂದಿನ ಆಧುನಿಕ ತಂತ್ರಜ್ಞಾನ ಕೃತಕ ಬುದ್ಧಿಮತ್ತೆಯಲ್ಲಿ ನಿಸರ್ಗದ ಚೈತನ್ಯವನ್ನು ನೋಡುವುದನ್ನು ಮರೆತುಬಿಟ್ಟಿದ್ದೇವೆ. ಗುಬ್ಬಿ ಗೂಡು ಕಟ್ಟುವುದನ್ನು,ಸೂರ್ಯೋದಯ ಚಂದ್ರೋದಯಗಳ ನಯನ ಮನೋಹರ ದೃಶ್ಯವನ್ನು, ಕರು ಆಕಳ ಕೆಚ್ಚಲನ್ನು ಹುಡುಕುವ ಹೊತ್ತನ್ನು ಮರೆತುಬಿಟ್ಟಿದ್ದೇವೆ. ಆಕಾಶದಿಂದ ಜಾರುವ ಮಳೆ, ಕಾಮನಬಿಲ್ಲು, ಇಬ್ಬನಿಯ ರೂಪ, ಪ್ರೀತಿ -ವಿರಹಗಳ ನಡುವಿನ ಬಾಂಧವ್ಯ, ಮೌನ ರಹಸ್ಯಗಳ ನಡುವಿನ ವಿಸ್ಮಯ. ಇವುಗಳ ನಡುವಿನ ಪ್ರೀತಿಯನ್ನು ಗಳಿಸುವ, ಬೆಳೆಸುವ, ಉಳಿಸುವ ದಾಹ ನಮ್ಮದಾಗಲಿ ಎಂಬ ಆಶಯ ವಿಫುಲ ರೂಪ ಧಾರಣಿಯದು. ಏಕೆಂದರೆ ‘ದಾರಿ ನೂರಾರಿವೆ ಬಿಡುಗಡೆಯ ಬೆಳಕಿನ ಅರಮನೆಗೆ’ ಎಂಬ ಸಾಲುಗಳು ನಮ್ಮಲ್ಲಿ ಪ್ರೀತಿಯ ಬುಗ್ಗೆ ಚಿಮ್ಮುವಂತಾಗಲಿ.
ಜಿ.ಎಸ್.‌ ಶಿವರುದ್ರಪ್ಪನವರ ಕವಿತೆಗಳನ್ನು ಆಧರಿಸಿದ ‘ವಿಫುಲ ರೂಪ ದಾರಿಣಿ’ ಕಾವ್ಯ ಅಭಿನಯದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ

Read More

ಕನ್ನಡ ಕಾವ್ಯದಲ್ಲಿ ಸಮಾಧಾನದ ಪ್ರಭು ಯೇಸುವಿನ ಆರಾಧನೆ: ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

ಯಾರು ಏನೇ ಅಂದರೂ ಯಾರು ಏನೇ ತಿಳಿದುಕೊಂಡರು ನಾವು ನಂಬಿರುವ ಪರಿಶುದ್ಧ ಮೌಲ್ಯಗಳೊಂದಿಗೆ ಜೀವಿಸಿದರೆ ಸಕಲವೂ ಸಾಧ್ಯ ಎಂಬುದನ್ನು ಮಹಾತ್ಮರು ತಿಳಿಸಿದ್ದಾರೆ. ಮೌಲ್ಯಗಳು ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಕುಸಿಯುತ್ತಿವೆ. ಅದನ್ನು ಹೇಗೆ ಕಾಪಾಡಿಕೊಳ್ಳಬೇಕು, ಸುಧಾರಿಸಿಕೊಳ್ಳಬೇಕು ಹೇಗೆ ಪುನರ್ ಸ್ಥಾಪಿಸಿಕೊಳ್ಳಬೇಕೆಂಬ ಗೊಂದಲದಲ್ಲಿದ್ದೇವೆ. ಮೌಲ್ಯಗಳು ಇಂದು ಬರಿ ಬಾಯಿ ಮಾತಾಗಿವೆ ಹೊರತು ಪ್ರಾಯೋಗಿಕವಾಗಿ ಮೌನವಾಗಿವೆ ಎಂಬ ಅಳಲು ಕವಿತೆಯದು.
ಕನ್ನಡ ಕಾವ್ಯದಲ್ಲಿ ಯೇಸುವಿನ ಕುರಿತ ಬರೆಯಲ್ಪಟ್ಟ ಕವಿತೆಗಳ ಕುರಿತು ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

Read More

ವಿಷಮಯ ವಿಶ್ವದ ವಿಷಾದ ಗಾಥೆ: ನಾಗೇಶ್‌ ಹೆಗಡೆ ಕೃತಿಯ ಕುರಿತು ಡಾ. ರಾಜೇಂದ್ರಕುಮಾರ್ ಕೆ.ಮುದ್ನಾಳ್ ಬರಹ

ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿ ತನ್ನ ಮಕ್ಕಳಿಗಾಗಿ ಆಸ್ತಿ, ಐಶ್ವರ್ಯ ಸಂಪತ್ತುಗಳನ್ನೆಲ್ಲ ಮಾಡುತ್ತಾನೆ. ಆದರೆ ಪ್ರಕೃತಿ ಮಾನವನಿಗೆ ಕೊಟ್ಟ ನಿಸರ್ಗದತ್ತವಾದ ಸಂಪತ್ತನ್ನೆಲ್ಲ ಲೂಟಿ ಮಾಡುತ್ತಿದ್ದಾನೆ. ನಾವು ಪ್ರಕೃತಿಗೆ ಕೊಡಬೇಕಾದ ಗೌರವವನ್ನು ಕೊಡದೆ ಅವಿಧೇಯತೆಯಿಂದ ನಡೆಸಿಕೊಳ್ಳುತ್ತಾ ಬಂದಿದ್ದೇವೆ. ಪ್ರಕೃತಿಯ ಮುನಿಸನ್ನು ಎದುರಿಸಲು ನಾವು ಸಿದ್ಧರಿದ್ದೇವೆಯೇ, ಅದು ಸಾಧ್ಯವೇ? ಪ್ರಕೃತಿಯ ವಿರುದ್ಧ ಮನುಷ್ಯ ಗೆದ್ದಿದ್ದೇ ಆದರೆ ಮುಂದೆ ಅವನಿಗೆ ಸೋಲು ಕಟ್ಟಿಟ್ಟ ಬುತ್ತಿ’ ಎಂದು ಚಿಂತಕ ಯೂಜಿನ್ ಶುಮಾಕರ್‌ರ ಮಾತನ್ನು ಲೇಖಕರು ಉಲ್ಲೇಖಿಸುತ್ತಾರೆ.
ನಾಗೇಶ್‌ ಹೆಗಡೆ ಬರೆದ ‘ಪರಿಸರದ ಮಹಾ ದುರಂತಗಳು’ ಕೃತಿಯ ಕುರಿತು ಡಾ. ರಾಜೇಂದ್ರಕುಮಾರ್ ಕೆ.ಮುದ್ನಾಳ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ